<p><strong>ಶಿರಹಟ್ಟಿ:</strong> ‘ರಾಷ್ಟ್ರ ಪ್ರೇಮ, ಸೇವಾ ಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು, ಸಮುದಾಯದ ಅಗತ್ಯತೆ ಪೂರೈಸಲು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸಹಕಾರಿಯಾಗಿದೆ’ ಎಂದು ತಹಶೀಲ್ದಾರ್ ಕೆ. ರಾಘವೇಂದ್ರರಾವ್ ಹೇಳಿದರು.</p>.<p>ತಾಲ್ಲೂಕಿನ ಮಾಗಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಯೂ ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಪರಿಹರಿಸಲು ಯತ್ನಿಸಬೇಕು. ಆರೋಗ್ಯ, ಶಿಕ್ಷಣ, ಸ್ವಚ್ಛತೆ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು’ ಎಂದರು.</p>.<p>‘ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸುವ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಇಂತಹ ಅನಿಷ್ಟ ಪದ್ದತಿ ಕಂಡು ಬಂದ ತಕ್ಷಣ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಹೇಳಿದರು.</p>.<p>ಬೀಟ್ ಅಧಿಕಾರಿ ಡಿ. ಮೋಹಿಸಿನ್ ಅವರು ಮಾಗಡಿ ಕೆರೆಯ ಪಕ್ಷಿಗಳ ವಲಸೆ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>ಪ್ರಾಚಾರ್ಯ ಬಿ.ಜಿ. ಗಿರಿತಿಮ್ಮಣ್ಣವರ್ ಅಧ್ಯಕ್ಷತೆ ವಹಿಸಿದ್ದರು. ಡಿವೈಆರ್ಎಫ್ಒ ಎಸ್.ಎಂ. ಲಮಾಣಿ ಇದ್ದರು. ಕಾರ್ಯಕ್ರಮಾಧಿಕಾರಿ ಲಿಂಗರಾಜ ಯತ್ನಳ್ಳಿ ಸ್ವಾಗತಿಸಿದರು. ಗಿರೀಶ್ ರಡ್ಡೇರ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ:</strong> ‘ರಾಷ್ಟ್ರ ಪ್ರೇಮ, ಸೇವಾ ಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು, ಸಮುದಾಯದ ಅಗತ್ಯತೆ ಪೂರೈಸಲು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸಹಕಾರಿಯಾಗಿದೆ’ ಎಂದು ತಹಶೀಲ್ದಾರ್ ಕೆ. ರಾಘವೇಂದ್ರರಾವ್ ಹೇಳಿದರು.</p>.<p>ತಾಲ್ಲೂಕಿನ ಮಾಗಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಯೂ ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಪರಿಹರಿಸಲು ಯತ್ನಿಸಬೇಕು. ಆರೋಗ್ಯ, ಶಿಕ್ಷಣ, ಸ್ವಚ್ಛತೆ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು’ ಎಂದರು.</p>.<p>‘ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸುವ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಇಂತಹ ಅನಿಷ್ಟ ಪದ್ದತಿ ಕಂಡು ಬಂದ ತಕ್ಷಣ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಹೇಳಿದರು.</p>.<p>ಬೀಟ್ ಅಧಿಕಾರಿ ಡಿ. ಮೋಹಿಸಿನ್ ಅವರು ಮಾಗಡಿ ಕೆರೆಯ ಪಕ್ಷಿಗಳ ವಲಸೆ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>ಪ್ರಾಚಾರ್ಯ ಬಿ.ಜಿ. ಗಿರಿತಿಮ್ಮಣ್ಣವರ್ ಅಧ್ಯಕ್ಷತೆ ವಹಿಸಿದ್ದರು. ಡಿವೈಆರ್ಎಫ್ಒ ಎಸ್.ಎಂ. ಲಮಾಣಿ ಇದ್ದರು. ಕಾರ್ಯಕ್ರಮಾಧಿಕಾರಿ ಲಿಂಗರಾಜ ಯತ್ನಳ್ಳಿ ಸ್ವಾಗತಿಸಿದರು. ಗಿರೀಶ್ ರಡ್ಡೇರ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>