ಗುಣಮಟ್ಟದ ರಸ್ತೆ ನಿರ್ಮಾಣದ ಭರವಸೆ
‘ಹಿರೇಹಾಳದಿಂದ ಬಳಗೋಡ ಗ್ರಾಮದವರೆಗಿನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದು ಲೋಕೋಪಯೋಗಿ ಇಲಾಖೆ ಎಇಇ ಬಲವಂತ ನಾಯ್ಕರ ತಿಳಿಸಿದ್ದಾರೆ. ‘ತಾಲ್ಲೂಕಿನ ವಿವಿಧ ಗ್ರಾಮಗಳ ರಸ್ತೆಗಳು ಹಾಳಾಗಿದ್ದು ಸದ್ಯ ಮಳೆ ಬೀಳುತ್ತಿರುವುದರಿಂದ ತಾತ್ಕಾಲಿಕ ರಿಪೇರಿಗೆ ಸೂಚಿಸಲಾಗಿದೆ. ಶೀಘ್ರದಲ್ಲಿಯೇ ಟೆಂಡರ್ ಕರೆದು ಗುಣಮಟ್ಟದ ರಸ್ತೆ ನಿರ್ಮಿಸಲಾಗುವುದು’ ಎಂದು ಅವರು ಭರವಸೆ ನೀಡಿದ್ದಾರೆ. ,