<p>ಗದಗ: ‘ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಡಿಜೆ ಬಳಸುವ ಬದಲು ಅದೇ ಹಣವನ್ನು ನಗರದ ಹಸಿರೀಕರಣಕ್ಕೆ ಬಳಸುವ ಉದ್ದೇಶದಿಂದ ಗಣೇಶ ವಿಸರ್ಜನೆ ಮಾರ್ಗದುದ್ದಕ್ಕೂ 4ರಿಂದ 5 ಸಾವಿರ ಸಸಿಗಳನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ’ ಎಂದು ಕೃತಪುರ ಸೇವಾ ಸಮಿತಿ ಅಧ್ಯಕ್ಷ ಜಗದೀಶ ಪೂಜಾರ ಹೇಳಿದರು.</p>.<p>‘ಸಾಮಾಜಿಕ ಕಾರ್ಯಚಟುವಟಿಕೆ ನಡೆಸುವ ಉದ್ದೇಶದಿಂದ ಸ್ಥಾಪನೆ ಮಾಡಿರುವ ಕೃತಪುರ ಸೇವಾ ಸಮಿತಿಯ ಸಂಘದಿಂದ ಈ ಬಾರಿ ಎರಡನೇ ವರ್ಷದ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎರಡು ವರ್ಷಗಳಿಂದ ಆ.14ರ ಮಧ್ಯರಾತ್ರಿ 12ಕ್ಕೆ ಧ್ವಜಾರೋಹಣ ಮಾಡುತ್ತ ಬಂದಿದ್ದೇವೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳಿಗೆ ಸಸಿ ವಿತರಿಸಿದ್ದೇವೆ’ ಎಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. </p>.<p>‘ಸಮಿತಿಯ ಎಲ್ಲ ಸಭೆ-ಸಮಾರಂಭಗಳಲ್ಲಿ ಈಗಾಗಲೇ ಸಸಿ ವಿತರಣೆ ನಿರಂತರವಾಗಿದೆ. ಕಳೆದ ವರ್ಷ ಒಂದು ಸಾವಿರ ಸಸಿ ವಿತರಣೆ ಮಾಡಲಾಗಿತ್ತು. ಈ ವರ್ಷ ಎರಡು ಸಾವಿರ ಸಸಿ ವಿತರಣೆ ಗುರಿ ಇತ್ತು. ಆದರೆ, ಡಿಜೆ ಹಣವನ್ನೇ ಸಸಿಗಳಿಗೆ ನೀಡಿ, ಅವುಗಳನ್ನು ನೆಡುವಂತೆ ಮನವಿ ಮಾಡಲಾಗುತ್ತಿದೆ. ಅರಣ್ಯ ಇಲಾಖೆ ಸಹಕಾರದಿಂದ ಈ ಕಾರ್ಯ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಡಿಜೆ ಬಳಕೆಯಿಂದ ವಯಸ್ಸಾದವರಿಗೆ ತೊಂದರೆ ಉಂಟಾಗುತ್ತದೆ. ಡಿಜೆ ಬದಲಾಗಿ ಸ್ಥಳೀಯ ಕಲಾವಿದರು, ಸಾಂಪ್ರದಾಯಿಕ ವಾದ್ಯಗಳಿಗೆ ಆದ್ಯತೆ ನೀಡುವ ಮೂಲಕ ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶ ಕೂಡ ಇದೆ ಎಂದರು.</p>.<p>ಕೊಪ್ಪಳ ಜಿಲ್ಲೆಯ ಕಿನ್ನಾಳ ತಾಲ್ಲೂಕಿನ ಯುವಕರು ಡಿಜೆಗೆ ಬಳಸುತ್ತಿದ್ದ ಹಣವನ್ನು ಹಳ್ಳಿಗಳ ರಸ್ತೆಯ ರಿಪೇರಿಗೆ ಬಳಸಿ ಮಾದರಿಯಾಗಿದ್ದಾರೆ. ಅವರ ಈ ಕಾರ್ಯ ನೋಡಿ ನಾವು ಸ್ಫೂರ್ತಿ ಹೊಂದಿ ಸಸಿಗಳನ್ನು ವಿತರಿಸಲು ನಿರ್ಧರಿಸಿದ್ದೇವೆ. ನಾವು ಮತ್ತೊಬ್ಬರ ಕಾರ್ಯಕ್ರಮಗಳಿಗೆ ಮಾದರಿಯಾಗಿ ಸಸಿ ನೆಡುವ ಕಾರ್ಯಕ್ರಮ ಮಾಡುತ್ತಿದ್ದು, ನಮ್ಮ ಕಾರ್ಯಕ್ರಮಗಳಿಂದ ಮತ್ತೊಬ್ಬರು ಪ್ರೇರಣೆಯಾಗಿ ಇಂತಹ ಕಾರ್ಯ ಮಾಡಲಿ ಎಂದು ಆಶಿಸುತ್ತೇವೆ ಎಂದು ಹೇಳಿದರು.</p>.<p>ಸುಮಂತ್ ಹಾರೋಗೇರಿ, ಶ್ರೀಧರ್ ಬಗಾಡೆ, ಕಾರ್ತಿಕ್ ಹಿರೇಮಠ, ಶಶಿ ಡಿಗ್ಗಾವಿ, ರವಿ ಘೋಡಕೆ, ಸಚಿನ್ ಮುಂಡವಾಡ, ಮನೋಜ್ಕುಮಾರ ಆಲೂರ, ಪುಟ್ಟರಾಜ ವೀರಶೆಟ್ಟರ್, ಸಿದ್ದಪ್ಪ ಚಿನ್ನಣ್ಣನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಡಿಜೆ ಬಳಸುವ ಬದಲು ಅದೇ ಹಣವನ್ನು ನಗರದ ಹಸಿರೀಕರಣಕ್ಕೆ ಬಳಸುವ ಉದ್ದೇಶದಿಂದ ಗಣೇಶ ವಿಸರ್ಜನೆ ಮಾರ್ಗದುದ್ದಕ್ಕೂ 4ರಿಂದ 5 ಸಾವಿರ ಸಸಿಗಳನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ’ ಎಂದು ಕೃತಪುರ ಸೇವಾ ಸಮಿತಿ ಅಧ್ಯಕ್ಷ ಜಗದೀಶ ಪೂಜಾರ ಹೇಳಿದರು.</p>.<p>‘ಸಾಮಾಜಿಕ ಕಾರ್ಯಚಟುವಟಿಕೆ ನಡೆಸುವ ಉದ್ದೇಶದಿಂದ ಸ್ಥಾಪನೆ ಮಾಡಿರುವ ಕೃತಪುರ ಸೇವಾ ಸಮಿತಿಯ ಸಂಘದಿಂದ ಈ ಬಾರಿ ಎರಡನೇ ವರ್ಷದ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎರಡು ವರ್ಷಗಳಿಂದ ಆ.14ರ ಮಧ್ಯರಾತ್ರಿ 12ಕ್ಕೆ ಧ್ವಜಾರೋಹಣ ಮಾಡುತ್ತ ಬಂದಿದ್ದೇವೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳಿಗೆ ಸಸಿ ವಿತರಿಸಿದ್ದೇವೆ’ ಎಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. </p>.<p>‘ಸಮಿತಿಯ ಎಲ್ಲ ಸಭೆ-ಸಮಾರಂಭಗಳಲ್ಲಿ ಈಗಾಗಲೇ ಸಸಿ ವಿತರಣೆ ನಿರಂತರವಾಗಿದೆ. ಕಳೆದ ವರ್ಷ ಒಂದು ಸಾವಿರ ಸಸಿ ವಿತರಣೆ ಮಾಡಲಾಗಿತ್ತು. ಈ ವರ್ಷ ಎರಡು ಸಾವಿರ ಸಸಿ ವಿತರಣೆ ಗುರಿ ಇತ್ತು. ಆದರೆ, ಡಿಜೆ ಹಣವನ್ನೇ ಸಸಿಗಳಿಗೆ ನೀಡಿ, ಅವುಗಳನ್ನು ನೆಡುವಂತೆ ಮನವಿ ಮಾಡಲಾಗುತ್ತಿದೆ. ಅರಣ್ಯ ಇಲಾಖೆ ಸಹಕಾರದಿಂದ ಈ ಕಾರ್ಯ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಡಿಜೆ ಬಳಕೆಯಿಂದ ವಯಸ್ಸಾದವರಿಗೆ ತೊಂದರೆ ಉಂಟಾಗುತ್ತದೆ. ಡಿಜೆ ಬದಲಾಗಿ ಸ್ಥಳೀಯ ಕಲಾವಿದರು, ಸಾಂಪ್ರದಾಯಿಕ ವಾದ್ಯಗಳಿಗೆ ಆದ್ಯತೆ ನೀಡುವ ಮೂಲಕ ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶ ಕೂಡ ಇದೆ ಎಂದರು.</p>.<p>ಕೊಪ್ಪಳ ಜಿಲ್ಲೆಯ ಕಿನ್ನಾಳ ತಾಲ್ಲೂಕಿನ ಯುವಕರು ಡಿಜೆಗೆ ಬಳಸುತ್ತಿದ್ದ ಹಣವನ್ನು ಹಳ್ಳಿಗಳ ರಸ್ತೆಯ ರಿಪೇರಿಗೆ ಬಳಸಿ ಮಾದರಿಯಾಗಿದ್ದಾರೆ. ಅವರ ಈ ಕಾರ್ಯ ನೋಡಿ ನಾವು ಸ್ಫೂರ್ತಿ ಹೊಂದಿ ಸಸಿಗಳನ್ನು ವಿತರಿಸಲು ನಿರ್ಧರಿಸಿದ್ದೇವೆ. ನಾವು ಮತ್ತೊಬ್ಬರ ಕಾರ್ಯಕ್ರಮಗಳಿಗೆ ಮಾದರಿಯಾಗಿ ಸಸಿ ನೆಡುವ ಕಾರ್ಯಕ್ರಮ ಮಾಡುತ್ತಿದ್ದು, ನಮ್ಮ ಕಾರ್ಯಕ್ರಮಗಳಿಂದ ಮತ್ತೊಬ್ಬರು ಪ್ರೇರಣೆಯಾಗಿ ಇಂತಹ ಕಾರ್ಯ ಮಾಡಲಿ ಎಂದು ಆಶಿಸುತ್ತೇವೆ ಎಂದು ಹೇಳಿದರು.</p>.<p>ಸುಮಂತ್ ಹಾರೋಗೇರಿ, ಶ್ರೀಧರ್ ಬಗಾಡೆ, ಕಾರ್ತಿಕ್ ಹಿರೇಮಠ, ಶಶಿ ಡಿಗ್ಗಾವಿ, ರವಿ ಘೋಡಕೆ, ಸಚಿನ್ ಮುಂಡವಾಡ, ಮನೋಜ್ಕುಮಾರ ಆಲೂರ, ಪುಟ್ಟರಾಜ ವೀರಶೆಟ್ಟರ್, ಸಿದ್ದಪ್ಪ ಚಿನ್ನಣ್ಣನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>