<p><strong>ಗಜೇಂದ್ರಗಡ:</strong> ‘ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರವೆಂದು ಬಲವಾಗಿ ನಂಬಿದ್ದ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುವುದು ಎನ್ಎಸ್ಎಸ್ನ ಪ್ರಮುಖ ಗುರಿಯಾಗಿದೆ. ಈ ದಿಸೆಯಲ್ಲಿ ಯುವಶಕ್ತಿ ಸ್ವಯಂ ಸ್ಫೂರ್ತಿಯಿಂದ ರಾಷ್ಟ್ರ ಸೇವೆಗೆ ಸಿದ್ಧರಾಗಬೇಕು’ ಎಂದು ಪ್ರಾಚಾರ್ಯ ಜಿ.ಬಿ.ಗುಡಿಮನಿ ಹೇಳಿದರು.</p>.<p>ಸಮೀಪದ ಉಣಚಗೇರಿ ಗ್ರಾಮದಲ್ಲಿ ಶನಿವಾರ ನಡೆದ ಪಟ್ಟಣದ ಎಸ್.ಎಂ.ಭೂಮರಡ್ಡಿ ಪಿಯು ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.</p>.<p>‘ಸ್ವಯಂ ಸೇವಕರಿಗೆ ಈ ಏಳು ದಿನಗಳ ಶಿಬಿರ ಯಶಸ್ವಿ ಜೀವನಕ್ಕೆ ಅಡಿಪಾಯವಾಗಬೇಕು. ಅಲ್ಲದೆ ಗ್ರಾಮೀಣ ಭಾಗದ ಜನರು ಇಂತಹ ಮಹತ್ವದ ಯೋಜನೆಗಳಿಗೆ ಸಹಕಾರ ನೀಡುವುದರ ಜತೆಗೆ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು’ ಎಂದರು.</p>.<p>ಪೊಲೀಸ್ ಕಾನ್ಸ್ಟೆಬಲ್ ಮಂಜುನಾಥ ಮಾರನಬಸರಿ ಮಾತನಾಡಿ, ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಕಷ್ಟಪಟ್ಟು ಅಧ್ಯಯನಶೀಲರಾಗಿ ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಭಾಗಿಯಾದ ಶಿಬಿರಾಧಿಕಾರಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿಗಳಿಗೆ ಪುಸ್ತಕ ನೀಡಿ ಗೌರವಿಸಲಾಯಿತು.</p>.<p>ಎನ್ಎಸ್ಎಸ್ ಅಧಿಕಾರಿ ಎಸ್.ಎಸ್.ವಾಲಿಕಾರ, ಉಪನ್ಯಾಸಕರಾದ ಅರವಿಂದ ವಡ್ಡರ, ಜೆ.ಎಸ್.ಗದಗ, ವೈ.ಆರ್.ಸಕ್ರೋಜಿ, ಎಂ.ಎಲ್.ಕ್ವಾಟಿ, ವಿಜಯಲಕ್ಷ್ಮಿ ಗಾಳಿ, ರವಿ ಹಲಗಿ, ಗ್ರಾಮಸ್ಥರಾದ ಶರಣಪ್ಪ ಹಿರೇಕೊಪ್ಪ, ಶರಣಪ್ಪ ಹುಡೇದ, ನಾಗಯ್ಯ ಹಿರೇಮಠ, ಉಮೇಶ ಧನ್ನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ‘ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರವೆಂದು ಬಲವಾಗಿ ನಂಬಿದ್ದ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುವುದು ಎನ್ಎಸ್ಎಸ್ನ ಪ್ರಮುಖ ಗುರಿಯಾಗಿದೆ. ಈ ದಿಸೆಯಲ್ಲಿ ಯುವಶಕ್ತಿ ಸ್ವಯಂ ಸ್ಫೂರ್ತಿಯಿಂದ ರಾಷ್ಟ್ರ ಸೇವೆಗೆ ಸಿದ್ಧರಾಗಬೇಕು’ ಎಂದು ಪ್ರಾಚಾರ್ಯ ಜಿ.ಬಿ.ಗುಡಿಮನಿ ಹೇಳಿದರು.</p>.<p>ಸಮೀಪದ ಉಣಚಗೇರಿ ಗ್ರಾಮದಲ್ಲಿ ಶನಿವಾರ ನಡೆದ ಪಟ್ಟಣದ ಎಸ್.ಎಂ.ಭೂಮರಡ್ಡಿ ಪಿಯು ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.</p>.<p>‘ಸ್ವಯಂ ಸೇವಕರಿಗೆ ಈ ಏಳು ದಿನಗಳ ಶಿಬಿರ ಯಶಸ್ವಿ ಜೀವನಕ್ಕೆ ಅಡಿಪಾಯವಾಗಬೇಕು. ಅಲ್ಲದೆ ಗ್ರಾಮೀಣ ಭಾಗದ ಜನರು ಇಂತಹ ಮಹತ್ವದ ಯೋಜನೆಗಳಿಗೆ ಸಹಕಾರ ನೀಡುವುದರ ಜತೆಗೆ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು’ ಎಂದರು.</p>.<p>ಪೊಲೀಸ್ ಕಾನ್ಸ್ಟೆಬಲ್ ಮಂಜುನಾಥ ಮಾರನಬಸರಿ ಮಾತನಾಡಿ, ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಕಷ್ಟಪಟ್ಟು ಅಧ್ಯಯನಶೀಲರಾಗಿ ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಭಾಗಿಯಾದ ಶಿಬಿರಾಧಿಕಾರಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿಗಳಿಗೆ ಪುಸ್ತಕ ನೀಡಿ ಗೌರವಿಸಲಾಯಿತು.</p>.<p>ಎನ್ಎಸ್ಎಸ್ ಅಧಿಕಾರಿ ಎಸ್.ಎಸ್.ವಾಲಿಕಾರ, ಉಪನ್ಯಾಸಕರಾದ ಅರವಿಂದ ವಡ್ಡರ, ಜೆ.ಎಸ್.ಗದಗ, ವೈ.ಆರ್.ಸಕ್ರೋಜಿ, ಎಂ.ಎಲ್.ಕ್ವಾಟಿ, ವಿಜಯಲಕ್ಷ್ಮಿ ಗಾಳಿ, ರವಿ ಹಲಗಿ, ಗ್ರಾಮಸ್ಥರಾದ ಶರಣಪ್ಪ ಹಿರೇಕೊಪ್ಪ, ಶರಣಪ್ಪ ಹುಡೇದ, ನಾಗಯ್ಯ ಹಿರೇಮಠ, ಉಮೇಶ ಧನ್ನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>