<p><strong>ನರೇಗಲ್:</strong> ‘ರಾಜ್ಯದ ಅನೇಕ ಮಠಗಳು ಅನ್ನ, ಅಕ್ಷರ, ದಾಸೋಹಕ್ಕೆ ಹೆಸರಾಗಿದ್ದರೆ, ನಿಡಗುಂದಿಕೊಪ್ಪದ ಶ್ರೀಮಠವು ಆರೋಗ್ಯ ದಾಸೋಹಕ್ಕೆ ಹೆಸರಾಗಿದೆ’ ಎಂದು ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.</p>.<p>ಸಮೀಪದ ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲಿಂ.ಚನ್ನಬಸವ ಸ್ವಾಮೀಜಿ 42ನೇ ಹಾಗೂ ಲಿಂ.ಶಿವಬಸವ ಸ್ವಾಮೀಜಿ ಅವರ 10ನೇ ಪುಣ್ಯಸ್ಮರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಈ ಭಾಗದ ಜನರ ಆರೋಗ್ಯ ಕಾಪಾಡಲೆಂದೆ ಹಾನಗಲ್ ಗುರುಕುಮಾರೇಶ್ವರ ಅವರು ಮಠ ಸ್ಥಾಪಿಸಿ ಚನ್ನಬಸವ ಸ್ವಾಮೀಜಿ ಅವರಿಗೆ ಅನುಗ್ರಹಿಸಿದ್ದಾರೆ. ಮಠವು ಇಂದಿಗೂ ಆರೋಗ್ಯ ಸೇವೆ ಮುಂದುವರೆಸಿಕೊಂಡು ಬಂದಿದೆ’ ಎಂದರು.</p>.<p>ಪೀಠಾಧಿಪತಿ ಅಭಿನವ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡಿ, ‘ಕೆಲವೇ ದಿನಗಳಲ್ಲಿ ಶ್ರೀಮಠದಿಂದ ಚನ್ನಚೇತನ ಗುರುಕುಲ ಶಾಲೆ ಪ್ರಾರಂಭವಾಗಲಿದೆ. 90 ದಿನಗಳ ಉಚಿತ ಹೊಲಿಗೆ ತರಬೇತಿ ನಡೆಯುತ್ತಿದ್ದು, ಜನರು ಪ್ರಯೋಜವ ಪಡೆದುಕೊಳ್ಳಬೇಕು’ ಎಂದರು. </p>.<p>ಅಧ್ಯಕ್ಷತೆ ವಹಿಸಿದ ರೋಣ ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ, ಅಕ್ಕಿಆಲೂರು ಶಿವಬಸವ ಸ್ವಾಮೀಜಿ ಆಶೀರ್ವಚನ ನೀಡಿದರು. ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಮಾತನಾಡಿದರು. </p>.<p>ಮುಖಂಡರಾದ ವೀರಣ್ಣ ಶೆಟ್ಟರ, ದ್ಯಾಮಣ್ಣ ಮಾಸ್ತರ, ಅನ್ನಪೂರ್ಣಾ ಮನ್ನಾಪೂರ, ಗೀತಾ ಭೋಪಳಾಪೂರ ಆರ್.ವಿ. ಬೆಲ್ಲದ, ಎಸ್.ಎಸ್. ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್:</strong> ‘ರಾಜ್ಯದ ಅನೇಕ ಮಠಗಳು ಅನ್ನ, ಅಕ್ಷರ, ದಾಸೋಹಕ್ಕೆ ಹೆಸರಾಗಿದ್ದರೆ, ನಿಡಗುಂದಿಕೊಪ್ಪದ ಶ್ರೀಮಠವು ಆರೋಗ್ಯ ದಾಸೋಹಕ್ಕೆ ಹೆಸರಾಗಿದೆ’ ಎಂದು ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.</p>.<p>ಸಮೀಪದ ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲಿಂ.ಚನ್ನಬಸವ ಸ್ವಾಮೀಜಿ 42ನೇ ಹಾಗೂ ಲಿಂ.ಶಿವಬಸವ ಸ್ವಾಮೀಜಿ ಅವರ 10ನೇ ಪುಣ್ಯಸ್ಮರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಈ ಭಾಗದ ಜನರ ಆರೋಗ್ಯ ಕಾಪಾಡಲೆಂದೆ ಹಾನಗಲ್ ಗುರುಕುಮಾರೇಶ್ವರ ಅವರು ಮಠ ಸ್ಥಾಪಿಸಿ ಚನ್ನಬಸವ ಸ್ವಾಮೀಜಿ ಅವರಿಗೆ ಅನುಗ್ರಹಿಸಿದ್ದಾರೆ. ಮಠವು ಇಂದಿಗೂ ಆರೋಗ್ಯ ಸೇವೆ ಮುಂದುವರೆಸಿಕೊಂಡು ಬಂದಿದೆ’ ಎಂದರು.</p>.<p>ಪೀಠಾಧಿಪತಿ ಅಭಿನವ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡಿ, ‘ಕೆಲವೇ ದಿನಗಳಲ್ಲಿ ಶ್ರೀಮಠದಿಂದ ಚನ್ನಚೇತನ ಗುರುಕುಲ ಶಾಲೆ ಪ್ರಾರಂಭವಾಗಲಿದೆ. 90 ದಿನಗಳ ಉಚಿತ ಹೊಲಿಗೆ ತರಬೇತಿ ನಡೆಯುತ್ತಿದ್ದು, ಜನರು ಪ್ರಯೋಜವ ಪಡೆದುಕೊಳ್ಳಬೇಕು’ ಎಂದರು. </p>.<p>ಅಧ್ಯಕ್ಷತೆ ವಹಿಸಿದ ರೋಣ ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ, ಅಕ್ಕಿಆಲೂರು ಶಿವಬಸವ ಸ್ವಾಮೀಜಿ ಆಶೀರ್ವಚನ ನೀಡಿದರು. ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಮಾತನಾಡಿದರು. </p>.<p>ಮುಖಂಡರಾದ ವೀರಣ್ಣ ಶೆಟ್ಟರ, ದ್ಯಾಮಣ್ಣ ಮಾಸ್ತರ, ಅನ್ನಪೂರ್ಣಾ ಮನ್ನಾಪೂರ, ಗೀತಾ ಭೋಪಳಾಪೂರ ಆರ್.ವಿ. ಬೆಲ್ಲದ, ಎಸ್.ಎಸ್. ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>