ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರ ಟೀಕೆಗೆ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕುಕ್ಕರ್ ಬಾಂಬ್ ಸ್ಫೋಟಿಸಿದ ವ್ಯಕ್ತಿ ತರಬೇತಿ ಪಡೆದಿದ್ದು ತೀರ್ಥಹಳ್ಳಿಯಲ್ಲಿ. ಅದು ಆಗಿನ ಗೃಹ ಸಚಿವರ ಕ್ಷೇತ್ರ. ತೀರ್ಥಹಳ್ಳಿಯಲ್ಲಿ ತರಬೇತಿ ಪಡೆದು, ಆರ್ಎಸ್ಎಸ್ ಪ್ರಯೋಗಾಲಯವಾದ ಮಂಗಳೂರಿನಲ್ಲಿ ಆತ ಸ್ಫೋಟಿಸಿದ. ಆಗಿನ ಸಚಿವರು ರಾಜೀನಾಮೆ ಕೊಟ್ಟಿದ್ದರಾ’ ಎಂದು ಪ್ರಶ್ನಿಸಿದರು.