<p><strong>ಲಕ್ಷ್ಮೇಶ್ವರ:</strong> ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಸರ್ವೆ ನಂ.128\ಬಿ ಈ ಜಾಗೆಯಲ್ಲಿ ಶುಕ್ರವಾರ ಗ್ರಾಮ ಪಂಚಾಯ್ತಿ ವತಿಯಿಂದ ಸಾರ್ವಜನಿಕ ಶೌಚಾಲಯಕ್ಕೆ ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದರು. ಈ ಸಂದರ್ಭದಲ್ಲಿ ಸರ್ವೆ ನಂಬರ್ನಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳು ಇಲ್ಲಿ ಶೌಚಾಲಯ ನಿರ್ಮಿಸುವುದು ಬೇಡ. ಬೇರೆ ಕಡೆ ನಿರ್ಮಿಸಬೇಕು ಎಂದು ಪಟ್ಟು ಹಿಡಿದರು.</p>.<p>ಅಧಿಕಾರಿಗಳು ಮನವೊಲಿಸಲು ಮಾಡಿದ ಪ್ರಯತ್ನಗಳು ವಿಫಲವಾದವು. ಕೊನೆಗೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಪೊಲೀಸ್ರೊಂದಿಗೆ ಸ್ಥಳಕ್ಕೆ ಆಗಮಿಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವಾಸಿಗಳ ಸಭೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ನಿವಾಸಿಗಳು ನಮ್ಮ ಓಣಿಯಲ್ಲಿ ಶೌಚಾಲಯ ನಿರ್ಮಿಸುವುದು ಬೇಡ. ರಸ್ತೆ ಬದಿಗೆ ನಿರ್ಮಿಸಿರಿ ಎಂದು ಹೇಳಿದರು.</p>.<p>‘ರಸ್ತೆ ಬದಿಗೆ ಶೌಚಾಲಯ ನಿರ್ಮಿಸಿದರೆ ಮುಂದೆ ರಸ್ತೆ ನಿರ್ಮಿಸುವಾಗ ಲೋಕೋಪಯೋಗಿ ಇಲಾಖೆಯವರು ಶೌಚಾಲಯ ಒಡೆದು ಹಾಕಬೇಕಾಗುತ್ತದೆ. ಕಾರಣ ನಾಗರಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಜಾಗೆಯಲ್ಲಿಯೇ ಶೌಚಾಲಯ ನಿರ್ಮಿಸಿದರೆ ನಿವಾಸಿಗಳಿಗೂ ಅನುಕೂಲ ಆಗುತ್ತದೆ’ ಎಂದು ತಿಳಿ ಹೇಳಿದರು.</p>.<p>ನಂತರ ನಿವಾಸಿಗಳು ಅಧಿಕಾರಿ ಮಾತಿಗೆ ಬೆಲೆ ಕೊಟ್ಟು ಅಲ್ಲಿಯೇ ಶೌಚಾಲಯ ನಿರ್ಮಿಸಲು ಅನುಮತಿ ನೀಡಿದರು. ಸಧ್ಯ ಪೊಲೀಸ್ ಸುಪರ್ದಿಯಲ್ಲಿ ಶೌಚಾಲಯದ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಯಬಾರದು ಎಂಬ ಕಾರಣಕ್ಕಾಗಿ ಪೊಲೀಸ್ ವಾಹನ ಗ್ರಾಮದಲ್ಲಿ ಬೀಡು ಬಿಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಸರ್ವೆ ನಂ.128\ಬಿ ಈ ಜಾಗೆಯಲ್ಲಿ ಶುಕ್ರವಾರ ಗ್ರಾಮ ಪಂಚಾಯ್ತಿ ವತಿಯಿಂದ ಸಾರ್ವಜನಿಕ ಶೌಚಾಲಯಕ್ಕೆ ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದರು. ಈ ಸಂದರ್ಭದಲ್ಲಿ ಸರ್ವೆ ನಂಬರ್ನಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳು ಇಲ್ಲಿ ಶೌಚಾಲಯ ನಿರ್ಮಿಸುವುದು ಬೇಡ. ಬೇರೆ ಕಡೆ ನಿರ್ಮಿಸಬೇಕು ಎಂದು ಪಟ್ಟು ಹಿಡಿದರು.</p>.<p>ಅಧಿಕಾರಿಗಳು ಮನವೊಲಿಸಲು ಮಾಡಿದ ಪ್ರಯತ್ನಗಳು ವಿಫಲವಾದವು. ಕೊನೆಗೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಪೊಲೀಸ್ರೊಂದಿಗೆ ಸ್ಥಳಕ್ಕೆ ಆಗಮಿಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವಾಸಿಗಳ ಸಭೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ನಿವಾಸಿಗಳು ನಮ್ಮ ಓಣಿಯಲ್ಲಿ ಶೌಚಾಲಯ ನಿರ್ಮಿಸುವುದು ಬೇಡ. ರಸ್ತೆ ಬದಿಗೆ ನಿರ್ಮಿಸಿರಿ ಎಂದು ಹೇಳಿದರು.</p>.<p>‘ರಸ್ತೆ ಬದಿಗೆ ಶೌಚಾಲಯ ನಿರ್ಮಿಸಿದರೆ ಮುಂದೆ ರಸ್ತೆ ನಿರ್ಮಿಸುವಾಗ ಲೋಕೋಪಯೋಗಿ ಇಲಾಖೆಯವರು ಶೌಚಾಲಯ ಒಡೆದು ಹಾಕಬೇಕಾಗುತ್ತದೆ. ಕಾರಣ ನಾಗರಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಜಾಗೆಯಲ್ಲಿಯೇ ಶೌಚಾಲಯ ನಿರ್ಮಿಸಿದರೆ ನಿವಾಸಿಗಳಿಗೂ ಅನುಕೂಲ ಆಗುತ್ತದೆ’ ಎಂದು ತಿಳಿ ಹೇಳಿದರು.</p>.<p>ನಂತರ ನಿವಾಸಿಗಳು ಅಧಿಕಾರಿ ಮಾತಿಗೆ ಬೆಲೆ ಕೊಟ್ಟು ಅಲ್ಲಿಯೇ ಶೌಚಾಲಯ ನಿರ್ಮಿಸಲು ಅನುಮತಿ ನೀಡಿದರು. ಸಧ್ಯ ಪೊಲೀಸ್ ಸುಪರ್ದಿಯಲ್ಲಿ ಶೌಚಾಲಯದ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಯಬಾರದು ಎಂಬ ಕಾರಣಕ್ಕಾಗಿ ಪೊಲೀಸ್ ವಾಹನ ಗ್ರಾಮದಲ್ಲಿ ಬೀಡು ಬಿಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>