<p><strong>ಗದಗ</strong>: ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಇಲ್ಲಿನ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.</p>.<p>ಗದಗ ಜಿಲ್ಲೆ ನರಗುಂದ ಪಟ್ಟಣದ ಸುಜಾತಾ ಜೋಗಣ್ಣವರ (22) ಮೃತಪಟ್ಟ ಬಾಣಂತಿ.</p>.<p>‘ಹೆರಿಗೆಗಾಗಿ ನರಗುಂದದಿಂದ ಗದಗ ಜಿಲ್ಲಾ ಆಸ್ಪತ್ರೆಗೆ ಸುಜಾತಾ ಅವರನ್ನು ಕರೆತರಲಾಗಿತ್ತು. ಭಾನುವಾರ ಬೆಳಿಗ್ಗೆ ಹೆರಿಗೆಯಾದ ಒಂದು ತಾಸಿನಲ್ಲಿ ಬಾಣಂತಿ ತಲೆ ಸುತ್ತಿ ಬಿದ್ದಿದ್ದಾರೆ. ವೈದ್ಯರು ತಕ್ಷಣ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಬಾಣಂತಿ ಮೃತಪಟ್ಟಿದ್ದಾರೆ’ ಎಂದು ಸಂಬಂಧಿ ದತ್ತು ಜೋಗಣ್ಣವರ ಆರೋಪಿಸಿದ್ದಾರೆ.</p>.<p>‘ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಇದ್ದರೂ ರೋಗಿಗಳ ಕಡೆಯವರೇ ರಕ್ತ ಹೊಂದಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿ ಕಾಡಿಸುತ್ತಾರೆ. ಕಷ್ಟಪಟ್ಟು ರಕ್ತ ಹೊಂದಿಸಿಕೊಟ್ಟರೂ ಬಾಣಂತಿಯನ್ನು ಉಳಿಸಿಕೊಡಲಿಲ್ಲ’ ಎಂದು ದೂರಿದರು.</p>.<p>‘ದೇಹದ ರಕ್ತನಾಳದಲ್ಲಿ ರಕ್ತಸ್ರಾವ ಮತ್ತು ರಕ್ತ ಹೆಪ್ಪುಗಟ್ಟುವಿಕೆಯಿಂದ (ಡಿಐಸಿ) ಬಾಣಂತಿ ಮೃತಪಟ್ಟಿದ್ದಾರೆ. ಗರ್ಭಿಣಿ ಇದ್ದಾಗ ಸರಿಯಾಗಿ ತೋರಿಸಿಕೊಂಡಿಲ್ಲ. ಹೆರಿಗೆಯಲ್ಲಿ ಹೈರಿಸ್ಕ್ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಈ ರೀತಿಯ ಸಮಸ್ಯೆ ಕಾರಣಕ್ಕೆ ಹೆರಿಗೆ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟರು. ಮಗು ಆರೋಗ್ಯದಿಂದ ಇದೆ’ ಎಂದು ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಇಲ್ಲಿನ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.</p>.<p>ಗದಗ ಜಿಲ್ಲೆ ನರಗುಂದ ಪಟ್ಟಣದ ಸುಜಾತಾ ಜೋಗಣ್ಣವರ (22) ಮೃತಪಟ್ಟ ಬಾಣಂತಿ.</p>.<p>‘ಹೆರಿಗೆಗಾಗಿ ನರಗುಂದದಿಂದ ಗದಗ ಜಿಲ್ಲಾ ಆಸ್ಪತ್ರೆಗೆ ಸುಜಾತಾ ಅವರನ್ನು ಕರೆತರಲಾಗಿತ್ತು. ಭಾನುವಾರ ಬೆಳಿಗ್ಗೆ ಹೆರಿಗೆಯಾದ ಒಂದು ತಾಸಿನಲ್ಲಿ ಬಾಣಂತಿ ತಲೆ ಸುತ್ತಿ ಬಿದ್ದಿದ್ದಾರೆ. ವೈದ್ಯರು ತಕ್ಷಣ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಬಾಣಂತಿ ಮೃತಪಟ್ಟಿದ್ದಾರೆ’ ಎಂದು ಸಂಬಂಧಿ ದತ್ತು ಜೋಗಣ್ಣವರ ಆರೋಪಿಸಿದ್ದಾರೆ.</p>.<p>‘ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಇದ್ದರೂ ರೋಗಿಗಳ ಕಡೆಯವರೇ ರಕ್ತ ಹೊಂದಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿ ಕಾಡಿಸುತ್ತಾರೆ. ಕಷ್ಟಪಟ್ಟು ರಕ್ತ ಹೊಂದಿಸಿಕೊಟ್ಟರೂ ಬಾಣಂತಿಯನ್ನು ಉಳಿಸಿಕೊಡಲಿಲ್ಲ’ ಎಂದು ದೂರಿದರು.</p>.<p>‘ದೇಹದ ರಕ್ತನಾಳದಲ್ಲಿ ರಕ್ತಸ್ರಾವ ಮತ್ತು ರಕ್ತ ಹೆಪ್ಪುಗಟ್ಟುವಿಕೆಯಿಂದ (ಡಿಐಸಿ) ಬಾಣಂತಿ ಮೃತಪಟ್ಟಿದ್ದಾರೆ. ಗರ್ಭಿಣಿ ಇದ್ದಾಗ ಸರಿಯಾಗಿ ತೋರಿಸಿಕೊಂಡಿಲ್ಲ. ಹೆರಿಗೆಯಲ್ಲಿ ಹೈರಿಸ್ಕ್ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಈ ರೀತಿಯ ಸಮಸ್ಯೆ ಕಾರಣಕ್ಕೆ ಹೆರಿಗೆ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟರು. ಮಗು ಆರೋಗ್ಯದಿಂದ ಇದೆ’ ಎಂದು ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>