<p><strong>ಗದಗ:</strong> ‘ಜಿಮ್ಸ್ ಆಸ್ಪತ್ರೆಗೆ ಆಕ್ಸಿಜನ್ ಉತ್ಪಾದನಾ ಯಂತ್ರದ ಅಗತ್ಯವಿದ್ದು ಖರೀದಿಗಾಗಿ ಆರೋಗ್ಯ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈ ವಿಚಾರವಾಗಿ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.</p>.<p>ಗುರುವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಜಿಮ್ಸ್ನಲ್ಲಿ ಈಗಾಗಲೇ 13 ಕೆ.ಎಲ್. ಆಕ್ಸಿಜನ್ ಪೂರೈಕೆಯ ಟ್ಯಾಂಕ್ ನಿರ್ಮಿಸಲಾಗಿದ್ದು ಅಗತ್ಯಕ್ಕೆ ತಕ್ಕಂತೆ ಆಕ್ಸಿಜನ್ ಲಭ್ಯವಿದೆ’ ಎಂದು ತಿಳಿಸಿದರು.</p>.<p>‘ರೆಮ್ಡಿಸಿವರ್ ಲಸಿಕೆಯನ್ನು ಅವಶ್ಯಕತೆ ಇದ್ದವರಿಗೆ ಮಾತ್ರ ನೀಡಬೇಕು.</p>.<p>ಜಿಲ್ಲೆಯಲ್ಲಿ 650 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 450 ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. 72 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 128 ಮಂದಿ ಸೋಂಕಿತರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಕೋವಿಡ್-19 ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಅದಕ್ಕಾಗಿ ಸರ್ಕಾರ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಕೋವಿಡ್–19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಕೋವಿಡ್–19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ನಿಯಮಗಳ ಜಾರಿಗಾಗಿ ಜಿಲ್ಲಾಡಳಿತಕ್ಕೆ ಮುಕ್ತ ಅಧಿಕಾರ ನೀಡಲಾಗಿದೆ’ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ 500 ಹಾಸಿಗೆಗಳು ಲಭ್ಯವಿದ್ದು ಅಗತ್ಯವಿದ್ದಲ್ಲಿ 750 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಡಳಿತ ಕ್ರಮವಹಿಸಲಿದೆ. 150 ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ಲಭ್ಯತೆಯನ್ನು ನಿರೀಕ್ಷಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆಗಳ ಕೊರತೆ ಇಲ್ಲ’ ಎಂದು ಅವರು ತಿಳಿಸಿದರು.</p>.<p>ಜಿಲ್ಲೆಯ ಸಾರ್ವಜನಿಕರು, ವ್ಯಾಪಾರಸ್ಥರು ಸೋಂಕು ನಿಯಂತ್ರಣಕ್ಕಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಎಡಿಸಿ ಸತೀಶ್ ಕುಮಾರ ಎಂ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಜಿಮ್ಸ್ ಆಸ್ಪತ್ರೆಗೆ ಆಕ್ಸಿಜನ್ ಉತ್ಪಾದನಾ ಯಂತ್ರದ ಅಗತ್ಯವಿದ್ದು ಖರೀದಿಗಾಗಿ ಆರೋಗ್ಯ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈ ವಿಚಾರವಾಗಿ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.</p>.<p>ಗುರುವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಜಿಮ್ಸ್ನಲ್ಲಿ ಈಗಾಗಲೇ 13 ಕೆ.ಎಲ್. ಆಕ್ಸಿಜನ್ ಪೂರೈಕೆಯ ಟ್ಯಾಂಕ್ ನಿರ್ಮಿಸಲಾಗಿದ್ದು ಅಗತ್ಯಕ್ಕೆ ತಕ್ಕಂತೆ ಆಕ್ಸಿಜನ್ ಲಭ್ಯವಿದೆ’ ಎಂದು ತಿಳಿಸಿದರು.</p>.<p>‘ರೆಮ್ಡಿಸಿವರ್ ಲಸಿಕೆಯನ್ನು ಅವಶ್ಯಕತೆ ಇದ್ದವರಿಗೆ ಮಾತ್ರ ನೀಡಬೇಕು.</p>.<p>ಜಿಲ್ಲೆಯಲ್ಲಿ 650 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 450 ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. 72 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 128 ಮಂದಿ ಸೋಂಕಿತರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಕೋವಿಡ್-19 ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಅದಕ್ಕಾಗಿ ಸರ್ಕಾರ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಕೋವಿಡ್–19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಕೋವಿಡ್–19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ನಿಯಮಗಳ ಜಾರಿಗಾಗಿ ಜಿಲ್ಲಾಡಳಿತಕ್ಕೆ ಮುಕ್ತ ಅಧಿಕಾರ ನೀಡಲಾಗಿದೆ’ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ 500 ಹಾಸಿಗೆಗಳು ಲಭ್ಯವಿದ್ದು ಅಗತ್ಯವಿದ್ದಲ್ಲಿ 750 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಡಳಿತ ಕ್ರಮವಹಿಸಲಿದೆ. 150 ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ಲಭ್ಯತೆಯನ್ನು ನಿರೀಕ್ಷಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆಗಳ ಕೊರತೆ ಇಲ್ಲ’ ಎಂದು ಅವರು ತಿಳಿಸಿದರು.</p>.<p>ಜಿಲ್ಲೆಯ ಸಾರ್ವಜನಿಕರು, ವ್ಯಾಪಾರಸ್ಥರು ಸೋಂಕು ನಿಯಂತ್ರಣಕ್ಕಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಎಡಿಸಿ ಸತೀಶ್ ಕುಮಾರ ಎಂ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>