<p><strong>ಲಕ್ಕುಂಡಿ:</strong> ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಂ. 2ರಿಂದ ಮುಂದಿನ ವರ್ಷದಿಂದ ರಾಸಾಯನಿಕ, ಸಾವಯವ ಗೊಬ್ಬರವನ್ನು ಸಹ ಮಾರಾಟ ಮಾಡಲು ಯೋಜಿಸಿದ್ದು, ಸಂಘದ ಸದಸ್ಯರು, ರೈತರು ಪ್ರೋತ್ಸಾಹ ನೀಡಬೇಕು’ ಎಂದು ಸಂಘದ ಅಧ್ಯಕ್ಷ ರುದ್ರಪ್ಪ ಮುಸ್ಕಿನಭಾವಿ ಹೇಳಿದರು.</p>.<p>ಇಲ್ಲಿನ ಸಹಕಾರ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಹಿಂಗಾರು ಹಂಗಾಮಿನ ಕಡಲೆ ಮತ್ತು ಜೋಳದ ಬೀಜ ವಿತರಿಸಿ ಮಾತನಾಡಿದರು.</p>.<p>‘ಸಂಘವು ರೈತೋಪಯೋಗಿ ಕಾರ್ಯಗಳನ್ನು ಮಾಡುತ್ತಿದ್ದು, ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನನಲ್ಲಿ ಕೃಷಿ ಇಲಾಖೆಯ ಸಹಕಾರದೊಂದಿಗೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಬೆಂಬಲ ಬೆಲೆಯಡಿ ಕಡಲೆ ಖರೀದಿ ಕೇಂದ್ರವನ್ನೂ ತೆರೆಯಲಾಗುತ್ತಿದೆ’ ಎಂದರು.</p>.<p>ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಬಿ. ಬೆಣಕಲ್ಲ ಮಾತನಾಡಿ, ‘ಹಿಂಗಾರು ಹಂಗಾಮಿನಲ್ಲಿ ಕಡಲೆ ಮತ್ತು ಜೋಳದ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಜಮೀನಿನ ಪಹಣಿಪತ್ರ, ಆಧಾರ್ ಕಾರ್ಡ್, ಎಫ್ಐಡಿ ಸಂಖ್ಯೆ ಹಾಗೂ ಎಸ್ಸಿ–ಎಸ್ಟಿ ಸಮಾಜದ ರೈತರು ಈ ದಾಖಲೆಗಳ ಜತೆಗೆ ಜಾತಿ ಪ್ರಮಾಣಪತ್ರ ನೀಡಿ ಬೀಜ ಖರೀದಿಸಬೇಕು’ ಎಂದು ಹೇಳಿದರು.</p>.<p>‘ಸಾಮಾನ್ಯ ರೈತರಿಗೆ 20 ಕೆ.ಜಿ. ಕಡಲೆ ಬೀಜದ ಪ್ಯಾಕೆಟ್ಗೆ ₹1,160, ಜೋಳದ ಪ್ಯಾಕೆಟ್ಗೆ ₹120 ಹಾಗೂ ಎಸ್.ಸಿ–ಎಸ್.ಟಿ ಸಮಾಜದ ರೈತರಿಗೆ ಕಡಲೆಬೀಜ ₹910, ಜೋಳ ₹90 ಕ್ಕೆ ಕೊಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಬೆಟಗೇರಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ರಮೇಶ ಜಟ್ಟಿ ಅವರು, ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಿಗುವ ಬೀಜ, ಗೊಬ್ಬರ, ಕೃಷಿ ಪರಿಕರಗಳ ಕುರಿತು ವಿವರಿಸಿದರು.</p>.<p>ಸಂಘದ ನಿರ್ದೇಶಕರಾದ ಮಲ್ಲನಗೌಡ ಪಾಟೀಲ, ರಾಚಪ್ಪ ನಾಲ್ವಾಡದ ಕಲ್ಲಪ್ಪ ಬೆಟಗೇರಿ, ಗವಿಶಿದ್ದಪ್ಪ ರೇವಡಿ, ಶಂಕ್ರಪ್ಪ ಕುಂಬಾರ, ಅಂದಾನಯ್ಯ ಪತ್ರಿಮಠ, ಫಕ್ಕೀರಯ್ಯ ಪತ್ರಿಮಠ, ನೀಲವ್ವ ರವದಿ, ಅನ್ನಪೂರ್ಣವ್ವ ಹಡಗಲಿ, ಸಕ್ರಪ್ಪ ರಾಮತಾಳ ಇದ್ದರು. </p>.<div><blockquote> ರೈತರ ಅಭಿವೃದ್ದಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಕೃಷಿಕರು ಅವುಗಳ ಸದುಪಯೋಗ ಪಡೆಯಬೇಕು. </blockquote><span class="attribution">ರುದ್ರಪ್ಪ ಮುಸ್ಕಿನಭಾವಿ ಅಧ್ಯಕ್ಷ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಕುಂಡಿ:</strong> ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಂ. 2ರಿಂದ ಮುಂದಿನ ವರ್ಷದಿಂದ ರಾಸಾಯನಿಕ, ಸಾವಯವ ಗೊಬ್ಬರವನ್ನು ಸಹ ಮಾರಾಟ ಮಾಡಲು ಯೋಜಿಸಿದ್ದು, ಸಂಘದ ಸದಸ್ಯರು, ರೈತರು ಪ್ರೋತ್ಸಾಹ ನೀಡಬೇಕು’ ಎಂದು ಸಂಘದ ಅಧ್ಯಕ್ಷ ರುದ್ರಪ್ಪ ಮುಸ್ಕಿನಭಾವಿ ಹೇಳಿದರು.</p>.<p>ಇಲ್ಲಿನ ಸಹಕಾರ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಹಿಂಗಾರು ಹಂಗಾಮಿನ ಕಡಲೆ ಮತ್ತು ಜೋಳದ ಬೀಜ ವಿತರಿಸಿ ಮಾತನಾಡಿದರು.</p>.<p>‘ಸಂಘವು ರೈತೋಪಯೋಗಿ ಕಾರ್ಯಗಳನ್ನು ಮಾಡುತ್ತಿದ್ದು, ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನನಲ್ಲಿ ಕೃಷಿ ಇಲಾಖೆಯ ಸಹಕಾರದೊಂದಿಗೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಬೆಂಬಲ ಬೆಲೆಯಡಿ ಕಡಲೆ ಖರೀದಿ ಕೇಂದ್ರವನ್ನೂ ತೆರೆಯಲಾಗುತ್ತಿದೆ’ ಎಂದರು.</p>.<p>ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಬಿ. ಬೆಣಕಲ್ಲ ಮಾತನಾಡಿ, ‘ಹಿಂಗಾರು ಹಂಗಾಮಿನಲ್ಲಿ ಕಡಲೆ ಮತ್ತು ಜೋಳದ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಜಮೀನಿನ ಪಹಣಿಪತ್ರ, ಆಧಾರ್ ಕಾರ್ಡ್, ಎಫ್ಐಡಿ ಸಂಖ್ಯೆ ಹಾಗೂ ಎಸ್ಸಿ–ಎಸ್ಟಿ ಸಮಾಜದ ರೈತರು ಈ ದಾಖಲೆಗಳ ಜತೆಗೆ ಜಾತಿ ಪ್ರಮಾಣಪತ್ರ ನೀಡಿ ಬೀಜ ಖರೀದಿಸಬೇಕು’ ಎಂದು ಹೇಳಿದರು.</p>.<p>‘ಸಾಮಾನ್ಯ ರೈತರಿಗೆ 20 ಕೆ.ಜಿ. ಕಡಲೆ ಬೀಜದ ಪ್ಯಾಕೆಟ್ಗೆ ₹1,160, ಜೋಳದ ಪ್ಯಾಕೆಟ್ಗೆ ₹120 ಹಾಗೂ ಎಸ್.ಸಿ–ಎಸ್.ಟಿ ಸಮಾಜದ ರೈತರಿಗೆ ಕಡಲೆಬೀಜ ₹910, ಜೋಳ ₹90 ಕ್ಕೆ ಕೊಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಬೆಟಗೇರಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ರಮೇಶ ಜಟ್ಟಿ ಅವರು, ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಿಗುವ ಬೀಜ, ಗೊಬ್ಬರ, ಕೃಷಿ ಪರಿಕರಗಳ ಕುರಿತು ವಿವರಿಸಿದರು.</p>.<p>ಸಂಘದ ನಿರ್ದೇಶಕರಾದ ಮಲ್ಲನಗೌಡ ಪಾಟೀಲ, ರಾಚಪ್ಪ ನಾಲ್ವಾಡದ ಕಲ್ಲಪ್ಪ ಬೆಟಗೇರಿ, ಗವಿಶಿದ್ದಪ್ಪ ರೇವಡಿ, ಶಂಕ್ರಪ್ಪ ಕುಂಬಾರ, ಅಂದಾನಯ್ಯ ಪತ್ರಿಮಠ, ಫಕ್ಕೀರಯ್ಯ ಪತ್ರಿಮಠ, ನೀಲವ್ವ ರವದಿ, ಅನ್ನಪೂರ್ಣವ್ವ ಹಡಗಲಿ, ಸಕ್ರಪ್ಪ ರಾಮತಾಳ ಇದ್ದರು. </p>.<div><blockquote> ರೈತರ ಅಭಿವೃದ್ದಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಕೃಷಿಕರು ಅವುಗಳ ಸದುಪಯೋಗ ಪಡೆಯಬೇಕು. </blockquote><span class="attribution">ರುದ್ರಪ್ಪ ಮುಸ್ಕಿನಭಾವಿ ಅಧ್ಯಕ್ಷ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>