<p><strong>ಮುಂಡರಗಿ</strong>: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಪ್ರಬುದ್ಧ ನಡವಳಿಕೆ ಹಾಗೂ ಅಸಮಂಜಸ ಹೇಳಿಕೆಗಳು ಬಿಜೆಪಿಗೆ ವರದಾನವಾಗಿದ್ದು, ಬಿಜೆಪಿ ಗೆಲುವಿಗೆ ಅವರು ಪ್ರಮುಖ ಕಾರಣರಾಗಿದ್ದಾರೆ. ಹೀಗಾಗಿ ಬಿಜೆಪಿಯು ಅವರಿಗೆ ಅಭಿನಂದನೆ ಸಲ್ಲಿಸುತ್ತದೆ' ಎಂದು ಶಾಸಕ ಡಾ.ಚಂದ್ರು ಲಮಾಣಿ ವ್ಯಂಗ್ಯವಾಡಿದರು.</p>.<p>ಬಿಹಾರದಲ್ಲಿ ಎನ್.ಡಿ.ಎ. ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಶನಿವಾರ ಇಲ್ಲಿಯ ಬೃಂದಾವನ ವೃತ್ತದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಬಿಹಾರದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಎದುರಿಸಿದ ಎಲ್ಲ ಚುನಾವಣೆಗಳಲ್ಲಿಯೂ ಅಭ್ಯರ್ಥಿಗಳು ಸೋತಿದ್ದು, ಅದು ಬಿಜೆಪಿಗೆ ನೆರವಾಗಿದೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರವು ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ರಾಜ್ಯದ ಜನತೆ ನಿತ್ಯ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದು ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಕೆ.ವಿ.ಹಂಚಿನಾಳ, ಆನಂದಗೌಡ ಪಾಟೀಲ, ಎಸ್.ವಿ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ನಾಗೇಶ ಹುಬ್ಬಳ್ಳಿ, ಮಂಜುನಾಥ ಮುಧೋಳ, ಎಸ್.ಎಸ್.ಗಡ್ಡದ, ಎಲ್ಲಪ್ಪ ಗಣಾಚಾರಿ, ಧ್ರುವಕುಮಾರ ಹೊಸಮನಿ, ಅರುಣಾ ಪಾಟೀಲ, ಪವಿತ್ರಾ ಕಲ್ಲಕುಟಿಗರ, ಪುಷ್ಪಾ ಉಕ್ಕಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಪ್ರಬುದ್ಧ ನಡವಳಿಕೆ ಹಾಗೂ ಅಸಮಂಜಸ ಹೇಳಿಕೆಗಳು ಬಿಜೆಪಿಗೆ ವರದಾನವಾಗಿದ್ದು, ಬಿಜೆಪಿ ಗೆಲುವಿಗೆ ಅವರು ಪ್ರಮುಖ ಕಾರಣರಾಗಿದ್ದಾರೆ. ಹೀಗಾಗಿ ಬಿಜೆಪಿಯು ಅವರಿಗೆ ಅಭಿನಂದನೆ ಸಲ್ಲಿಸುತ್ತದೆ' ಎಂದು ಶಾಸಕ ಡಾ.ಚಂದ್ರು ಲಮಾಣಿ ವ್ಯಂಗ್ಯವಾಡಿದರು.</p>.<p>ಬಿಹಾರದಲ್ಲಿ ಎನ್.ಡಿ.ಎ. ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಶನಿವಾರ ಇಲ್ಲಿಯ ಬೃಂದಾವನ ವೃತ್ತದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಬಿಹಾರದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಎದುರಿಸಿದ ಎಲ್ಲ ಚುನಾವಣೆಗಳಲ್ಲಿಯೂ ಅಭ್ಯರ್ಥಿಗಳು ಸೋತಿದ್ದು, ಅದು ಬಿಜೆಪಿಗೆ ನೆರವಾಗಿದೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರವು ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ರಾಜ್ಯದ ಜನತೆ ನಿತ್ಯ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದು ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಕೆ.ವಿ.ಹಂಚಿನಾಳ, ಆನಂದಗೌಡ ಪಾಟೀಲ, ಎಸ್.ವಿ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ನಾಗೇಶ ಹುಬ್ಬಳ್ಳಿ, ಮಂಜುನಾಥ ಮುಧೋಳ, ಎಸ್.ಎಸ್.ಗಡ್ಡದ, ಎಲ್ಲಪ್ಪ ಗಣಾಚಾರಿ, ಧ್ರುವಕುಮಾರ ಹೊಸಮನಿ, ಅರುಣಾ ಪಾಟೀಲ, ಪವಿತ್ರಾ ಕಲ್ಲಕುಟಿಗರ, ಪುಷ್ಪಾ ಉಕ್ಕಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>