<p><strong>ಗದಗ:</strong> ‘ಇದು ಮಾಡು ಇಲ್ಲವೇ ಮಡಿ ಹೋರಾಟ. ಗದಗ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆ ಮಾತು ಕೊಟ್ಟಂತೆ ನಮ್ಮ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮವಹಿಸಬೇಕು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಬರುವವರೆಗೂ ಅಹೋರಾತ್ರಿ ಧರಣಿ ಮುಂದುವರಿಯಲಿದೆ’ ಎಂದು ಉತ್ತರ ಕರ್ನಾಟಕ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ ಎಚ್ಚರಿಸಿದರು.</p>.<p>ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶಿರಹಟ್ಟಿ ಪಟ್ಟಣದ ಫಕೀರೇಶ್ವರ ಮಠದಿಂದ ಪ್ರತಿಭಟನಾ ರ್ಯಾಲಿಯೊಂದಿಗೆ 30 ಕಿ.ಮೀ. ಪಾದಯಾತ್ರೆ ನಡೆಸಿ, ಮಂಗಳವಾರದಿಂದ ಜಿಲ್ಲಾಡಳಿತ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರು ದಿನಗಳನ್ನು ಪೂರ್ಣಗೊಳಿಸಿದ್ದು, ಈ ವೇಳೆ ಅವರು ಮಾತನಾಡಿದರು.</p>.<p>‘ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಒಂದು ವೇಳೆ ಈ ಹೋರಾಟದಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರೇ ನೇರ ಹೊಣೆಯಾಗುತ್ತಾರೆ’ ಎಂದು ಎಚ್ಚರಿಸಿದರು.</p>.<p>‘ರೈತರು ತಲತಲಾಂತರದಿಂದ ತಮ್ಮ ಉಪಜೀವನಕ್ಕಾಗಿ ಅರಣ್ಯ ಜಮೀನುಗಳನ್ನು ಸಾಗುವಳಿ ಮಾಡುತ್ತಾ ಬಂದಿದ್ದು, ಕಪ್ಪತ್ತಗುಡ್ಡ ರಕ್ಷಣೆ ಮಾಡಿದ ಬಗರ್ಹುಕುಂ ಸಾಗುವಳಿದಾರರಿಗೆ ಹಾಗೂ ಅರಣ್ಯ ಅವಲಂಬಿತರಿಗೆ ಸರ್ಕಾರ ಹಕ್ಕುಪತ್ರ ನೀಡದೇ ವಿನಾಕಾರಣ ಕಿರುಕುಳ ಹಾಗೂ ದೌರ್ಜನ್ಯ ನೀಡುತ್ತಿದೆ’ ಎಂದು ಕಿಡಿಕಾರಿದರು.</p>.<p>‘ನಾಗಾವಿ ಗ್ರಾಮದಲ್ಲಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನಿರ್ಮಾಣಕ್ಕೆ ರೈತರಿಂದ ಭೂಮಿ ಪಡೆದುಕೊಂಡು ಅವರಿಗೆ ಪರಿಹಾರ ನೀಡದೆ; ಒಕ್ಕಲೆಬ್ಬಿಸಿರುವುದು ಖಂಡನೀಯ’ ಎಂದು ಆರೋಪ ಮಾಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಎಲ್ಲ ವಿಷಯಗಳು ಗೊತ್ತಿದ್ದರೂ ಗೊತ್ತಿಲ್ಲದಂತೆ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ. ಸಚಿವರು ಕೊಟ್ಟ ಮಾತಿನಂತೆ ನಡೆದುಕೊಂಡು ರೈತರ ಹಿತ ಕಾಪಾಡಬೇಕಾಗಿದೆ. ಇಲ್ಲವಾದಲ್ಲಿ ಈಗ ಶಾಂತಿಯುತವಾಗಿ ನಡೆಸುತ್ತಿರುವ ಹೋರಾಟದ ರೂಪುರೇಷೆಯಲ್ಲಿ ಬದಲಾವಣೆಗಳಾಗುತ್ತವೆ’ ಎಂದು ಎಚ್ಚರಿಸಿದರು. </p>.<p>ಪೀರು ರಾಠೋಡ, ರಮೇಶ ಸಜ್ಜಗಾರ, ಪರಮೇಶ ಲಮಾಣಿ, ಎನ್.ಟಿ ಪೂಜಾರ, ಪಾಂಡು ಚವ್ಹಾಣ, ಜಿಲ್ಲೆಯ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಇದ್ದರು.</p>.<div><blockquote>ಅಕ್ರಮ ಜಮೀನುಗಳನ್ನು ಸಕ್ರಮಗೊಳಿಸಿ ರೈತರ ಬದುಕನ್ನು ಹಸನು ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರಿಯಲಿದೆ</blockquote><span class="attribution">ಮಂಜುನಾಥ ಮಾಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ </span></div>.<p><strong>ಅಹೋರಾತ್ರಿ ಧರಣಿಗೆ ಬಿಜೆಪಿ ಬೆಂಬಲ</strong> </p><p>ಅಹೋರಾತ್ರಿ ಧರಣಿಗೆ ಬಿಜೆಪಿ ಗದಗ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಮಾತನಾಡಿ ‘ಉತ್ತರ ಕರ್ನಾಟಕ ಮಹಾಸಭಾದಿಂದ ಹಮ್ಮಿಕೊಂಡ ಈ ಅಹೋರಾತ್ರಿ ಧರಣಿಗೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದರು. ‘ರೈತರ ಬೇಡಿಕೆಗಳು ನ್ಯಾಯಯುತವಾಗಿವೆ. ಜಿಲ್ಲಾಡಳಿತ ಜಿಲ್ಲಾ ಉಸ್ತುವಾರಿ ಸಚಿವರು ಈ ಕೂಡಲೇ ಬಗರ್ ಹುಕುಂ ಅರಣ್ಯ ಅವಲಂಬಿತರು ಮತ್ತು ನಾಗಾವಿ ವಿಶ್ವವಿದ್ಯಾಲಯಕ್ಕೆ ಭೂಮಿಯನ್ನು ಕಳೆದುಕೊಂಡ ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಇದು ಮಾಡು ಇಲ್ಲವೇ ಮಡಿ ಹೋರಾಟ. ಗದಗ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆ ಮಾತು ಕೊಟ್ಟಂತೆ ನಮ್ಮ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮವಹಿಸಬೇಕು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಬರುವವರೆಗೂ ಅಹೋರಾತ್ರಿ ಧರಣಿ ಮುಂದುವರಿಯಲಿದೆ’ ಎಂದು ಉತ್ತರ ಕರ್ನಾಟಕ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ ಎಚ್ಚರಿಸಿದರು.</p>.<p>ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶಿರಹಟ್ಟಿ ಪಟ್ಟಣದ ಫಕೀರೇಶ್ವರ ಮಠದಿಂದ ಪ್ರತಿಭಟನಾ ರ್ಯಾಲಿಯೊಂದಿಗೆ 30 ಕಿ.ಮೀ. ಪಾದಯಾತ್ರೆ ನಡೆಸಿ, ಮಂಗಳವಾರದಿಂದ ಜಿಲ್ಲಾಡಳಿತ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರು ದಿನಗಳನ್ನು ಪೂರ್ಣಗೊಳಿಸಿದ್ದು, ಈ ವೇಳೆ ಅವರು ಮಾತನಾಡಿದರು.</p>.<p>‘ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಒಂದು ವೇಳೆ ಈ ಹೋರಾಟದಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರೇ ನೇರ ಹೊಣೆಯಾಗುತ್ತಾರೆ’ ಎಂದು ಎಚ್ಚರಿಸಿದರು.</p>.<p>‘ರೈತರು ತಲತಲಾಂತರದಿಂದ ತಮ್ಮ ಉಪಜೀವನಕ್ಕಾಗಿ ಅರಣ್ಯ ಜಮೀನುಗಳನ್ನು ಸಾಗುವಳಿ ಮಾಡುತ್ತಾ ಬಂದಿದ್ದು, ಕಪ್ಪತ್ತಗುಡ್ಡ ರಕ್ಷಣೆ ಮಾಡಿದ ಬಗರ್ಹುಕುಂ ಸಾಗುವಳಿದಾರರಿಗೆ ಹಾಗೂ ಅರಣ್ಯ ಅವಲಂಬಿತರಿಗೆ ಸರ್ಕಾರ ಹಕ್ಕುಪತ್ರ ನೀಡದೇ ವಿನಾಕಾರಣ ಕಿರುಕುಳ ಹಾಗೂ ದೌರ್ಜನ್ಯ ನೀಡುತ್ತಿದೆ’ ಎಂದು ಕಿಡಿಕಾರಿದರು.</p>.<p>‘ನಾಗಾವಿ ಗ್ರಾಮದಲ್ಲಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನಿರ್ಮಾಣಕ್ಕೆ ರೈತರಿಂದ ಭೂಮಿ ಪಡೆದುಕೊಂಡು ಅವರಿಗೆ ಪರಿಹಾರ ನೀಡದೆ; ಒಕ್ಕಲೆಬ್ಬಿಸಿರುವುದು ಖಂಡನೀಯ’ ಎಂದು ಆರೋಪ ಮಾಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಎಲ್ಲ ವಿಷಯಗಳು ಗೊತ್ತಿದ್ದರೂ ಗೊತ್ತಿಲ್ಲದಂತೆ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ. ಸಚಿವರು ಕೊಟ್ಟ ಮಾತಿನಂತೆ ನಡೆದುಕೊಂಡು ರೈತರ ಹಿತ ಕಾಪಾಡಬೇಕಾಗಿದೆ. ಇಲ್ಲವಾದಲ್ಲಿ ಈಗ ಶಾಂತಿಯುತವಾಗಿ ನಡೆಸುತ್ತಿರುವ ಹೋರಾಟದ ರೂಪುರೇಷೆಯಲ್ಲಿ ಬದಲಾವಣೆಗಳಾಗುತ್ತವೆ’ ಎಂದು ಎಚ್ಚರಿಸಿದರು. </p>.<p>ಪೀರು ರಾಠೋಡ, ರಮೇಶ ಸಜ್ಜಗಾರ, ಪರಮೇಶ ಲಮಾಣಿ, ಎನ್.ಟಿ ಪೂಜಾರ, ಪಾಂಡು ಚವ್ಹಾಣ, ಜಿಲ್ಲೆಯ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಇದ್ದರು.</p>.<div><blockquote>ಅಕ್ರಮ ಜಮೀನುಗಳನ್ನು ಸಕ್ರಮಗೊಳಿಸಿ ರೈತರ ಬದುಕನ್ನು ಹಸನು ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರಿಯಲಿದೆ</blockquote><span class="attribution">ಮಂಜುನಾಥ ಮಾಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ </span></div>.<p><strong>ಅಹೋರಾತ್ರಿ ಧರಣಿಗೆ ಬಿಜೆಪಿ ಬೆಂಬಲ</strong> </p><p>ಅಹೋರಾತ್ರಿ ಧರಣಿಗೆ ಬಿಜೆಪಿ ಗದಗ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಮಾತನಾಡಿ ‘ಉತ್ತರ ಕರ್ನಾಟಕ ಮಹಾಸಭಾದಿಂದ ಹಮ್ಮಿಕೊಂಡ ಈ ಅಹೋರಾತ್ರಿ ಧರಣಿಗೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದರು. ‘ರೈತರ ಬೇಡಿಕೆಗಳು ನ್ಯಾಯಯುತವಾಗಿವೆ. ಜಿಲ್ಲಾಡಳಿತ ಜಿಲ್ಲಾ ಉಸ್ತುವಾರಿ ಸಚಿವರು ಈ ಕೂಡಲೇ ಬಗರ್ ಹುಕುಂ ಅರಣ್ಯ ಅವಲಂಬಿತರು ಮತ್ತು ನಾಗಾವಿ ವಿಶ್ವವಿದ್ಯಾಲಯಕ್ಕೆ ಭೂಮಿಯನ್ನು ಕಳೆದುಕೊಂಡ ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>