<p>ಪ್ರಜಾವಾಣಿ ವಾರ್ತೆ</p>.<p>ಗದಗ: ‘ನೆಮ್ಮದಿಯ ಬದುಕು, ಮಾನವ ಕಲ್ಯಾಣಕ್ಕಾಗಿ ಆಧ್ಯಾತ್ಮಿಕ ಚಿಂತನೆಗಳು, ಧರ್ಮ ಬೋಧನೆಗಳು ಅವಶ್ಯಕ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.</p>.<p>ನಗರದ ಗಾಣಿಗ ಭವನದಲ್ಲಿ ಗದಗ-ಬೆಟಗೇರಿ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀಮದ್ ಕಾಶೀ ನೂತನ ಜಗದ್ಗುರುಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ 10 ದಿನಗಳ ‘ಸಿದ್ಧಾಂತ ಶಿಖಾಮಣಿ’ ಆಧ್ಯಾತ್ಮಿಕ ಪ್ರವಚನಮಾಲಿಕೆ ಉದ್ಘಾಟಿಸಿ ಮಾತನಾಡಿದರು.</p>.<p>‘ನೈತಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಜನತೆಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ. ಇಂದು ಮಾನವ ಮಾನವನಾಗಿ ಬದುಕಬೇಕು. ಅದಕ್ಕಾಗಿ ವೀರಶೈವ ಧರ್ಮವನ್ನು ಬೋಧಿಸುವ, ಸನ್ಮಾರ್ಗದಲ್ಲಿ ಮುನ್ನಡೆಸುವ ಸಿದ್ಧಾಂತ ಶಿಖಾಮಣಿಯ ಆಧ್ಯಾತ್ಮಿಕ ಪ್ರವಚನವನ್ನು ಆಲಿಸಬೇಕಿದೆ’ ಎಂದರು.</p>.<p>ಮಾಜಿ ಶಾಸಕ ಡಿ.ಆರ್.ಪಾಟೀಲ ಮಾತನಾಡಿ, ‘ಗದಗ ಪರಿಸರದಲ್ಲಿ ಕಾಶೀ ಪೀಠದ ಹಿರಿಯ ಜಗದ್ಗುರು ಪ್ರತಿ ವರ್ಷ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ನಡೆಸಿದ ಪರಿಣಾಮವಾಗಿ ಧರ್ಮಜಾಗೃತಿ, ಆಧ್ಯಾತ್ಮಿಕ ಚಿಂತನೆಗಳು ಜನತೆಯನ್ನು ಸನ್ಮಾರ್ಗದಲ್ಲಿ ಮುನ್ನಡೆಸಿವೆ. ಈ ಪ್ರವಚನದೊಂದಿಗೆ ಭಗವದ್ಗೀತೆಯ ಪ್ರವಚನವೂ ನಡೆಯಬೇಕು’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಕಾಶೀ ಮಹಾಪೀಠದ ಕಾಶೀ ಜ್ಞಾನಸಿಂಹಾಸನಾಧೀಶ್ವರ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ಮಾತನಾಡಿ, ‘ವೀರಶೈವ ಲಿಂಗಾಯತ ಧರ್ಮಕ್ಕೆ ಧರ್ಮ ಗ್ರಂಥವಾಗಿರುವ ಸಿದ್ಧಾಂತ ಶಿಖಾಮಣಿ ಸಾಧಕರನ್ನು ಸಾಧನೆಯ ಮಾರ್ಗಕ್ಕೆ, ಧರ್ಮದ ಸನ್ಮಾರ್ಗದಲ್ಲಿ ಮುನ್ನಡೆಸುವಂತದ್ದು’ ಎಂದರು.</p>.<p>ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮುಖಂಡರಾದ ಶರಣಬಸಪ್ಪ ಗುಡಿಮನಿ, ಬಸವರಾಜ ಬಿಂಗಿ, ಶ್ರೀಕಾಂತ ಲಕ್ಕುಂಡಿ, ರಾಜು ಕುರಡಗಿ, ಮುರುಗೇಶ ಬಡ್ನಿ, ವೀರಣ್ಣ ಕರಬಿಷ್ಠಿ, ಫಕ್ಕೀರಪ್ಪ ಹೆಬಸೂರ, ಶಿವಾನಂದಯ್ಯ ಹಿರೇಮಠ, ಸಿ.ಕೆ.ಮಾಳಶೆಟ್ಟಿ, ಶಂಕರ ಹಾನಗಲ್ಲ, ಜಿ.ಎಸ್.ಗಡ್ಡದೇವರಮಠ, ಗುರಣ್ಣ ಬಳಗಾನೂರ, ಶ್ವೇತಾ ದಂಡಿನ, ವಿಜಯಲಕ್ಷ್ಮೀ ದಿಂಡೂರ ಅವರನ್ನು ಸನ್ಮಾನಿಸಲಾಯಿತು.</p>.<p>ಕಾಂಚನಮಾಲಾ ಬಾಳಿಹಳ್ಳಿಮಠ, ಶಿವಯೋಗಿ ತೆಗ್ಗಿನಮಠ, ಸಿ.ಜಿ.ಜಿನಗಾ, ಈಶ್ವರಪ್ಪ ಮುನವಳ್ಳಿ, ಬಸವರಾಜ ಹೆರಕಲ್, ಜಾಹ್ನವಿ ದೇಸಾಯಿ ಇದ್ದರು.</p>.<p>ಮಂಜುನಾಥ ಬೇಲೇರಿ ಸ್ವಾಗತಿಸಿದರು, ಚಂದ್ರು ಬಾಳಿಹಳ್ಳಿಮಠ ಸ್ವಾಗತಿಸಿದರು. ವಿ.ಕೆ.ಗುರುಮಠ ನಿರೂಪಿಸಿದರು.</p>.<p>Quote - ಗದಗ ಭಾಗದಲ್ಲಿ ಹಿಂದೂ ಮುಸ್ಲಿಂ ವೈಷ್ಣವ ಶೈವರು ಒಗ್ಗಟ್ಟಿನೊಂದಿಗೆ ಸದ್ಭಾವನೆಯಿಂದ ಜೀವನ ನಡೆಸುತ್ತಿದ್ದಾರೆ. ಹಿಂದೂ ಮುಸ್ಲಿಂ ಸಮುದಾಯಕ್ಕೆ ಒಂದೇ ಟ್ರಸ್ಟ್ ಇರುವುದು ಇದಕ್ಕೆ ಕಾರಣ ಡಿ.ಆರ್.ಪಾಟೀಲ ಮಾಜಿ ಶಾಸಕ</p>.<p>Quote - ದಾರ್ಶನಿಕರು ಧರ್ಮಗುರುಗಳು ಮಾನವ ಕಲ್ಯಾಣಕ್ಕಾಗಿ ನೀಡಿದ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನೆಮ್ಮದಿಯ ಬದುಕು ನಡೆಸಲು ಈ ಪ್ರವಚನ ಮಾಲಿಕೆ ದಾರಿದೀಪವಾಗಿದೆ ಎಸ್.ವಿ.ಸಂಕನೂರ ವಿಧಾನ ಪರಿಷತ್ ಸದಸ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಗದಗ: ‘ನೆಮ್ಮದಿಯ ಬದುಕು, ಮಾನವ ಕಲ್ಯಾಣಕ್ಕಾಗಿ ಆಧ್ಯಾತ್ಮಿಕ ಚಿಂತನೆಗಳು, ಧರ್ಮ ಬೋಧನೆಗಳು ಅವಶ್ಯಕ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.</p>.<p>ನಗರದ ಗಾಣಿಗ ಭವನದಲ್ಲಿ ಗದಗ-ಬೆಟಗೇರಿ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀಮದ್ ಕಾಶೀ ನೂತನ ಜಗದ್ಗುರುಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ 10 ದಿನಗಳ ‘ಸಿದ್ಧಾಂತ ಶಿಖಾಮಣಿ’ ಆಧ್ಯಾತ್ಮಿಕ ಪ್ರವಚನಮಾಲಿಕೆ ಉದ್ಘಾಟಿಸಿ ಮಾತನಾಡಿದರು.</p>.<p>‘ನೈತಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಜನತೆಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ. ಇಂದು ಮಾನವ ಮಾನವನಾಗಿ ಬದುಕಬೇಕು. ಅದಕ್ಕಾಗಿ ವೀರಶೈವ ಧರ್ಮವನ್ನು ಬೋಧಿಸುವ, ಸನ್ಮಾರ್ಗದಲ್ಲಿ ಮುನ್ನಡೆಸುವ ಸಿದ್ಧಾಂತ ಶಿಖಾಮಣಿಯ ಆಧ್ಯಾತ್ಮಿಕ ಪ್ರವಚನವನ್ನು ಆಲಿಸಬೇಕಿದೆ’ ಎಂದರು.</p>.<p>ಮಾಜಿ ಶಾಸಕ ಡಿ.ಆರ್.ಪಾಟೀಲ ಮಾತನಾಡಿ, ‘ಗದಗ ಪರಿಸರದಲ್ಲಿ ಕಾಶೀ ಪೀಠದ ಹಿರಿಯ ಜಗದ್ಗುರು ಪ್ರತಿ ವರ್ಷ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ನಡೆಸಿದ ಪರಿಣಾಮವಾಗಿ ಧರ್ಮಜಾಗೃತಿ, ಆಧ್ಯಾತ್ಮಿಕ ಚಿಂತನೆಗಳು ಜನತೆಯನ್ನು ಸನ್ಮಾರ್ಗದಲ್ಲಿ ಮುನ್ನಡೆಸಿವೆ. ಈ ಪ್ರವಚನದೊಂದಿಗೆ ಭಗವದ್ಗೀತೆಯ ಪ್ರವಚನವೂ ನಡೆಯಬೇಕು’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಕಾಶೀ ಮಹಾಪೀಠದ ಕಾಶೀ ಜ್ಞಾನಸಿಂಹಾಸನಾಧೀಶ್ವರ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ಮಾತನಾಡಿ, ‘ವೀರಶೈವ ಲಿಂಗಾಯತ ಧರ್ಮಕ್ಕೆ ಧರ್ಮ ಗ್ರಂಥವಾಗಿರುವ ಸಿದ್ಧಾಂತ ಶಿಖಾಮಣಿ ಸಾಧಕರನ್ನು ಸಾಧನೆಯ ಮಾರ್ಗಕ್ಕೆ, ಧರ್ಮದ ಸನ್ಮಾರ್ಗದಲ್ಲಿ ಮುನ್ನಡೆಸುವಂತದ್ದು’ ಎಂದರು.</p>.<p>ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮುಖಂಡರಾದ ಶರಣಬಸಪ್ಪ ಗುಡಿಮನಿ, ಬಸವರಾಜ ಬಿಂಗಿ, ಶ್ರೀಕಾಂತ ಲಕ್ಕುಂಡಿ, ರಾಜು ಕುರಡಗಿ, ಮುರುಗೇಶ ಬಡ್ನಿ, ವೀರಣ್ಣ ಕರಬಿಷ್ಠಿ, ಫಕ್ಕೀರಪ್ಪ ಹೆಬಸೂರ, ಶಿವಾನಂದಯ್ಯ ಹಿರೇಮಠ, ಸಿ.ಕೆ.ಮಾಳಶೆಟ್ಟಿ, ಶಂಕರ ಹಾನಗಲ್ಲ, ಜಿ.ಎಸ್.ಗಡ್ಡದೇವರಮಠ, ಗುರಣ್ಣ ಬಳಗಾನೂರ, ಶ್ವೇತಾ ದಂಡಿನ, ವಿಜಯಲಕ್ಷ್ಮೀ ದಿಂಡೂರ ಅವರನ್ನು ಸನ್ಮಾನಿಸಲಾಯಿತು.</p>.<p>ಕಾಂಚನಮಾಲಾ ಬಾಳಿಹಳ್ಳಿಮಠ, ಶಿವಯೋಗಿ ತೆಗ್ಗಿನಮಠ, ಸಿ.ಜಿ.ಜಿನಗಾ, ಈಶ್ವರಪ್ಪ ಮುನವಳ್ಳಿ, ಬಸವರಾಜ ಹೆರಕಲ್, ಜಾಹ್ನವಿ ದೇಸಾಯಿ ಇದ್ದರು.</p>.<p>ಮಂಜುನಾಥ ಬೇಲೇರಿ ಸ್ವಾಗತಿಸಿದರು, ಚಂದ್ರು ಬಾಳಿಹಳ್ಳಿಮಠ ಸ್ವಾಗತಿಸಿದರು. ವಿ.ಕೆ.ಗುರುಮಠ ನಿರೂಪಿಸಿದರು.</p>.<p>Quote - ಗದಗ ಭಾಗದಲ್ಲಿ ಹಿಂದೂ ಮುಸ್ಲಿಂ ವೈಷ್ಣವ ಶೈವರು ಒಗ್ಗಟ್ಟಿನೊಂದಿಗೆ ಸದ್ಭಾವನೆಯಿಂದ ಜೀವನ ನಡೆಸುತ್ತಿದ್ದಾರೆ. ಹಿಂದೂ ಮುಸ್ಲಿಂ ಸಮುದಾಯಕ್ಕೆ ಒಂದೇ ಟ್ರಸ್ಟ್ ಇರುವುದು ಇದಕ್ಕೆ ಕಾರಣ ಡಿ.ಆರ್.ಪಾಟೀಲ ಮಾಜಿ ಶಾಸಕ</p>.<p>Quote - ದಾರ್ಶನಿಕರು ಧರ್ಮಗುರುಗಳು ಮಾನವ ಕಲ್ಯಾಣಕ್ಕಾಗಿ ನೀಡಿದ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನೆಮ್ಮದಿಯ ಬದುಕು ನಡೆಸಲು ಈ ಪ್ರವಚನ ಮಾಲಿಕೆ ದಾರಿದೀಪವಾಗಿದೆ ಎಸ್.ವಿ.ಸಂಕನೂರ ವಿಧಾನ ಪರಿಷತ್ ಸದಸ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>