‘ಲಿಂಗೈಕ್ಯ ಪಂಡಿತ್ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸುವಂತೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮನವಿ ಸಲ್ಲಿಸಲಾಗಿತ್ತು. ಆಗ ಅವರು, ಸಕಾರಾತ್ಮಕವಾಗಿ ಸ್ಪಂದಿಸಿದ್ದರಲ್ಲದೇ ಅದೇ ದಿನವೇ ಕನ್ನಡ ಮತ್ತು ಸಂಸ್ಕೃತ ಇಲಾಖೆಗೆ ಶಿಫಾರಸು ಪತ್ರವನ್ನೂ ಕಳಿಸಿದ್ದರು. ಬಳಿಕ ಈ ವಿಷಯ ವಿಳಂಬಗತಿಯಲ್ಲಿ ಸಾಗಿದ್ದನ್ನು ಗಮನಿಸಿದ ಸಚಿವರಾದ ಸಿ.ಸಿ.ಪಾಟೀಲ, ಶ್ರೀರಾಮುಲು, ಶಾಸಕ ಕಳಕಪ್ಪ ಬಂಡಿ ಹಾಗೂ ಯುವಮುಖಂಡ ಅನಿಲ್ ಮೆಣಸಿನಕಾಯಿ ಸಹಕಾರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಸ್ಥಾಪನೆಗೆ ಅನುಮತಿ ನೀಡಿರುವುದು ಸಂತಸ ತಂದಿದೆ’ ಎಂದು ಹೇಳಿದರು.