ನಂತರ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ, ಕಾರ್ಯದರ್ಶಿ ಟಿ.ಎಲ್. ದೇಸಾಯಿ ಮಾತನಾಡಿ, ‘15 ನೇ ಹಣಕಾಸು ಯೋಜನೆಯಡಿ ರಸ್ತೆ ನಿರ್ಮಾಣಕ್ಕಾಗಿ ₹ 1 ಲಕ್ಷ ಅನುದಾನದಲ್ಲಿ ಕ್ರೀಯಾಯೋಜನೆ ರೂಪಿಸಿಲಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುತ್ತೇವೆ. ರಸ್ತೆ ಒತ್ತುವರಿ ಮಾಡಿದ್ದನ್ನು ಪರಿಶೀಲಿಸಿ ಅಕ್ರಮ ಕಟ್ಟಡ ತೆರವುಗೊಳಿಸುವ ಭರವಸೆ ನೀಡಿದರು. ನಂತರ ಹಿರೇಮಠ ದಂಪತಿ ಬುಧವಾರ ಧರಣಿ ಸತ್ಯಾಗ್ರಹ ಕೈಬಿಟ್ಟರು.