<p><strong>ಮುಂಡರಗಿ: ‘</strong>ನರೇಗಾ ಯೋಜನೆಯಡಿ ನೋಂದಾಯಿತವಾಗಿರುವ ತಾಲ್ಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ತಾಲ್ಲೂಕು ಪಂಚಾಯಿತಿ ನರೇಗಾ ಸಿಬ್ಬಂದಿ ಶೀಘ್ರ ಪೂರ್ಣಗೊಳಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ವಿಶ್ವನಾಥ ಹೊಸಮನಿ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ತಾಲ್ಲೂಕು ನರೇಗಾ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದರು.</p>.<p>ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಮಾಡಬೇಕಿದೆ. ಈ ಕುರಿತು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದ್ದು, ಸಂಬಂಧಿಸಿದ ಸಿಬ್ಬಂದಿ, ನರೇಗಾ ಕೂಲಿಕಾರರ ಮನೆ ಮನೆಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದರು.</p>.<p>ತಾಲ್ಲೂಕಿನ 19 ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ನರೇಗಾ ಸಿಬ್ಬಂದಿಯಾದ ಗ್ರಾಮ ಕಾಯಕ ಮಿತ್ರ, ಬಿ.ಎಫ್.ಟಿ. ಹಾಗೂ ತಾಂತ್ರಿಕ ಸಹಾಯಕರಿಗೆ ಇ-ಕೆವೈಸಿ ಕುರಿತು ತರಬೇತಿ ನೀಡಲಾಗಿದೆ. ಗ್ರಾಮ ಪಂಚಾಯಿತಿಗಳ ಇತರ ಸಿಬ್ಬಂದಿಯನ್ನು ಬಳಸಿಕೊಂಡು ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯ ತುರ್ತಾಗಿ ನಡೆಯಬೇಕು ಎಂದು ತಿಳಿಸಿದರು.</p>.<p>ನರೇಗಾ ತಾಂತ್ರಿಕ ಸಹಾಯಕರು ಕೃಷಿ ಹೊಂಡ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಕೂಲಿಕಾರರಿಗೆ ಉದ್ಯೋಗ ನೀಡಬೇಕು. ಇದರಿಂದ ಮಾನವ ದಿನಗಳ ಸೃಜನೆಯು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸಬೇಕು ಎಂದು ತಿಳಿಸಿದರು.</p>.<p>ಚಾಲ್ತಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಹೊಸ ಕಾಮಗಾರಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕೂಲಿಕಾರರಿಗೆ ಉದ್ಯೋಗ ನೀಡಬೇಕು. 2026-27ನೇ ನರೇಗಾ ಕ್ರಿಯಾ ಯೋಜನೆಗೆ ಈಗಾಗಲೇ ಸುತ್ತೋಲೆ ಬಂದಿದ್ದು, ಕ್ರಿಯಾಯೋಜನೆ ಸಿದ್ಧಪಡಿಸುವ ಕಾರ್ಯಕೈಗೊಳ್ಳಬೇಕು ಎಂದರು.</p>.<p>ಪ್ರವೀಣ ಸೂಡಿ, ಟಿ.ಎಂ.ಐ.ಎಸ್. ಬಸವರಾಜ ಮಣ್ಣಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ: ‘</strong>ನರೇಗಾ ಯೋಜನೆಯಡಿ ನೋಂದಾಯಿತವಾಗಿರುವ ತಾಲ್ಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ತಾಲ್ಲೂಕು ಪಂಚಾಯಿತಿ ನರೇಗಾ ಸಿಬ್ಬಂದಿ ಶೀಘ್ರ ಪೂರ್ಣಗೊಳಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ವಿಶ್ವನಾಥ ಹೊಸಮನಿ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ತಾಲ್ಲೂಕು ನರೇಗಾ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದರು.</p>.<p>ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಮಾಡಬೇಕಿದೆ. ಈ ಕುರಿತು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದ್ದು, ಸಂಬಂಧಿಸಿದ ಸಿಬ್ಬಂದಿ, ನರೇಗಾ ಕೂಲಿಕಾರರ ಮನೆ ಮನೆಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದರು.</p>.<p>ತಾಲ್ಲೂಕಿನ 19 ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ನರೇಗಾ ಸಿಬ್ಬಂದಿಯಾದ ಗ್ರಾಮ ಕಾಯಕ ಮಿತ್ರ, ಬಿ.ಎಫ್.ಟಿ. ಹಾಗೂ ತಾಂತ್ರಿಕ ಸಹಾಯಕರಿಗೆ ಇ-ಕೆವೈಸಿ ಕುರಿತು ತರಬೇತಿ ನೀಡಲಾಗಿದೆ. ಗ್ರಾಮ ಪಂಚಾಯಿತಿಗಳ ಇತರ ಸಿಬ್ಬಂದಿಯನ್ನು ಬಳಸಿಕೊಂಡು ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯ ತುರ್ತಾಗಿ ನಡೆಯಬೇಕು ಎಂದು ತಿಳಿಸಿದರು.</p>.<p>ನರೇಗಾ ತಾಂತ್ರಿಕ ಸಹಾಯಕರು ಕೃಷಿ ಹೊಂಡ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಕೂಲಿಕಾರರಿಗೆ ಉದ್ಯೋಗ ನೀಡಬೇಕು. ಇದರಿಂದ ಮಾನವ ದಿನಗಳ ಸೃಜನೆಯು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸಬೇಕು ಎಂದು ತಿಳಿಸಿದರು.</p>.<p>ಚಾಲ್ತಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಹೊಸ ಕಾಮಗಾರಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕೂಲಿಕಾರರಿಗೆ ಉದ್ಯೋಗ ನೀಡಬೇಕು. 2026-27ನೇ ನರೇಗಾ ಕ್ರಿಯಾ ಯೋಜನೆಗೆ ಈಗಾಗಲೇ ಸುತ್ತೋಲೆ ಬಂದಿದ್ದು, ಕ್ರಿಯಾಯೋಜನೆ ಸಿದ್ಧಪಡಿಸುವ ಕಾರ್ಯಕೈಗೊಳ್ಳಬೇಕು ಎಂದರು.</p>.<p>ಪ್ರವೀಣ ಸೂಡಿ, ಟಿ.ಎಂ.ಐ.ಎಸ್. ಬಸವರಾಜ ಮಣ್ಣಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>