<p><strong>ಶಿರಹಟ್ಟಿ:</strong> ಕಳೆದ ವರ್ಷಕ್ಕಿಂತ ಈ ವರ್ಷ ತಾಲ್ಲೂಕಿನಲ್ಲಿ ಈರುಳ್ಳಿ ಬೆಳೆಗಳು ಉತ್ತಮವಾಗಿದ್ದವು. ಆದರೆ ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆಯುತ್ತಿದೆ.</p>.<p>ಈ ವರ್ಷ ಮುಂಗಾರು ಹಂಗಾಮಿನಲ್ಲಿ ಶಿರಹಟ್ಟಿ ತಾಲ್ಲೂಕಿನ ವ್ಯಾಪ್ತಿಯಲ್ಲಿ 1,320 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿತ್ತು. ಮುಂಗಾರು ಮಳೆ ಸಮೃದ್ಧವಾಗಿ ಆಗಿದ್ದರಿಂದ ಈ ವರ್ಷ ಬಂಪರ್ ಬೆಳೆ ನಿರೀಕ್ಷಿಸಲಾಗಿತ್ತು.</p>.<p>ಸದ್ಯ ಮಾರುಕಟ್ಟೆಯಲ್ಲಿ ಒಂದು ಕ್ವಿಂಟಲ್ ಈರುಳ್ಳಿಗೆ 900 ರಿಂದ ₹1,400 ಇದ್ದು, ಮಾಡಿದ ಖರ್ಚು ಭರಿಸಲಾಗದ ಪರಿಸ್ಥಿತಿ ಎದುರಾಗಿದೆ.</p>.<p>‘ಎಕರೆಗೆ ₹20 ಸಾವಿರ ಖರ್ಚು ಮಾಡಿದ್ದೆವು. ನಾವು ಸಂಕಷ್ಟದಲ್ಲಿದ್ದೇವೆ. ಸಂಬಂಧ ಪಟ್ಟ ಅಧಿಕಾರಿಗಳು ನಮ್ಮ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರ ಕಷ್ಟಗಳನ್ನು ಪರಿಹರಿಸಬೇಕು’ ಎಂದು ಈರುಳ್ಳಿ ಬೆಳೆದ ತಾಲ್ಲೂಕಿನ ಭಾವನೂರು ಗ್ರಾಮದ ರೈತರಾದ ಹನುಮಂತಪ್ಪ ಬದಮ್ಮನವರ, ಫಕ್ಕೀರಗೌಡ ಪಾಟೀಲ ತಮ್ಮ ಅಳಲನ್ನು ತೋಡಿಕೊಂಡಿರು.</p>.<p>‘ಕಳೆದ ವರ್ಷ ಈರುಳ್ಳಿಗೆ ಬಂಗಾರದ ಬೆಲೆ ಇತ್ತು. ಅದೇ ನಿರೀಕ್ಷೆಯಲ್ಲಿ ಈರುಳ್ಳಿ ಬೆಳೆದಿದ್ದೆ. ಈಗ ದಿಕ್ಕು ತೋಚದಂತಾಗಿದೆ. ಸರ್ಕಾರ ನಮ್ಮ ನೆರವಿಗೆ ನಿಲ್ಲಬೇಕು’ ಎಂದು ಸುಗಮನಹಳ್ಳಿ ಗ್ರಾಮದ ರೈತ ಬಸವಣ್ಣೆಪ್ಪ.ಚ.ಜಕ್ಕಲಿ ಒತ್ತಾಯಿಸಿದರು.</p>.<p>‘ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನಾ ಕಾರ್ಯ ಕೈಗೊಂಡಿದ್ದು, ಸಮೀಕ್ಷಾ ಮಾಹಿತಿಯನ್ನು ಶೀಘ್ರದಲ್ಲೇ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಗುವುದು’ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ:</strong> ಕಳೆದ ವರ್ಷಕ್ಕಿಂತ ಈ ವರ್ಷ ತಾಲ್ಲೂಕಿನಲ್ಲಿ ಈರುಳ್ಳಿ ಬೆಳೆಗಳು ಉತ್ತಮವಾಗಿದ್ದವು. ಆದರೆ ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆಯುತ್ತಿದೆ.</p>.<p>ಈ ವರ್ಷ ಮುಂಗಾರು ಹಂಗಾಮಿನಲ್ಲಿ ಶಿರಹಟ್ಟಿ ತಾಲ್ಲೂಕಿನ ವ್ಯಾಪ್ತಿಯಲ್ಲಿ 1,320 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿತ್ತು. ಮುಂಗಾರು ಮಳೆ ಸಮೃದ್ಧವಾಗಿ ಆಗಿದ್ದರಿಂದ ಈ ವರ್ಷ ಬಂಪರ್ ಬೆಳೆ ನಿರೀಕ್ಷಿಸಲಾಗಿತ್ತು.</p>.<p>ಸದ್ಯ ಮಾರುಕಟ್ಟೆಯಲ್ಲಿ ಒಂದು ಕ್ವಿಂಟಲ್ ಈರುಳ್ಳಿಗೆ 900 ರಿಂದ ₹1,400 ಇದ್ದು, ಮಾಡಿದ ಖರ್ಚು ಭರಿಸಲಾಗದ ಪರಿಸ್ಥಿತಿ ಎದುರಾಗಿದೆ.</p>.<p>‘ಎಕರೆಗೆ ₹20 ಸಾವಿರ ಖರ್ಚು ಮಾಡಿದ್ದೆವು. ನಾವು ಸಂಕಷ್ಟದಲ್ಲಿದ್ದೇವೆ. ಸಂಬಂಧ ಪಟ್ಟ ಅಧಿಕಾರಿಗಳು ನಮ್ಮ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರ ಕಷ್ಟಗಳನ್ನು ಪರಿಹರಿಸಬೇಕು’ ಎಂದು ಈರುಳ್ಳಿ ಬೆಳೆದ ತಾಲ್ಲೂಕಿನ ಭಾವನೂರು ಗ್ರಾಮದ ರೈತರಾದ ಹನುಮಂತಪ್ಪ ಬದಮ್ಮನವರ, ಫಕ್ಕೀರಗೌಡ ಪಾಟೀಲ ತಮ್ಮ ಅಳಲನ್ನು ತೋಡಿಕೊಂಡಿರು.</p>.<p>‘ಕಳೆದ ವರ್ಷ ಈರುಳ್ಳಿಗೆ ಬಂಗಾರದ ಬೆಲೆ ಇತ್ತು. ಅದೇ ನಿರೀಕ್ಷೆಯಲ್ಲಿ ಈರುಳ್ಳಿ ಬೆಳೆದಿದ್ದೆ. ಈಗ ದಿಕ್ಕು ತೋಚದಂತಾಗಿದೆ. ಸರ್ಕಾರ ನಮ್ಮ ನೆರವಿಗೆ ನಿಲ್ಲಬೇಕು’ ಎಂದು ಸುಗಮನಹಳ್ಳಿ ಗ್ರಾಮದ ರೈತ ಬಸವಣ್ಣೆಪ್ಪ.ಚ.ಜಕ್ಕಲಿ ಒತ್ತಾಯಿಸಿದರು.</p>.<p>‘ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನಾ ಕಾರ್ಯ ಕೈಗೊಂಡಿದ್ದು, ಸಮೀಕ್ಷಾ ಮಾಹಿತಿಯನ್ನು ಶೀಘ್ರದಲ್ಲೇ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಗುವುದು’ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>