<p><strong>ಲಕ್ಷ್ಮೇಶ್ವರ</strong>: ‘ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ಅರ್ಹ ಪ್ರಜೆ ಮತದಾನ ಮಾಡುವುದು ಕಡ್ಡಾಯವಾಗಿದೆ’ ಎಂದು ಲಕ್ಷ್ಮೇಶ್ವರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಹೇಳಿದರು.</p>.<p>ಲಕ್ಷ್ಮೇಶ್ವರದಲ್ಲಿ ಸೋಮವಾರ ಅಂಗವಿಕಲರ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು. ಈ ಬಗ್ಗೆ ಅಂಗವಿಕಲರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರೂ ಮತದಾನ ಮಾಡುವಂತೆ ಉತ್ತೇಜಿಸುವುದು ಪ್ರಚಾರದ ಉದ್ದೇಶ’ ಎಂದರು.</p>.<p>ತಾಲ್ಲೂಕು ಪಂಚಾಯ್ತಿ ಕಚೇರಿಯಿಂದ ಆರಂಭವಾದ ಜಾಥಾ ಪುರಸಭೆ, ಸರ್ಕಾರಿ ಆಸ್ಪತ್ರೆ, ಶಿಗ್ಲಿ ನಾಕಾ ಮೂಲಕ ಹೊಸ ಬಸ್ ನಿಲ್ದಾಣಕ್ಕೆ ಬಂದು ಕೊನೆಗೊಂಡಿತು.</p>.<p>ತಾಲ್ಲೂಕು ಪುನರ್ವಸತಿ ಕಾರ್ಯಕರ್ತೆ ಎಂಆರ್ಡಬ್ಲೂ ಭಾರತಿ ಮೂರಶಿಳ್ಳಿ ಮಾತನಾಡಿ, ‘18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕೆ ಯುವ ಜನರು ಮತದಾನದಲ್ಲಿ ಭಾಗಿಯಾಗುವುದು ಅತ್ಯವಶ್ಯ’ ಎಂದರು.</p>.<p>ಮಂಜುನಾಥ ರಾಮಗೇರಿ, ಶರಣಪ್ಪ ಚಕಾರದ, ನಾಗಪ್ಪ ಅಣ್ಣಿಗೇರಿ, ಸುಮಂಗಲಾ ಬೆಟಗೇರಿ, ನಾಮದೇವ ಲಮಾಣಿ, ಜಗದೀಶ ಕಮ್ಮಾರ, ಬಸವರಾಜ ತಳವಾರ, ವನಜಾಕ್ಷಿ ಹಾಲಗಿಮಠ, ಫಕ್ಕೀರೇಶ ಹಡಪದ, ಜಯಕ್ಕ ಲಮಾಣಿ, ಗಾಳೆಮ್ಮ ನಡುವಿನಮನಿ, ಜ್ಯೋತಿ ಗೌಳಿ, ಲಕ್ಷ್ಮವ್ವ ಕರಿನಿಂಗಣ್ಣನವರ, ಜಯಶ್ರೀ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ‘ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ಅರ್ಹ ಪ್ರಜೆ ಮತದಾನ ಮಾಡುವುದು ಕಡ್ಡಾಯವಾಗಿದೆ’ ಎಂದು ಲಕ್ಷ್ಮೇಶ್ವರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಹೇಳಿದರು.</p>.<p>ಲಕ್ಷ್ಮೇಶ್ವರದಲ್ಲಿ ಸೋಮವಾರ ಅಂಗವಿಕಲರ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು. ಈ ಬಗ್ಗೆ ಅಂಗವಿಕಲರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರೂ ಮತದಾನ ಮಾಡುವಂತೆ ಉತ್ತೇಜಿಸುವುದು ಪ್ರಚಾರದ ಉದ್ದೇಶ’ ಎಂದರು.</p>.<p>ತಾಲ್ಲೂಕು ಪಂಚಾಯ್ತಿ ಕಚೇರಿಯಿಂದ ಆರಂಭವಾದ ಜಾಥಾ ಪುರಸಭೆ, ಸರ್ಕಾರಿ ಆಸ್ಪತ್ರೆ, ಶಿಗ್ಲಿ ನಾಕಾ ಮೂಲಕ ಹೊಸ ಬಸ್ ನಿಲ್ದಾಣಕ್ಕೆ ಬಂದು ಕೊನೆಗೊಂಡಿತು.</p>.<p>ತಾಲ್ಲೂಕು ಪುನರ್ವಸತಿ ಕಾರ್ಯಕರ್ತೆ ಎಂಆರ್ಡಬ್ಲೂ ಭಾರತಿ ಮೂರಶಿಳ್ಳಿ ಮಾತನಾಡಿ, ‘18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕೆ ಯುವ ಜನರು ಮತದಾನದಲ್ಲಿ ಭಾಗಿಯಾಗುವುದು ಅತ್ಯವಶ್ಯ’ ಎಂದರು.</p>.<p>ಮಂಜುನಾಥ ರಾಮಗೇರಿ, ಶರಣಪ್ಪ ಚಕಾರದ, ನಾಗಪ್ಪ ಅಣ್ಣಿಗೇರಿ, ಸುಮಂಗಲಾ ಬೆಟಗೇರಿ, ನಾಮದೇವ ಲಮಾಣಿ, ಜಗದೀಶ ಕಮ್ಮಾರ, ಬಸವರಾಜ ತಳವಾರ, ವನಜಾಕ್ಷಿ ಹಾಲಗಿಮಠ, ಫಕ್ಕೀರೇಶ ಹಡಪದ, ಜಯಕ್ಕ ಲಮಾಣಿ, ಗಾಳೆಮ್ಮ ನಡುವಿನಮನಿ, ಜ್ಯೋತಿ ಗೌಳಿ, ಲಕ್ಷ್ಮವ್ವ ಕರಿನಿಂಗಣ್ಣನವರ, ಜಯಶ್ರೀ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>