ಜನರು ದಂಗೆ ಏಳುತ್ತಾರೆ: ಮಿಥುನ್ ಕಿಡಿ
‘ಕೇಂದ್ರ ಸರ್ಕಾರದ ಆಡಳಿತ ನೀತಿಯಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ಕೇಂದ್ರದ ಆಡಳಿತದ ವಿರುದ್ಧ ಜನರು ದಂಗೆ ಏಳುತ್ತಾರೆ’ ಎಂದು ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ ಹೇಳಿದರು. ‘ಕೇಂದ್ರ ಸರ್ಕಾರದ ಕೆಟ್ಟ ಆಡಳಿತದಿಂದಾಗಿ ಜನರಿಗೆ ಹೋಟೆಲ್ಗಳಿಗೆ ಗ್ಯಾಸ್ ಸಿಲಿಂಡರ್ ಸಿಗದಂತಾಗಿದೆ. ಇದರಿಂದಾಗಿ ಜನಸಾಮಾನ್ಯರ ಬದುಕು ದುಸ್ತರಗೊಂಡಿದೆ’ ಎಂದು ಹರಿಹಾಯ್ದರು.