<p><strong>ಗದಗ</strong>: ‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ ₹25 ಲಕ್ಷ ದುಬಾರಿ ಶುಲ್ಕದೊಂದಿಗೆ ಶೇ 15ರಷ್ಟು ಎನ್ಆರ್ಐ ಕೋಟಾ ಆರಂಭಿಸಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ಈ ನಡೆಯನ್ನು ಎಐಡಿಎಸ್ಒ ಖಂಡಿಸುತ್ತದೆ’ ಎಂದು ಎಐಡಿಎಸ್ಒ ಗದಗ ಜಿಲ್ಲಾ ಸಂಚಾಲಕಿ ಎಂ. ಶಾಂತಿ ತಿಳಿಸಿದ್ದಾರೆ. </p>.<p>‘ವೈದ್ಯಕೀಯ ಕಾಲೇಜುಗಳನ್ನು ಬಲಪಡಿಸಲು ರಾಜ್ಯದ ಬೊಕ್ಕಸದಿಂದ ಅವಶ್ಯಕ ಹಣವನ್ನು ಮಂಜೂರು ಮಾಡುವ ಬದಲು, ಸರ್ಕಾರವು ನಾಚಿಕೆಯಿಲ್ಲದೆ ಈ ಹೊರೆಯನ್ನು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲೆ ವರ್ಗಾಯಿಸುತ್ತಿದೆ’ ಎಂದು ಕಿಡಿಕಾರಿದ್ದಾರೆ.</p>.<p>‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಆರ್ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ಸರ್ಕಾರವು ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶದ ಬಾಗಿಲು ಮುಚ್ಚುತ್ತಿದೆ’ ಎಂದು ಟೀಕಿಸಿದ್ದಾರೆ.</p>.<p>‘ಈಗಾಗಲೇ, ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕವು ದೇಶದಲ್ಲಿಯೇ ಅತಿ ಹೆಚ್ಚಿದ್ದು, ಪಶ್ಚಿಮ ಬಂಗಾಳ ಮತ್ತು ಉತ್ತರ ಭಾರತದ ಹಲವು ರಾಜ್ಯಗಳ ಶುಲ್ಕಕ್ಕಿಂತ ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ. ಈ ಅನ್ಯಾಯದ ಹೊರೆಯನ್ನು ಕಡಿಮೆ ಮಾಡುವ ಬದಲು, ಸರ್ಕಾರವು ವಿದ್ಯಾರ್ಥಿಗಳಿಂದ ಇನ್ನಷ್ಟು ಹಣವನ್ನು ವಸೂಲಿ ಮಾಡಲು ನಿರ್ಲಜ್ಜವಾಗಿ ಪ್ರಯತ್ನಿಸುತ್ತಿದೆ’ ಎಂದು ಹರಿಹಾಯ್ದಿದ್ದಾರೆ.</p>.<p>‘ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ಸಂದರ್ಭದಲ್ಲಿ, ಸರ್ಕಾರವು ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯವನ್ನು ಖಾತ್ರಿಪಡಿಸಲು ಆದ್ಯತೆ ನೀಡಬೇಕಿದೆ. ಸಂಪನ್ಮೂಲ ಕ್ರೋಡೀಕರಣದ ನೆಪದಲ್ಲಿ ಶ್ರೀಮಂತರಿಗೆ ಸೀಟುಗಳನ್ನು ಮಾರಾಟ ಮಾಡುವುದಲ್ಲ’ ಎಂದು ಹೇಳಿದ್ದಾರೆ. </p>.<p>‘ಸರ್ಕಾರದ ಈ ಬಗೆಯ ವಿದ್ಯಾರ್ಥಿ ವಿರೋಧಿ ಕ್ರಮ ಖಂಡಿಸಿ ಸೆ. 10ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ ₹25 ಲಕ್ಷ ದುಬಾರಿ ಶುಲ್ಕದೊಂದಿಗೆ ಶೇ 15ರಷ್ಟು ಎನ್ಆರ್ಐ ಕೋಟಾ ಆರಂಭಿಸಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ಈ ನಡೆಯನ್ನು ಎಐಡಿಎಸ್ಒ ಖಂಡಿಸುತ್ತದೆ’ ಎಂದು ಎಐಡಿಎಸ್ಒ ಗದಗ ಜಿಲ್ಲಾ ಸಂಚಾಲಕಿ ಎಂ. ಶಾಂತಿ ತಿಳಿಸಿದ್ದಾರೆ. </p>.<p>‘ವೈದ್ಯಕೀಯ ಕಾಲೇಜುಗಳನ್ನು ಬಲಪಡಿಸಲು ರಾಜ್ಯದ ಬೊಕ್ಕಸದಿಂದ ಅವಶ್ಯಕ ಹಣವನ್ನು ಮಂಜೂರು ಮಾಡುವ ಬದಲು, ಸರ್ಕಾರವು ನಾಚಿಕೆಯಿಲ್ಲದೆ ಈ ಹೊರೆಯನ್ನು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲೆ ವರ್ಗಾಯಿಸುತ್ತಿದೆ’ ಎಂದು ಕಿಡಿಕಾರಿದ್ದಾರೆ.</p>.<p>‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಆರ್ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ಸರ್ಕಾರವು ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶದ ಬಾಗಿಲು ಮುಚ್ಚುತ್ತಿದೆ’ ಎಂದು ಟೀಕಿಸಿದ್ದಾರೆ.</p>.<p>‘ಈಗಾಗಲೇ, ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕವು ದೇಶದಲ್ಲಿಯೇ ಅತಿ ಹೆಚ್ಚಿದ್ದು, ಪಶ್ಚಿಮ ಬಂಗಾಳ ಮತ್ತು ಉತ್ತರ ಭಾರತದ ಹಲವು ರಾಜ್ಯಗಳ ಶುಲ್ಕಕ್ಕಿಂತ ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ. ಈ ಅನ್ಯಾಯದ ಹೊರೆಯನ್ನು ಕಡಿಮೆ ಮಾಡುವ ಬದಲು, ಸರ್ಕಾರವು ವಿದ್ಯಾರ್ಥಿಗಳಿಂದ ಇನ್ನಷ್ಟು ಹಣವನ್ನು ವಸೂಲಿ ಮಾಡಲು ನಿರ್ಲಜ್ಜವಾಗಿ ಪ್ರಯತ್ನಿಸುತ್ತಿದೆ’ ಎಂದು ಹರಿಹಾಯ್ದಿದ್ದಾರೆ.</p>.<p>‘ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ಸಂದರ್ಭದಲ್ಲಿ, ಸರ್ಕಾರವು ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯವನ್ನು ಖಾತ್ರಿಪಡಿಸಲು ಆದ್ಯತೆ ನೀಡಬೇಕಿದೆ. ಸಂಪನ್ಮೂಲ ಕ್ರೋಡೀಕರಣದ ನೆಪದಲ್ಲಿ ಶ್ರೀಮಂತರಿಗೆ ಸೀಟುಗಳನ್ನು ಮಾರಾಟ ಮಾಡುವುದಲ್ಲ’ ಎಂದು ಹೇಳಿದ್ದಾರೆ. </p>.<p>‘ಸರ್ಕಾರದ ಈ ಬಗೆಯ ವಿದ್ಯಾರ್ಥಿ ವಿರೋಧಿ ಕ್ರಮ ಖಂಡಿಸಿ ಸೆ. 10ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>