<p><strong>ಶಿರಹಟ್ಟಿ</strong>: ‘ವಚನಗಾರ್ತಿ ಹಾಗೂ ಮಹಿಳೆಯರ ಪ್ರತಿನಿಧಿಯಾಗಿ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ಅಕ್ಕಮಹಾದೇವಿಯ ಬದುಕೇ ಒಂದು ಮಹಾಕಾವ್ಯ’ ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎ.ಬಳಿಗೇರ ಹೇಳಿದರು.</p>.<p>ಸ್ಥಳೀಯ ಅಕ್ಕಮಹಾದೇವಿ ದೇವಸ್ಥಾನದ ಆವರಣದಲ್ಲಿ ಶನಿವಾರ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಲೋಕದ ಎಲ್ಲ ಕ್ರಿಯೆಗಳಿಗೆ ಸೂರ್ಯನೇ ಕೇಂದ್ರಬಿಂದು. ಸೂರ್ಯನ ಉದಯವು ಜಗದ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ’ ಎಂದರು.</p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಂ.ಕೆ.ಲಮಾಣಿ ಮಾತನಾಡಿ, ‘ವೈರಾಗ್ಯಕ್ಕೆ ಮತ್ತೊಂದು ಹೆಸರೇ ಅಕ್ಕಮಹಾದೇವಿ. ಅವರು ಪರಮಾರ್ಥ ಸುಖವೇ ನಿಜವಾದ ಸುಖವೆಂದು ಸಾಧಿಸಿದ ಮಹಾನ್ ಮಹಿಳೆಯಾಗಿದ್ದಾಳೆ’ ಎಂದರು.</p>.<p>ಚಂದ್ರಕಾಂತ ನೂರಶೆಟ್ಟರ, ಎಚ್.ಎಂ.ದೇವಗಿರಿ, ಎಂ.ಎಚ್.ಪಲ್ಲೇದ, ಪ್ರಭು ಹಲಸೂರ, ಬಸವರಾಜ ಬೋರಶೆಟ್ಟರ, ನಂದಾ ಕಪ್ಪತ್ತನವರ, ಶಾಂತಕ್ಕ ಪಾಟೀಲ, ರೇಣುಕಾ ಜಗಂಡಭಾವಿ, ಕಪ್ಪಣ್ಣವರ, ಸಜ್ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ</strong>: ‘ವಚನಗಾರ್ತಿ ಹಾಗೂ ಮಹಿಳೆಯರ ಪ್ರತಿನಿಧಿಯಾಗಿ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ಅಕ್ಕಮಹಾದೇವಿಯ ಬದುಕೇ ಒಂದು ಮಹಾಕಾವ್ಯ’ ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎ.ಬಳಿಗೇರ ಹೇಳಿದರು.</p>.<p>ಸ್ಥಳೀಯ ಅಕ್ಕಮಹಾದೇವಿ ದೇವಸ್ಥಾನದ ಆವರಣದಲ್ಲಿ ಶನಿವಾರ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಲೋಕದ ಎಲ್ಲ ಕ್ರಿಯೆಗಳಿಗೆ ಸೂರ್ಯನೇ ಕೇಂದ್ರಬಿಂದು. ಸೂರ್ಯನ ಉದಯವು ಜಗದ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ’ ಎಂದರು.</p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಂ.ಕೆ.ಲಮಾಣಿ ಮಾತನಾಡಿ, ‘ವೈರಾಗ್ಯಕ್ಕೆ ಮತ್ತೊಂದು ಹೆಸರೇ ಅಕ್ಕಮಹಾದೇವಿ. ಅವರು ಪರಮಾರ್ಥ ಸುಖವೇ ನಿಜವಾದ ಸುಖವೆಂದು ಸಾಧಿಸಿದ ಮಹಾನ್ ಮಹಿಳೆಯಾಗಿದ್ದಾಳೆ’ ಎಂದರು.</p>.<p>ಚಂದ್ರಕಾಂತ ನೂರಶೆಟ್ಟರ, ಎಚ್.ಎಂ.ದೇವಗಿರಿ, ಎಂ.ಎಚ್.ಪಲ್ಲೇದ, ಪ್ರಭು ಹಲಸೂರ, ಬಸವರಾಜ ಬೋರಶೆಟ್ಟರ, ನಂದಾ ಕಪ್ಪತ್ತನವರ, ಶಾಂತಕ್ಕ ಪಾಟೀಲ, ರೇಣುಕಾ ಜಗಂಡಭಾವಿ, ಕಪ್ಪಣ್ಣವರ, ಸಜ್ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>