ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಹಾಗೂ ತೃತೀಯ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿರುವ ಬೈರಾಪೂರ ಗ್ರಾಮದ ವಿದ್ಯಾರ್ಥಿಗಳಾದ ಸುಭಾಸ್ ಗರೆಬಾಳ, ಯಶವಂತ ತಳವಾರ, ಸುನೀಲ್ ಗರೆಬಾಳ, ಕೃಷ್ಣಪ್ಪ ಬಾದಿಮನಾಳ, ಬಸವರಾಜ ಮಾಗಿ, ಶಿವಾನಂದ ಹೊಸಮನಿ ಅವರು, ಮುಂದಿನ ಶಿಕ್ಷಣಕ್ಕೆ ಹಣ ಹೊಂದಿಸಲಾಗದೆ ಸಮಸ್ಯೆ ಅನುಭವಿಸುತ್ತಿದ್ದರು. ಮನೆಯಲ್ಲಿ ಬಡತನವಿರುವಾಗಿ ಕಾಲೇಜು ಪ್ರವೇಶ ಹಾಗೂ ಮತ್ತಿತರ ಖರ್ಚಿಗೆ ಹಣ ಕೇಳಲಾಗದೆ ಒದ್ದಾಡುತ್ತಿದ್ದರು. ಆಗ ಅವರು ಮುಖಮಾಡಿದ್ದ ಗ್ರಾಮ ಪಂಚಾಯ್ತಿ ವತಿಯಿಂದ ನಡೆಯುತ್ತಿದ್ದ ಉದ್ಯೋಗ ಖಾತ್ರಿ ಯೋಜನೆಯತ್ತ.