<p><strong>ಗಜೇಂದ್ರಗಡ</strong>: ಮಕ್ಕಳು ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಹಕಾರಿಯಾಗಿದೆ. ಮಕ್ಕಳಲ್ಲಿನ ಪ್ರತಿಭಾನ್ವೇಷಣೆ ಹಾಗೂ ನಾಯಕತ್ವ ಗುಣ ಬೆಳವಣಿಗೆಗೆ ಇದು ಪೂರಕವಾಗಿದೆ ಎಂದು ಶಾಲೆಯ ಪ್ರಾಚಾರ್ಯ ಎಸ್.ಎಸ್. ಕರ್ಜಗಿ ಹೇಳಿದರು.</p>.<p>ಸಮೀಪದ ಕಾಲಕಾಲೇಶ್ವರ ಗ್ರಾಮದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಆವರಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಭಾಗವಹಿಸಿ ತಮ್ಮ ಕಲೆ ಪ್ರಸ್ತುತಪಡಿಸಬೇಕುʼ ಎಂದರು.</p>.<p>ಕುಂಟೋಜಿ, ಮ್ಯಾಕಲಝರಿ, ವದೇಗೋಳ, ಜಿಗೇರಿ, ಕಾಲಕಾಲೇಶ್ವರ, ಬೆಣಸಮಟ್ಟಿ, ಗೌಡಗೇರಿ, ಭೈರಾಪುರ, ರಾಜೂರ, ದಿಂಡೂರ ಗ್ರಾಮಗಳ ಪ್ರಾಥಮಿಕ ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ರಾಜೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಳಕವ್ವ ಜೊಳ್ಳಿಯವರ ಉದ್ಘಾಟಿಸಿದರು. ಶಿಕ್ಷಕರಾದ ಎಸ್.ಕೆ. ಸರಗಣಾಚಾರಿ, ಎ.ಕೆ.ಒಂಟಿ, ಬಿ.ಎಸ್.ಅಣ್ಣಿಗೇರಿ, ಪಿ.ಪಿ.ರಾಠೋಡ, ಕೆ.ಐ.ವಸ್ತದ, ಸಿ.ಆರ್.ಪಿಗಳಾದ ಕೆ.ಎಸ್.ವನ್ನಾಲ, ಎಂ.ವಿ.ಚಿನ್ನೂರ, ಎಂ.ಯು.ಗೋಡೆಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ</strong>: ಮಕ್ಕಳು ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಹಕಾರಿಯಾಗಿದೆ. ಮಕ್ಕಳಲ್ಲಿನ ಪ್ರತಿಭಾನ್ವೇಷಣೆ ಹಾಗೂ ನಾಯಕತ್ವ ಗುಣ ಬೆಳವಣಿಗೆಗೆ ಇದು ಪೂರಕವಾಗಿದೆ ಎಂದು ಶಾಲೆಯ ಪ್ರಾಚಾರ್ಯ ಎಸ್.ಎಸ್. ಕರ್ಜಗಿ ಹೇಳಿದರು.</p>.<p>ಸಮೀಪದ ಕಾಲಕಾಲೇಶ್ವರ ಗ್ರಾಮದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಆವರಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಭಾಗವಹಿಸಿ ತಮ್ಮ ಕಲೆ ಪ್ರಸ್ತುತಪಡಿಸಬೇಕುʼ ಎಂದರು.</p>.<p>ಕುಂಟೋಜಿ, ಮ್ಯಾಕಲಝರಿ, ವದೇಗೋಳ, ಜಿಗೇರಿ, ಕಾಲಕಾಲೇಶ್ವರ, ಬೆಣಸಮಟ್ಟಿ, ಗೌಡಗೇರಿ, ಭೈರಾಪುರ, ರಾಜೂರ, ದಿಂಡೂರ ಗ್ರಾಮಗಳ ಪ್ರಾಥಮಿಕ ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ರಾಜೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಳಕವ್ವ ಜೊಳ್ಳಿಯವರ ಉದ್ಘಾಟಿಸಿದರು. ಶಿಕ್ಷಕರಾದ ಎಸ್.ಕೆ. ಸರಗಣಾಚಾರಿ, ಎ.ಕೆ.ಒಂಟಿ, ಬಿ.ಎಸ್.ಅಣ್ಣಿಗೇರಿ, ಪಿ.ಪಿ.ರಾಠೋಡ, ಕೆ.ಐ.ವಸ್ತದ, ಸಿ.ಆರ್.ಪಿಗಳಾದ ಕೆ.ಎಸ್.ವನ್ನಾಲ, ಎಂ.ವಿ.ಚಿನ್ನೂರ, ಎಂ.ಯು.ಗೋಡೆಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>