ನರಗುಂದ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ರಹಿತ ನಿಷ್ಕ್ರಿಯ ಆಡಳಿತದಿಂದ ರಾಜ್ಯದ ಮತದಾರರು, ಸ್ವತಃ ಕಾಂಗ್ರೆಸ್ ನಾಯಕರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಮತದಾರರು ಮತ್ತೇ ಬಿಜೆಪಿ ಆಡಳಿತ ಬಯಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವು ನಿಶ್ಚಿತ’ ಎಂದು ಶಾಸಕ ಸಿ.ಸಿ.ಪಾಟೀಲ ಹೇಳಿದರು.