<p><strong>ನರಗುಂದ (ಗದಗ ಜಿಲ್ಲೆ): </strong>ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರ ಮನೆ ಮುಂದೆ ಧರಣಿ ನಡೆಸಲು ಬರುತ್ತಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳನ್ನು ತಾಲ್ಲೂಕಿನ ಕಲಕೇರಿ ಚೆಕ್ಪೋಸ್ಟ್ ಬಳಿ ಪೊಲೀಸರು ಬುಧವಾರ ತಡೆದರು.</p>.<p>ಬುಧವಾರ ಬೆಳಿಗ್ಗೆ 11.30ರ ಸುಮಾರಿಗೆ ಕಲಕೇರಿ ಬಳಿಗೆ ಬಂದ ದಿಂಗಾಲೇಶ್ವರ ಶ್ರೀಗಳನ್ನು ಶಾಂತಿ ಸುವ್ಯವಸ್ಥೆಯ ನೆಪವೊಡ್ಡಿ ಪೊಲೀಸರು ತಡೆದಿದ್ದರಿಂದ, ಶ್ರೀಗಳು ಸಿಡಿಮಿಡಿಗೊಂಡರು.</p>.<p>ನರಗುಂದಕ್ಕೆ ತೆರಳಿ ಧರಣಿ ಮಾಡಲು ಅವಕಾಶ ಕೊಡುವಂತೆ ಶ್ರೀಗಳುಬಿಗಿಪಟ್ಟು ಹಿಡಿದರು. ಪೊಲೀಸರು ಮತ್ತು ಸ್ವಾಮೀಜಿ ನಡುವೆ ವಾಗ್ವಾದ ನಡೆದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>‘ಸಚಿವ ಸಿ.ಸಿ.ಪಾಟೀಲ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ಮಾಡಲು ಬಂದರೆ ಪೊಲೀಸರು ನಮ್ಮನ್ನು ರಸ್ತೆಯಲ್ಲೇ ತಡೆದಿದ್ದಾರೆ’ ಎಂದುದಿಂಗಾಲೇಶ್ವರ ಶ್ರೀಗಳು ಆರೋಪಿಸಿದರು.</p>.<p>‘ನಾವೆಲ್ಲ ಮಠಾಧಿಪತಿಗಳು. ನ್ಯಾಯ, ಕಾನೂನು ಸುವ್ಯವಸ್ಥೆ ಕಾಪಾಡುವಂತಹವರು. ನಮ್ಮನ್ನು ತಡೆದಿರುವುದು ಸಲ್ಲದು. ಇಂತಹ ಸಚಿವರಿಗೆ ಸಂಘ ಪರಿವಾರದಿಂದ ಸಂಸ್ಕಾರದ ಅಗತ್ಯವಿದೆ. ಸಿಎಂ ಬುದ್ಧಿಹೇಳಬೇಕು’ ಎಂದರು.</p>.<p>‘ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ನಾನು ಮಾತನಾಡಿದ್ದೇನೆ. ಅವುಗಳಿಗೆ ಸ್ಪಂದಿಸದೇ ನನ್ನ ತೇಜೋವಧೆಗೆ ಮುಂದಾಗಿರುವುದು ಸರಿಯೆ? ಪೊಲೀಸರು ತಡೆಯೊಡ್ಡಿದ್ದರಿಂದ ಧರಣಿ ಕೈಬಿಟ್ಟು ಹೋಗುತ್ತೇನೆ. ಇನ್ನು ಮುಂದಾದರೂ ಸಚಿವರು ಮಠಾಧಿಶರ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>‘ರಾಜ್ಯದ ವಿವಿಧೆಡೆಯಿಂದ ನರಗುಂದಕ್ಕೆ ಬರುತ್ತಿದ್ದ 25 ಮಠಾಧೀಶ<br />ರನ್ನು ಪೊಲೀಸರು ತಡೆದಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಇಂದಿನಿಂದ ನಮ್ಮ<br />ಹೋರಾಟ ಬೇರೆ ರೀತಿಯಲ್ಲಿ ಮುಂದುವರಿಯುತ್ತದೆ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ (ಗದಗ ಜಿಲ್ಲೆ): </strong>ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರ ಮನೆ ಮುಂದೆ ಧರಣಿ ನಡೆಸಲು ಬರುತ್ತಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳನ್ನು ತಾಲ್ಲೂಕಿನ ಕಲಕೇರಿ ಚೆಕ್ಪೋಸ್ಟ್ ಬಳಿ ಪೊಲೀಸರು ಬುಧವಾರ ತಡೆದರು.</p>.<p>ಬುಧವಾರ ಬೆಳಿಗ್ಗೆ 11.30ರ ಸುಮಾರಿಗೆ ಕಲಕೇರಿ ಬಳಿಗೆ ಬಂದ ದಿಂಗಾಲೇಶ್ವರ ಶ್ರೀಗಳನ್ನು ಶಾಂತಿ ಸುವ್ಯವಸ್ಥೆಯ ನೆಪವೊಡ್ಡಿ ಪೊಲೀಸರು ತಡೆದಿದ್ದರಿಂದ, ಶ್ರೀಗಳು ಸಿಡಿಮಿಡಿಗೊಂಡರು.</p>.<p>ನರಗುಂದಕ್ಕೆ ತೆರಳಿ ಧರಣಿ ಮಾಡಲು ಅವಕಾಶ ಕೊಡುವಂತೆ ಶ್ರೀಗಳುಬಿಗಿಪಟ್ಟು ಹಿಡಿದರು. ಪೊಲೀಸರು ಮತ್ತು ಸ್ವಾಮೀಜಿ ನಡುವೆ ವಾಗ್ವಾದ ನಡೆದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>‘ಸಚಿವ ಸಿ.ಸಿ.ಪಾಟೀಲ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ಮಾಡಲು ಬಂದರೆ ಪೊಲೀಸರು ನಮ್ಮನ್ನು ರಸ್ತೆಯಲ್ಲೇ ತಡೆದಿದ್ದಾರೆ’ ಎಂದುದಿಂಗಾಲೇಶ್ವರ ಶ್ರೀಗಳು ಆರೋಪಿಸಿದರು.</p>.<p>‘ನಾವೆಲ್ಲ ಮಠಾಧಿಪತಿಗಳು. ನ್ಯಾಯ, ಕಾನೂನು ಸುವ್ಯವಸ್ಥೆ ಕಾಪಾಡುವಂತಹವರು. ನಮ್ಮನ್ನು ತಡೆದಿರುವುದು ಸಲ್ಲದು. ಇಂತಹ ಸಚಿವರಿಗೆ ಸಂಘ ಪರಿವಾರದಿಂದ ಸಂಸ್ಕಾರದ ಅಗತ್ಯವಿದೆ. ಸಿಎಂ ಬುದ್ಧಿಹೇಳಬೇಕು’ ಎಂದರು.</p>.<p>‘ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ನಾನು ಮಾತನಾಡಿದ್ದೇನೆ. ಅವುಗಳಿಗೆ ಸ್ಪಂದಿಸದೇ ನನ್ನ ತೇಜೋವಧೆಗೆ ಮುಂದಾಗಿರುವುದು ಸರಿಯೆ? ಪೊಲೀಸರು ತಡೆಯೊಡ್ಡಿದ್ದರಿಂದ ಧರಣಿ ಕೈಬಿಟ್ಟು ಹೋಗುತ್ತೇನೆ. ಇನ್ನು ಮುಂದಾದರೂ ಸಚಿವರು ಮಠಾಧಿಶರ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>‘ರಾಜ್ಯದ ವಿವಿಧೆಡೆಯಿಂದ ನರಗುಂದಕ್ಕೆ ಬರುತ್ತಿದ್ದ 25 ಮಠಾಧೀಶ<br />ರನ್ನು ಪೊಲೀಸರು ತಡೆದಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಇಂದಿನಿಂದ ನಮ್ಮ<br />ಹೋರಾಟ ಬೇರೆ ರೀತಿಯಲ್ಲಿ ಮುಂದುವರಿಯುತ್ತದೆ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>