1984ರಲ್ಲಿ ತಾಲ್ಲೂಕಿನಲ್ಲಿ ತೀವ್ರ ಬರಗಾಲ ಉಂಟಾಗಿತ್ತು. ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಆಗ ಕುರಡಗಿ ಗ್ರಾಮಕ್ಕೆ ಬಂದಿದ್ದ ಶ್ರೀಗಳು ₹ 7 ಲಕ್ಷ ಖರ್ಚು ಮಾಡಿ ಗ್ರಾಮದಲ್ಲಿ ಕೆರೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು. ಈ ಮೂಲಕ ಗ್ರಾಮಸ್ಥರಿಗೆ ಕೆಲಸವನ್ನೂ ನೀಡಿ ಅಕ್ಕಿ, ದವಸ ಧಾನ್ಯ, ಕೂಲಿಯನ್ನು ಸಹ ನೀಡಿ ಅವರಿಗೆ ಬದುಕು ಕಟ್ಟಿಕೊಳ್ಳಲು ನೆರವಾಗಿದ್ದರು.