<p><strong>ರೋಣ:</strong> ರೈತರು ರಾಸಾಯನಿಕಗಳನ್ನು ಬಳಸದೆ ಸಾವಯವ ಮಾದರಿಯಲ್ಲಿ ಕೃಷಿ ನಡೆಸಿದರೆ ಆರೋಗ್ಯದ ಜೊತೆಗೆ ಕೃಷಿ ವೆಚ್ಚಗಳು ಕಡಿಮೆಯಾಗಿ ಲಾಭ ಪಡೆಯಬಹುದು ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಸಾಬ್ ಹೊಸಮನಿ ಹೇಳಿದರು.</p>.<p>ತಾಲ್ಲೂಕಿನ ಕೊತಬಾಳ ಗ್ರಾಮದಲ್ಲಿ ಕೆಎಸ್ಎಸ್ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವತಿಯಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದಲ್ಲಿ ಶನಿವಾರ ಸಾವಯವ ಕೃಷಿ ಕುರಿತು ಉಪನ್ಯಾಸ ನೀಡಿದರು.</p>.<p>ದೇಶದಲ್ಲಿ ಹಸಿರು ಕ್ರಾಂತಿಯ ನಂತರ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆ ಅತಿಯಾಗಿದ್ದು ಇದರಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಅಂತರ್ಜಲ ಕೂಡ ಸಂಪೂರ್ಣ ಕಲುಷಿತಗೊಳ್ಳುತ್ತಿದ್ದು ಇದನ್ನು ತಡೆಯಲು ಸಾವಯುವ ಕೃಷಿ ಕೈಗೊಳ್ಳುವುದು ಅವಶ್ಯಕವಾಗಿದೆ.</p>.<p>ರೈತರು ಪಶು ಸಾಕಾಣಿಕೆ ಮಾಡುವುದರಿಂದ ಹೈನೋತ್ಪಾದನೆ ಮೂಲಕ ಆದಾಯ ಗಳಿಸಬಹುದು ಜೊತೆಗೆ ಕೃಷಿ ತ್ಯಾಜ್ಯಗಳಿಂದ ಗೊಬ್ಬರ ಉತ್ಪಾದನೆ ಮಾಡಬಹುದಾಗಿರುವುದರಿಂದ ರೈತರಿಗೆ ಉಳಿತಾಯದ ಜೊತೆಗೆ ಅಧಿಕ ಖರ್ಚು ಮಾಡುವುದು ಕಡಿಮೆಯಾಗಿ ಕೃಷಿಯನ್ನು ಲಾಭದಾಯಕ ವನ್ನಾಗಿ ಮಾಡಬಹುದು ಎಂದರು.</p>.<p>ಕಾರ್ಯಕ್ರಮದಲ್ಲಿ ಎಚ್ಪಿಎಸ್ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮಲ್ಲಪ್ಪ ನಾಲ್ವಾಡದ, ಕೆಎಸ್ಎಸ್ ಕಾಲೇಜಿನ ಪ್ರಾಚಾರ್ಯ ಸಿ.ಬಿ.ಪೋಲಿಸ ಪಾಟೀಲ, ಎನ್ಎಸ್ಎಸ್ ಘಟಕದ ಎಸ್.ಆರ್.ನದಾಫ, ಉಪನ್ಯಾಸಕರಾದ ಎಂ.ಎಚ್.ನಾಯ್ಕರ, ಎಸ್.ಎಸ್.ಮಠದ, ಕೆ.ಕೆ.ಹಿರೇಕಲ್ಲಪ್ಪನವರ, ಬಸವರಾಜ ಜಂಗಣ್ಣವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ:</strong> ರೈತರು ರಾಸಾಯನಿಕಗಳನ್ನು ಬಳಸದೆ ಸಾವಯವ ಮಾದರಿಯಲ್ಲಿ ಕೃಷಿ ನಡೆಸಿದರೆ ಆರೋಗ್ಯದ ಜೊತೆಗೆ ಕೃಷಿ ವೆಚ್ಚಗಳು ಕಡಿಮೆಯಾಗಿ ಲಾಭ ಪಡೆಯಬಹುದು ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಸಾಬ್ ಹೊಸಮನಿ ಹೇಳಿದರು.</p>.<p>ತಾಲ್ಲೂಕಿನ ಕೊತಬಾಳ ಗ್ರಾಮದಲ್ಲಿ ಕೆಎಸ್ಎಸ್ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವತಿಯಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದಲ್ಲಿ ಶನಿವಾರ ಸಾವಯವ ಕೃಷಿ ಕುರಿತು ಉಪನ್ಯಾಸ ನೀಡಿದರು.</p>.<p>ದೇಶದಲ್ಲಿ ಹಸಿರು ಕ್ರಾಂತಿಯ ನಂತರ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆ ಅತಿಯಾಗಿದ್ದು ಇದರಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಅಂತರ್ಜಲ ಕೂಡ ಸಂಪೂರ್ಣ ಕಲುಷಿತಗೊಳ್ಳುತ್ತಿದ್ದು ಇದನ್ನು ತಡೆಯಲು ಸಾವಯುವ ಕೃಷಿ ಕೈಗೊಳ್ಳುವುದು ಅವಶ್ಯಕವಾಗಿದೆ.</p>.<p>ರೈತರು ಪಶು ಸಾಕಾಣಿಕೆ ಮಾಡುವುದರಿಂದ ಹೈನೋತ್ಪಾದನೆ ಮೂಲಕ ಆದಾಯ ಗಳಿಸಬಹುದು ಜೊತೆಗೆ ಕೃಷಿ ತ್ಯಾಜ್ಯಗಳಿಂದ ಗೊಬ್ಬರ ಉತ್ಪಾದನೆ ಮಾಡಬಹುದಾಗಿರುವುದರಿಂದ ರೈತರಿಗೆ ಉಳಿತಾಯದ ಜೊತೆಗೆ ಅಧಿಕ ಖರ್ಚು ಮಾಡುವುದು ಕಡಿಮೆಯಾಗಿ ಕೃಷಿಯನ್ನು ಲಾಭದಾಯಕ ವನ್ನಾಗಿ ಮಾಡಬಹುದು ಎಂದರು.</p>.<p>ಕಾರ್ಯಕ್ರಮದಲ್ಲಿ ಎಚ್ಪಿಎಸ್ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮಲ್ಲಪ್ಪ ನಾಲ್ವಾಡದ, ಕೆಎಸ್ಎಸ್ ಕಾಲೇಜಿನ ಪ್ರಾಚಾರ್ಯ ಸಿ.ಬಿ.ಪೋಲಿಸ ಪಾಟೀಲ, ಎನ್ಎಸ್ಎಸ್ ಘಟಕದ ಎಸ್.ಆರ್.ನದಾಫ, ಉಪನ್ಯಾಸಕರಾದ ಎಂ.ಎಚ್.ನಾಯ್ಕರ, ಎಸ್.ಎಸ್.ಮಠದ, ಕೆ.ಕೆ.ಹಿರೇಕಲ್ಲಪ್ಪನವರ, ಬಸವರಾಜ ಜಂಗಣ್ಣವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>