<p><strong>ಗದಗ: </strong>‘ಎರಡು ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಜಿಲ್ಲೆಯ 117 ಗ್ರಾಮ ಪಂಚಾಯ್ತಿಗಳ ಪೈಕಿ ಬಿಜೆಪಿ ಬೆಂಬಲಿಗರು ಕನಿಷ್ಠ 110ರಲ್ಲಿ ಗೆಲವು ಸಾಧಿಸಲಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ ಮಾಳಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪಕ್ಷದ ನಾಯಕರನ್ನು ಗೆಲ್ಲಿಸಲು ಶ್ರಮಿಸಿದ ಕಾರ್ಯಕರ್ತರ ಗೆಲುವಿಗಾಗಿ ಬಿಜೆಪಿ ನಾಯಕರೆಲ್ಲರೂ ಕೆಲಸ ಮಾಡಲಿದ್ದಾರೆ. ಇದೊಂದು ಇತಿಹಾಸ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರ ಗೆಲುವಿಗೆ ಪಂಚರತ್ನ ಸೂತ್ರದಡಿ ಕಾರ್ಯತಂತ್ರ ರೂಪಿಸಲಾಗಿದೆ’ ಎಂದು ಅವರು ಹೇಳಿದರು.</p>.<p>ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 70 ವರ್ಷಗಳಾದರೂ ಗದಗ ಶಾಸಕರ ಸ್ವಗ್ರಾಮ ಹುಲಕೋಟಿ, ಕುರ್ತಕೋಟಿಯ ಜನತೆಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ’ ಎಂದು ಆರೋಪ ಮಾಡಿದರು.</p>.<p>‘70 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್, ಗಾಂಧೀಜಿ ಹೆಸರು ಬಳಸಿಕೊಂಡು ರಾಜಕಾರಣ ಮಾಡಿತೇ ಹೊರತು ಗಾಂಧೀಜಿ ಕನಸುಗಳನ್ನು ನನಸಾಗಿಸಲಿಲ್ಲ’ ಎಂದು ದೂರಿದರು.</p>.<p>‘ಗದಗ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಿಂದಿನ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಬಯಲು ಬಹಿರ್ದೆಸೆ ಮುಕ್ತ ಗ್ರಾಮ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಘೋಷಿಸ<br />ಅನುದಾನ ಖರ್ಚು ಮಾಡಿದರು. ಆದರೆ, ತಮ್ಮದೇ ಸ್ವಗ್ರಾಮದಲ್ಲಿ ಅದು ಕಾರ್ಯರೂಪಕ್ಕೆ ಬಂದಿಲ್ಲ’ ಎಂದು ಲೇವಡಿ ಮಾಡಿದರು.</p>.<p>‘ತುಂಗಭದ್ರಾ ನದಿ ನೀರನ್ನು ತಮ್ಮ ಗ್ರಾಮಕ್ಕೆ ಒದಗಿಸುವುದರ ಜತೆಗೆ ತಾಲ್ಲೂಕಿನ 12 ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೂ ಒದಗಿಸಿದ್ದರೆ ಅನುಕೂಲವಾಗುತ್ತಿತ್ತು’ ಎಂದರು.</p>.<p>‘ಹುಲಕೋಟಿ ಮಿಲ್ಗಳಲ್ಲಿ ಕೆಲಸ ಮಾಡುತ್ತಿದ್ದ ಹಲವರು ಮಿಲ್ ಬಂದ ಆದ ಬಳಿಕ ಬೇರೆ ಕಡೆಗೆ ಹೋಗಿದ್ದರೂ ಅವರ ಹೆಸರು ಇನ್ನೂ ಅಲ್ಲಿನ ಮತದಾರರ ಪಟ್ಟಿಯಲ್ಲಿದೆ. ಜತೆಗೆ ಅಸುಂಡಿ, ಶ್ಯಾಗೋಟಿಯ ಕೆಲವರ ಹೆಸರೂ ಹುಲಕೋಟಿಯ ಮತದಾರರ ಪಟ್ಟಿಯಲ್ಲಿವೆ’ ಎಂದು ಆರೋಪಿಸಿದ ಅವರು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.</p>.<p>ನ್ಯಾಯಯುತ ಚುನಾವಣೆಗಾಗಿ ಕರ್ತವ್ಯಕ್ಕೆ ಸ್ಥಳೀಯ ಅಧಿಕಾರಿಗಳನ್ನು ನೇಮಿಸದೇ ಹೊರ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಕಾಂತಿಲಾಲ್ ಬನ್ಸಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ರಾಘವೇಂದ್ರ ಯಳವತ್ತಿ, ಭದ್ರೇಶ ಕುಸ್ಲಾಪೂರ, ಅನಿಲ ಅಬ್ಬಿಗೇರಿ, ಜಗದೀಶ ಚಿಂಚಲಿ, ಸುರೇಶ ಚವ್ಹಾಣ, ರಮೇಶ ಸಜ್ಜಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಎರಡು ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಜಿಲ್ಲೆಯ 117 ಗ್ರಾಮ ಪಂಚಾಯ್ತಿಗಳ ಪೈಕಿ ಬಿಜೆಪಿ ಬೆಂಬಲಿಗರು ಕನಿಷ್ಠ 110ರಲ್ಲಿ ಗೆಲವು ಸಾಧಿಸಲಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ ಮಾಳಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪಕ್ಷದ ನಾಯಕರನ್ನು ಗೆಲ್ಲಿಸಲು ಶ್ರಮಿಸಿದ ಕಾರ್ಯಕರ್ತರ ಗೆಲುವಿಗಾಗಿ ಬಿಜೆಪಿ ನಾಯಕರೆಲ್ಲರೂ ಕೆಲಸ ಮಾಡಲಿದ್ದಾರೆ. ಇದೊಂದು ಇತಿಹಾಸ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರ ಗೆಲುವಿಗೆ ಪಂಚರತ್ನ ಸೂತ್ರದಡಿ ಕಾರ್ಯತಂತ್ರ ರೂಪಿಸಲಾಗಿದೆ’ ಎಂದು ಅವರು ಹೇಳಿದರು.</p>.<p>ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 70 ವರ್ಷಗಳಾದರೂ ಗದಗ ಶಾಸಕರ ಸ್ವಗ್ರಾಮ ಹುಲಕೋಟಿ, ಕುರ್ತಕೋಟಿಯ ಜನತೆಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ’ ಎಂದು ಆರೋಪ ಮಾಡಿದರು.</p>.<p>‘70 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್, ಗಾಂಧೀಜಿ ಹೆಸರು ಬಳಸಿಕೊಂಡು ರಾಜಕಾರಣ ಮಾಡಿತೇ ಹೊರತು ಗಾಂಧೀಜಿ ಕನಸುಗಳನ್ನು ನನಸಾಗಿಸಲಿಲ್ಲ’ ಎಂದು ದೂರಿದರು.</p>.<p>‘ಗದಗ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಿಂದಿನ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಬಯಲು ಬಹಿರ್ದೆಸೆ ಮುಕ್ತ ಗ್ರಾಮ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಘೋಷಿಸ<br />ಅನುದಾನ ಖರ್ಚು ಮಾಡಿದರು. ಆದರೆ, ತಮ್ಮದೇ ಸ್ವಗ್ರಾಮದಲ್ಲಿ ಅದು ಕಾರ್ಯರೂಪಕ್ಕೆ ಬಂದಿಲ್ಲ’ ಎಂದು ಲೇವಡಿ ಮಾಡಿದರು.</p>.<p>‘ತುಂಗಭದ್ರಾ ನದಿ ನೀರನ್ನು ತಮ್ಮ ಗ್ರಾಮಕ್ಕೆ ಒದಗಿಸುವುದರ ಜತೆಗೆ ತಾಲ್ಲೂಕಿನ 12 ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೂ ಒದಗಿಸಿದ್ದರೆ ಅನುಕೂಲವಾಗುತ್ತಿತ್ತು’ ಎಂದರು.</p>.<p>‘ಹುಲಕೋಟಿ ಮಿಲ್ಗಳಲ್ಲಿ ಕೆಲಸ ಮಾಡುತ್ತಿದ್ದ ಹಲವರು ಮಿಲ್ ಬಂದ ಆದ ಬಳಿಕ ಬೇರೆ ಕಡೆಗೆ ಹೋಗಿದ್ದರೂ ಅವರ ಹೆಸರು ಇನ್ನೂ ಅಲ್ಲಿನ ಮತದಾರರ ಪಟ್ಟಿಯಲ್ಲಿದೆ. ಜತೆಗೆ ಅಸುಂಡಿ, ಶ್ಯಾಗೋಟಿಯ ಕೆಲವರ ಹೆಸರೂ ಹುಲಕೋಟಿಯ ಮತದಾರರ ಪಟ್ಟಿಯಲ್ಲಿವೆ’ ಎಂದು ಆರೋಪಿಸಿದ ಅವರು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.</p>.<p>ನ್ಯಾಯಯುತ ಚುನಾವಣೆಗಾಗಿ ಕರ್ತವ್ಯಕ್ಕೆ ಸ್ಥಳೀಯ ಅಧಿಕಾರಿಗಳನ್ನು ನೇಮಿಸದೇ ಹೊರ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಕಾಂತಿಲಾಲ್ ಬನ್ಸಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ರಾಘವೇಂದ್ರ ಯಳವತ್ತಿ, ಭದ್ರೇಶ ಕುಸ್ಲಾಪೂರ, ಅನಿಲ ಅಬ್ಬಿಗೇರಿ, ಜಗದೀಶ ಚಿಂಚಲಿ, ಸುರೇಶ ಚವ್ಹಾಣ, ರಮೇಶ ಸಜ್ಜಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>