<p><strong>ಡಂಬಳ(ಗದಗ): </strong>ಸರ್ಕಾರಿ ಕಚೇರಿ ಜನಸ್ನೇಹಿಯಾಗಿ ಇರಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು ಎಂಬ ಉದ್ದೇಶದಿಂದ ₹1.20 ಲಕ್ಷ ಸ್ವಂತ ಹಣ ವಿನಿಯೋಗಿಸಿ ಸರ್ಕಾರಿ ಕಟ್ಟಡವನ್ನು ದುರಸ್ತಿಗೊಳಿಸಿರುವ ಇಲ್ಲಿನ ಕಂದಾಯ ನಿರೀಕ್ಷಕ ಎಂ.ಎ.ನದಾಫ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.</p>.<p>15 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಕಂದಾಯ ನಿರೀಕ್ಷಕರ ಕಟ್ಟಡ ದುರಸ್ತಿಗೆ ಬಂದಿತ್ತು. ಅವ್ಯವಸ್ಥೆಯಿಂದ ಕೂಡಿದ್ದ ಕಟ್ಟಡದ ನವೀಕರಣಕ್ಕೆ ಅವರು ಸರ್ಕಾರದ ಅನುದಾನ ನಿರೀಕ್ಷಿಸದೆ, ಸಾರ್ವಜನಿಕರ ಸಹಕಾರದೊಂದಿಗೆ ಚೆಂದಗಾಣಿಸಿದ್ದಾರೆ.</p>.<p>ಕಟ್ಟಡದ ಆವರಣದಲ್ಲಿನಮುಳ್ಳುಕಂಟಿಗಳನ್ನು ಸ್ವಚ್ಛಗೊಳಿಸಿ, ಸುತ್ತಲಿನ ನಾಲ್ಕು ಅಡಿ ಪ್ರದೇಶಕ್ಕೆ ಸಿಮೆಂಟ್ ಹಾಕಿಸಿದ್ದಾರೆ. ವಿದ್ಯುತ್ ಸಂಪರ್ಕ ನವೀಕರಣಗೊಳಿಸಿದ್ದಾರೆ. ಕಟ್ಟಡ ದುರಸ್ತಿ ಮಾಡಿಸುವುದರ ಜತೆಗೆ ಬಣ್ಣ ಹಚ್ಚಿಸಿದ್ದಾರೆ. ಕೊಠಡಿಗಳಿಗೆ ನೆಲಹಾಸು ಹಾಗೂ ಕಿಟಕಿ, ಬಾಗಿಲುಗಳಿಗೆ ಪರದೆ ಹಾಕಿಸಿದ್ದಾರೆ.</p>.<p>‘ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದು ವೈಬ್ಸೈಟ್ ರೂಪಿಸಿ, ಹೋಬಳಿ ವ್ಯಾಪ್ತಿಯ ಗ್ರಾಮಗಳ ಜನಸಂಖ್ಯೆ, ಶಾಲೆಗಳ ಸಂಖ್ಯೆ, ಪ್ರತಿ ಗ್ರಾಮದ ಸಾಮಾನ್ಯ ಮಾಹಿತಿ ಲಭ್ಯವಾಗುವಂತೆ ಮಾಡಬೇಕೆಂಬ ಆಸೆ ಇದೆ’ ಎಂದು ಎಂ.ಎ.ನದಾಫ ಹೇಳಿದರು.</p>.<p>‘ಸರ್ಕಾರಿ ಅಧಿಕಾರಿ ಎಂ.ಎ.ನದಾಫ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಸಾರ್ವಜನಿಕರ ಸಹಕಾರ ಪಡೆದು ಕಚೇರಿ ಅಭಿವೃದ್ಧಿ ಮಾಡಿರುವುದು ಮಾದರಿ’ ಎನ್ನುತ್ತಾರೆ ಸ್ಥಳೀಯ ಮುಖಂಡ ಮಲ್ಲಪ್ಪ ಮಠದ ಹಾಗೂ ಬೀರಪ್ಪ ಎಸ್. ಬಂಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡಂಬಳ(ಗದಗ): </strong>ಸರ್ಕಾರಿ ಕಚೇರಿ ಜನಸ್ನೇಹಿಯಾಗಿ ಇರಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು ಎಂಬ ಉದ್ದೇಶದಿಂದ ₹1.20 ಲಕ್ಷ ಸ್ವಂತ ಹಣ ವಿನಿಯೋಗಿಸಿ ಸರ್ಕಾರಿ ಕಟ್ಟಡವನ್ನು ದುರಸ್ತಿಗೊಳಿಸಿರುವ ಇಲ್ಲಿನ ಕಂದಾಯ ನಿರೀಕ್ಷಕ ಎಂ.ಎ.ನದಾಫ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.</p>.<p>15 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಕಂದಾಯ ನಿರೀಕ್ಷಕರ ಕಟ್ಟಡ ದುರಸ್ತಿಗೆ ಬಂದಿತ್ತು. ಅವ್ಯವಸ್ಥೆಯಿಂದ ಕೂಡಿದ್ದ ಕಟ್ಟಡದ ನವೀಕರಣಕ್ಕೆ ಅವರು ಸರ್ಕಾರದ ಅನುದಾನ ನಿರೀಕ್ಷಿಸದೆ, ಸಾರ್ವಜನಿಕರ ಸಹಕಾರದೊಂದಿಗೆ ಚೆಂದಗಾಣಿಸಿದ್ದಾರೆ.</p>.<p>ಕಟ್ಟಡದ ಆವರಣದಲ್ಲಿನಮುಳ್ಳುಕಂಟಿಗಳನ್ನು ಸ್ವಚ್ಛಗೊಳಿಸಿ, ಸುತ್ತಲಿನ ನಾಲ್ಕು ಅಡಿ ಪ್ರದೇಶಕ್ಕೆ ಸಿಮೆಂಟ್ ಹಾಕಿಸಿದ್ದಾರೆ. ವಿದ್ಯುತ್ ಸಂಪರ್ಕ ನವೀಕರಣಗೊಳಿಸಿದ್ದಾರೆ. ಕಟ್ಟಡ ದುರಸ್ತಿ ಮಾಡಿಸುವುದರ ಜತೆಗೆ ಬಣ್ಣ ಹಚ್ಚಿಸಿದ್ದಾರೆ. ಕೊಠಡಿಗಳಿಗೆ ನೆಲಹಾಸು ಹಾಗೂ ಕಿಟಕಿ, ಬಾಗಿಲುಗಳಿಗೆ ಪರದೆ ಹಾಕಿಸಿದ್ದಾರೆ.</p>.<p>‘ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದು ವೈಬ್ಸೈಟ್ ರೂಪಿಸಿ, ಹೋಬಳಿ ವ್ಯಾಪ್ತಿಯ ಗ್ರಾಮಗಳ ಜನಸಂಖ್ಯೆ, ಶಾಲೆಗಳ ಸಂಖ್ಯೆ, ಪ್ರತಿ ಗ್ರಾಮದ ಸಾಮಾನ್ಯ ಮಾಹಿತಿ ಲಭ್ಯವಾಗುವಂತೆ ಮಾಡಬೇಕೆಂಬ ಆಸೆ ಇದೆ’ ಎಂದು ಎಂ.ಎ.ನದಾಫ ಹೇಳಿದರು.</p>.<p>‘ಸರ್ಕಾರಿ ಅಧಿಕಾರಿ ಎಂ.ಎ.ನದಾಫ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಸಾರ್ವಜನಿಕರ ಸಹಕಾರ ಪಡೆದು ಕಚೇರಿ ಅಭಿವೃದ್ಧಿ ಮಾಡಿರುವುದು ಮಾದರಿ’ ಎನ್ನುತ್ತಾರೆ ಸ್ಥಳೀಯ ಮುಖಂಡ ಮಲ್ಲಪ್ಪ ಮಠದ ಹಾಗೂ ಬೀರಪ್ಪ ಎಸ್. ಬಂಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>