ಮಳೆಗಾಲ ಆರಂಭಗೊಂಡಿದ್ದರೂ ಪೂರ್ಣ ಪ್ರಮಾಣದಲ್ಲಿ ಚರಂಡಿ ಸ್ವಚ್ಛತೆಗೆ ಕ್ರಮವಹಿಸದ ಕಾರಣ ಚರಂಡಿಗಳು ಉಕ್ಕಿ ಹರಿದವು. ಪಾದಚಾರಿಗಳು ಮೂಗು ಮುಚ್ಚಿಕೊಂಡು, ಕೊಳಚೆ ನೀರನ್ನು ತುಳಿದುಕೊಂಡೇ ಅಡ್ಡಾಡಿದರು. ‘ನಗರದ ಸ್ವಚ್ಛತೆಗೆ ಕಾಳಜಿ ವಹಿಸದ, ನಗರಸಭೆ ಅಧಿಕಾರಿಗಳು ನಾಲಾಯಕ್’ ಎಂದು ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದರು.