ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ,ದಲಿತ ಮಠಾಧೀಶರ ಒಕ್ಕೂಟಕ್ಕೆ ₹119 ಕೋಟಿ ಅನುದಾನ ನೀಡಿದ್ದಾರೆ. ಈ ಹಿಂದೆ ಸದಾನಂದಗೌಡ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರುಗಳು ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಮಠಗಳಿಗೆ ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗಾಗಿ ನೂರಾರು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಈ ಎಲ್ಲ ಅನುದಾನಗಳು ಸರ್ಕಾರದಿಂದ ಜಿಲ್ಲಾಧಿಕಾರಿಗಳ ಖಜಾನೆಗೆ ಬಂದು ಅಲ್ಲಿಂದ ನೇರವಾಗಿ ಮಠಗಳ ಖಾತೆಗೆ ಜಮೆಯಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆಯಾಗಿವೆ. ಇದರಲ್ಲಿ ಯಾರಿಗೂ ನಯಾ ಪೈಸೆ ಕಮಿಷನ್ ನೀಡಿಲ್ಲ’ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳ ಹೆಸರು ಉಲ್ಲೇಖಿಸದೇ ತಿರುಗೇಟು ನೀಡಿದರು.