ಗದಗ: ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ನಗರದ ಪೊಲೀಸರು ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
‘ಜೀವರಕ್ಷಕ ಚುಚ್ಚುಮದ್ದನ್ನು ₹30 ಸಾವಿರಕ್ಕೆ ಒಂದರಂತೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಸುಳಿವು ಆಧರಿಸಿ ಸಿಇಎನ್ ಠಾಣೆಯ ಇನ್ಸ್ಪೆಕ್ಟರ್ ಮಹಾಂತೇಶ ಟಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದೆ. ಅವರು ಗದಗ– ಮುಳಗುಂದ ರಸ್ತೆಯ ರಾಧಾಕೃಷ್ಣ ನಗರದ ಬಳಿ ಸಿಕ್ಕಿಬಿದ್ದಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.
ಪೊಲೀಸರು ಬಂಧಿತರಿಂದ 14 ರೆಮ್ಡಿಸಿವಿರ್ ಇಂಜೆಕ್ಷನ್, ₹2500 ನಗದು ಹಾಗೂ ನಾಲ್ಕು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಳಸಂತೆಯನ್ನು ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ಪೊಲೀಸರ ತಂಡವನ್ನು ಎಸ್ಪಿ ಯತೀಶ್ ಎನ್. ಶ್ಲಾಘಿಸಿದ್ದಾರೆ.