‘ಸಂಪ್ರದಾಯಬದ್ಧ ಮಠಾಧೀಶರ ವಿರೋಧದ ಮಧ್ಯೆಯೂ ಅವರು ತಮ್ಮ ಸಂಪ್ರದಾಯವನ್ನು ಬದಿಗಿರಿಸಿ, ಪ್ರಪ್ರಥಮವಾಗಿ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಕಾರ್ಯಕ್ರಮಕ್ಕೆ ಬಂದು, ಮಠ ಮಾಡುತ್ತಿರುವ ಸೇವಾ ಕಾರ್ಯಗಳನ್ನು ಮೆಚ್ಚಿಕೊಂಡಿದ್ದರು. ಲಿಂಗಾಯತ ಮಠಗಳು ಬಡವಿದ್ಯಾರ್ಥಿಗಳಿಗೆ ಅನ್ನ-ಆಶ್ರಯ ನೀಡಿ ಶೈಕ್ಷಣಿಕ ಅಭಿವೃದ್ಧಿ ಸಾಧಿಸುತ್ತಿರುವುದನ್ನು ಅವರು ಬಹುವಾಗಿ ಮೆಚ್ಚಿಕೊಂಡಿದ್ದರು. ಹೀಗೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ಕ್ರಮದಿಂದ ಲಿಂಗಾಯತ ಮಠಗಳು ದೇಶದ ಎಲ್ಲ ಮಠ, ಮಠಾಧೀಶರಿಗೆ ಮಾದರಿಯಾಗಿವೆ’ ಎಂದೂ ಅವರು ಅಭಿಮಾನದಿಂದ ಹೇಳುತ್ತಿದ್ದರು’ ಎಂದು ತೋಂಟದ ಶ್ರೀಗಳು ಸ್ಮರಿಸಿದ್ದಾರೆ.