<p><strong>ನರಗುಂದ: ‘</strong>ಸಾವಿತ್ರಿಬಾಯಿ ಫುಲೆ ಅವರು ದೇಶಕ್ಕೆ ಸಲ್ಲಿಸಿದ ಶಿಕ್ಷಣ ಸೇವೆ ಶ್ಲಾಘನೀಯ. ಇಂಥಹ ಸಂದರ್ಭದಲ್ಲಿ ವೈ.ಎಂ. ಭಜಂತ್ರಿ ಅವರ ಅಭಿನಂದನೆ ಸಮಾರಂಭ ಸಂತಸ ತಂದಿದೆ’ ಎಂದು ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ, ಸಾವಿತ್ರಿಬಾಯಿ ಫುಲೆ ಅವರ ಜಯಂತಿ, ವೈ.ಎಂ. ಭಜಂತ್ರಿ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಧಾರವಾಡ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಜಿನದತ್ತ ಹಡಗಲಿ, ‘35 ವರ್ಷಗಳ ಕಾಲ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ವೈ.ಎಂ. ಭಜಂತ್ರಿ ಅವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತ ಶೈಕ್ಷಣಿಕ ಸೇವೆ ಸಲ್ಲಿಸಿದ್ದಾರೆ’ ಎಂದು ಹೇಳಿದರು.</p>.<p>ವೈ.ಎಂ. ಭಜಂತ್ರಿ ಮಾತನಾಡಿ, ‘1991ರಲ್ಲಿ ಶೈಕ್ಷಣಿಕ ಸೇವೆ ಆರಮಭಿಸಿದ ನಾನು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಭಾವಿಸಿ ಶಿಕ್ಷಣ ನೀಡಿದ್ದೇನೆ’ ಎಂದರು.</p>.<p>ಅಖಿಲ ಭಾರತ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಅಧ್ಯಕ್ಷ ಅರ್ಜುನ ಗೊಳಸಂಗಿ, ವೈ.ಎನ್. ಪಾಪಣ್ಣವರ ಮಾತನಾಡಿದರು. ಸಂಜೀವ ಜೋಗಿ, ಸ್ನೇಹಾ ಜೋಗಿ ವಚನ ಸಾಹಿತ್ಯ ಪ್ರಸ್ತುತ ಪಡಿಸಿದರು. ಈ ವೇಳೆ ಶಿರೋಳದ ಮಾದಾರ ಚನ್ನಯ್ಯ ಐಟಿಐ ಕಾಲೇಜು ಪ್ರಾಚಾರ್ಯ ಬಿ.ಎಸ್. ಸಾಲಿಮಠ, ನಿವೃತ್ತ ಪ್ರಾಧ್ಯಾಪಕ ಪಿ.ಎಸ್. ಅಣ್ಣಿಗೇರಿ, ಶಿಕ್ಷಕರಾದ ಜಯಶ್ರೀ ವಸ್ತ್ರದ, ಎನ್.ಬಿ. ಗಾಣಿಗೇರ ಅವರನ್ನು ಸನ್ಮಾನಿಸಲಾಯಿತು.</p>.<p>ಪಿ.ಎಫ್. ಆನಂದ್ರಬಾವಿ, ಮಹಾಂತೇಶ ಹಿರೇಮಠ, ಜಿ.ಬಿ. ಧೂಪದ, ಶಿವಾನಂದ ಜೋಗಿ, ದಿಲೀಪ್ ನದಾಫ್ ಇದ್ದರು. ಭೀಮಣ್ಣ ಕುರಿ ಸ್ವಾಗತಿಸಿದರು. ಆರ್.ಬಿ. ಚಿನಿವಾಲರ ನಿರೂಪಿಸಿದರು. ರಮೇಶ ಐನಾಪುರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ: ‘</strong>ಸಾವಿತ್ರಿಬಾಯಿ ಫುಲೆ ಅವರು ದೇಶಕ್ಕೆ ಸಲ್ಲಿಸಿದ ಶಿಕ್ಷಣ ಸೇವೆ ಶ್ಲಾಘನೀಯ. ಇಂಥಹ ಸಂದರ್ಭದಲ್ಲಿ ವೈ.ಎಂ. ಭಜಂತ್ರಿ ಅವರ ಅಭಿನಂದನೆ ಸಮಾರಂಭ ಸಂತಸ ತಂದಿದೆ’ ಎಂದು ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ, ಸಾವಿತ್ರಿಬಾಯಿ ಫುಲೆ ಅವರ ಜಯಂತಿ, ವೈ.ಎಂ. ಭಜಂತ್ರಿ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಧಾರವಾಡ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಜಿನದತ್ತ ಹಡಗಲಿ, ‘35 ವರ್ಷಗಳ ಕಾಲ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ವೈ.ಎಂ. ಭಜಂತ್ರಿ ಅವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತ ಶೈಕ್ಷಣಿಕ ಸೇವೆ ಸಲ್ಲಿಸಿದ್ದಾರೆ’ ಎಂದು ಹೇಳಿದರು.</p>.<p>ವೈ.ಎಂ. ಭಜಂತ್ರಿ ಮಾತನಾಡಿ, ‘1991ರಲ್ಲಿ ಶೈಕ್ಷಣಿಕ ಸೇವೆ ಆರಮಭಿಸಿದ ನಾನು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಭಾವಿಸಿ ಶಿಕ್ಷಣ ನೀಡಿದ್ದೇನೆ’ ಎಂದರು.</p>.<p>ಅಖಿಲ ಭಾರತ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಅಧ್ಯಕ್ಷ ಅರ್ಜುನ ಗೊಳಸಂಗಿ, ವೈ.ಎನ್. ಪಾಪಣ್ಣವರ ಮಾತನಾಡಿದರು. ಸಂಜೀವ ಜೋಗಿ, ಸ್ನೇಹಾ ಜೋಗಿ ವಚನ ಸಾಹಿತ್ಯ ಪ್ರಸ್ತುತ ಪಡಿಸಿದರು. ಈ ವೇಳೆ ಶಿರೋಳದ ಮಾದಾರ ಚನ್ನಯ್ಯ ಐಟಿಐ ಕಾಲೇಜು ಪ್ರಾಚಾರ್ಯ ಬಿ.ಎಸ್. ಸಾಲಿಮಠ, ನಿವೃತ್ತ ಪ್ರಾಧ್ಯಾಪಕ ಪಿ.ಎಸ್. ಅಣ್ಣಿಗೇರಿ, ಶಿಕ್ಷಕರಾದ ಜಯಶ್ರೀ ವಸ್ತ್ರದ, ಎನ್.ಬಿ. ಗಾಣಿಗೇರ ಅವರನ್ನು ಸನ್ಮಾನಿಸಲಾಯಿತು.</p>.<p>ಪಿ.ಎಫ್. ಆನಂದ್ರಬಾವಿ, ಮಹಾಂತೇಶ ಹಿರೇಮಠ, ಜಿ.ಬಿ. ಧೂಪದ, ಶಿವಾನಂದ ಜೋಗಿ, ದಿಲೀಪ್ ನದಾಫ್ ಇದ್ದರು. ಭೀಮಣ್ಣ ಕುರಿ ಸ್ವಾಗತಿಸಿದರು. ಆರ್.ಬಿ. ಚಿನಿವಾಲರ ನಿರೂಪಿಸಿದರು. ರಮೇಶ ಐನಾಪುರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>