ಮುಂಡರಗಿ, ರೋಣ, ಲಕ್ಷ್ಮೆಶ್ವರ ಎಪಿಎಂಸಿಗಳಲ್ಲಿ ವರ್ತಕರ ಸಂಘಗಳು ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿ, ಸೆಸ್ ಕೈಬಿಡಬೇಕು ಎಂದು ಒತ್ತಾಯಿಸಿದರು. ಮುಂಡರಗಿ ಎಪಿಎಂಸಿ ವರ್ತಕರು ಸೋಮವಾರ ವಹಿವಾಟು ಸ್ಥಗಿತಗೊಳಿಸಿ ಎಪಿಎಂಸಿ ಕಾರ್ಯದರ್ಶಿ ದೀಪಾ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಲಕ್ಷ್ಮೇಶ್ವರ ಎಪಿಎಂಸಿ ವರ್ತಕರ ಸಂಘದ ಸದಸ್ಯರು ಎಪಿಎಂಸಿ ಕಾರ್ಯದರ್ಶಿ ಎನ್.ಎ.ಲಕ್ಕುಂಡಿ ಅವರಿಗೆ ಮನವಿ ಸಲ್ಲಿಸಿದರು.