<p>ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಮನವಿ ಸಲ್ಲಿಸಿತು.</p>.<p>ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ಮಾಜಿ ಸಚಿವ ಬಿ.ಆರ್.ಯಾವಗಲ್ಲ ಅವರ ನೇತೃತ್ವದಲ್ಲಿ ಹೊಳೆಆಲೂರಿಂದ ಗದಗ ನಗರದವರೆಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಳಿಕ ಮನವಿ ಸಲ್ಲಿಸಿದರು.</p>.<p>ರಾಜಕೀಯ ಕೇವಲ ಚುನಾವಣೆಯಲ್ಲಿ ಇರಬೇಕೇ ವಿನಹ ಅಭಿವೃದ್ಧಿ ವಿಷಯದಲ್ಲಲ್ಲ. ಪಕ್ಷ, ಜಾತಿ, ಮತ ನೋಡದೇ ಹಿಂದಿನ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಜಾರಿಗೊಳಿಸಿದ ಹಲವು ಜನಪರ ಯೋಜನೆಗಳು ನಾಲ್ಕು ವರ್ಷವಾದರೂ ಆರಂಭಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡರು ಮನವಿಯಲ್ಲಿ ದೂರಿದ್ದಾರೆ.</p>.<p>ನರಗುಂದ ಮತಕ್ಷೇತ್ರ ನಾಲ್ಕು ವರ್ಷಗಳಿಂದ ಅಭಿವೃದ್ದಿ ಕೆಲಸಗಳಿಂದ ವಂಚಿತವಾಗಿದೆ. ಕೇಂದ್ರ ಮತ್ತು ರಾಜ್ಯ ಹಾಗೂ ಗೋವಾದಲ್ಲಿ ಬಿಜೆಪಿ ಸರ್ಕಾರವಿದ್ದರೂ ಈ ಭಾಗದ ರೈತರ ಬಹುದಿನಗಳ ಕನಸಿನ ಯೋಜನೆ ಮಹಾದಾಯಿ ಜಾರಿಗೊಳ್ಳುತ್ತಿಲ್ಲ ಎಂದು ಆಪಾದನೆ ಮಾಡಿದ್ದಾರೆ.</p>.<p>ರೈತ ಸಮುದಾಯದ ಬೇಡಿಕೆಯಾದ ಮಹಾದಾಯಿ ನದಿ ಜೋಡಣೆ, ನರಗುಂದ ಪಟ್ಟಣದ ಬಡವರಿಗಾಗಿ ₹110 ಕೋಟಿ ವೆಚ್ಚದಲ್ಲಿ 2 ಸಾವಿರ ಮನೆಗಳ ನಿರ್ಮಾಣದ ಆಶ್ರಯ ಯೋಜನೆ ಅನುಷ್ಟಾನ ಹಾಗೂ ಬಿ.ಆರ್.ಯಾವಗಲ್ ಅವರು ಶಾಸಕರಿದ್ದಾಗ ನರಗುಂದ ಪಟ್ಟಣಕ್ಕೆ ಮಂಜೂರಾತಿ ನೀಡಿದ್ದ ₹58 ಕೋಟಿ ವೆಚ್ಚದ ಎಂಜಿನಿಯರಿಂಗ್ ಕಟ್ಟಡ ಕೆಲಸ ಶೀಘ್ರ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಡಿಸಿಸಿ ಅಧ್ಯಕ್ಷ ಜಿ.ಎಸ್.ಪಾಟೀಲ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ, ರಾಜು ಕಲಾಲ, ಬಸವರಾಜ ಕಡೇಮನಿ, ಉಮರ್ ಫಾರೂಕ್ ಹುಬ್ಬಳ್ಳಿ ಸೇರಿದಂತೆ ನೂರಾರು ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಮನವಿ ಸಲ್ಲಿಸಿತು.</p>.<p>ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ಮಾಜಿ ಸಚಿವ ಬಿ.ಆರ್.ಯಾವಗಲ್ಲ ಅವರ ನೇತೃತ್ವದಲ್ಲಿ ಹೊಳೆಆಲೂರಿಂದ ಗದಗ ನಗರದವರೆಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಳಿಕ ಮನವಿ ಸಲ್ಲಿಸಿದರು.</p>.<p>ರಾಜಕೀಯ ಕೇವಲ ಚುನಾವಣೆಯಲ್ಲಿ ಇರಬೇಕೇ ವಿನಹ ಅಭಿವೃದ್ಧಿ ವಿಷಯದಲ್ಲಲ್ಲ. ಪಕ್ಷ, ಜಾತಿ, ಮತ ನೋಡದೇ ಹಿಂದಿನ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಜಾರಿಗೊಳಿಸಿದ ಹಲವು ಜನಪರ ಯೋಜನೆಗಳು ನಾಲ್ಕು ವರ್ಷವಾದರೂ ಆರಂಭಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡರು ಮನವಿಯಲ್ಲಿ ದೂರಿದ್ದಾರೆ.</p>.<p>ನರಗುಂದ ಮತಕ್ಷೇತ್ರ ನಾಲ್ಕು ವರ್ಷಗಳಿಂದ ಅಭಿವೃದ್ದಿ ಕೆಲಸಗಳಿಂದ ವಂಚಿತವಾಗಿದೆ. ಕೇಂದ್ರ ಮತ್ತು ರಾಜ್ಯ ಹಾಗೂ ಗೋವಾದಲ್ಲಿ ಬಿಜೆಪಿ ಸರ್ಕಾರವಿದ್ದರೂ ಈ ಭಾಗದ ರೈತರ ಬಹುದಿನಗಳ ಕನಸಿನ ಯೋಜನೆ ಮಹಾದಾಯಿ ಜಾರಿಗೊಳ್ಳುತ್ತಿಲ್ಲ ಎಂದು ಆಪಾದನೆ ಮಾಡಿದ್ದಾರೆ.</p>.<p>ರೈತ ಸಮುದಾಯದ ಬೇಡಿಕೆಯಾದ ಮಹಾದಾಯಿ ನದಿ ಜೋಡಣೆ, ನರಗುಂದ ಪಟ್ಟಣದ ಬಡವರಿಗಾಗಿ ₹110 ಕೋಟಿ ವೆಚ್ಚದಲ್ಲಿ 2 ಸಾವಿರ ಮನೆಗಳ ನಿರ್ಮಾಣದ ಆಶ್ರಯ ಯೋಜನೆ ಅನುಷ್ಟಾನ ಹಾಗೂ ಬಿ.ಆರ್.ಯಾವಗಲ್ ಅವರು ಶಾಸಕರಿದ್ದಾಗ ನರಗುಂದ ಪಟ್ಟಣಕ್ಕೆ ಮಂಜೂರಾತಿ ನೀಡಿದ್ದ ₹58 ಕೋಟಿ ವೆಚ್ಚದ ಎಂಜಿನಿಯರಿಂಗ್ ಕಟ್ಟಡ ಕೆಲಸ ಶೀಘ್ರ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಡಿಸಿಸಿ ಅಧ್ಯಕ್ಷ ಜಿ.ಎಸ್.ಪಾಟೀಲ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ, ರಾಜು ಕಲಾಲ, ಬಸವರಾಜ ಕಡೇಮನಿ, ಉಮರ್ ಫಾರೂಕ್ ಹುಬ್ಬಳ್ಳಿ ಸೇರಿದಂತೆ ನೂರಾರು ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>