<p><strong>ಶಿರಹಟ್ಟಿ:</strong> ಕನ್ನಡ ಚಿತ್ರರಂಗಕ್ಕೆ ಪುನೀತ್ ಕೊಡುಗೆ ಸದಾ ಸ್ಮರಣೀಯವಾಗಿದ್ದು, ಸಾಮಾಜಿಕ ಕಳಕಳಿ ಹಾಗೂ ಜೀವನ ಮೌಲ್ಯಗಳನ್ನು ಬಿಂಬಿಸುವ ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹವು ಎಂದು ಸಿಪಿಐ ವಿಕಾಸ ಲಮಾಣಿ ಹೇಳಿದರು.</p>.<p>ಪಟ್ಟಣದ ನೆಹರೂ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ನಡೆದ ಪುನೀತ್ ರಾಜ್ಕುಮಾರ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕ ಮೌಲ್ಯಗಳನ್ನು ಎತ್ತಿ ತೋರಿಸುವ ಅವರ ಚಲನಚಿತ್ರಗಳು ಮತ್ತು ಅವರ ಜೀವನ ಪ್ರತಿಯೊಬ್ಬರಿಗೂ ದಾರಿ ದೀಪ. ಸರಳ<br />ಸಜ್ಜನಿಕೆಯ ಮಾನವೀಯ ವ್ಯಕ್ತಿಯಾಗಿದ್ದ ಅವರು ಸದಾ ಸಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ನೆನಸಿಕೊಂಡರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್ ಮಾಗಡಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ವಡವಿ, ಎಚ್.ಎಂ. ದೇವಗಿರಿ ನಾಗರಾಜ ಲಕ್ಕುಂಡಿ, ಪ.ಪಂ ಸದಸ್ಯರಾದ ಮಂಜುನಾಥ್ ಘಂಟಿ, ಸಂದೀಪ ಕಪ್ಪತ್ತನವರ್, ಅಶರತಅಲಿ ಢಾಲಾಯತ, ಹೊನ್ನಪ್ಪ ಶಿರಹಟ್ಟಿ, ಮಾಬುಸಾಬ್ ಲಕ್ಷ್ಮೇಶ್ವರ, ಎಂ.ಕೆ. ಲಮಾಣಿ, ದೇವಪ್ಪ ಬಟ್ಟೂರ್, ಬಸವರಾಜ ತುಳಿ, ಕರಿಯಪ್ಪ ಕುಳಗೇರಿ, ಸಂಜು ಪೋತ್ರಜ್, ಇಂತಿಯಾಜ್ ಪಟ್ವೆಗರ್, ದೇವೇಂದ್ರ ಶಿಂಧೆ, ಕೃಷ್ಣ ಲೋಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ:</strong> ಕನ್ನಡ ಚಿತ್ರರಂಗಕ್ಕೆ ಪುನೀತ್ ಕೊಡುಗೆ ಸದಾ ಸ್ಮರಣೀಯವಾಗಿದ್ದು, ಸಾಮಾಜಿಕ ಕಳಕಳಿ ಹಾಗೂ ಜೀವನ ಮೌಲ್ಯಗಳನ್ನು ಬಿಂಬಿಸುವ ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹವು ಎಂದು ಸಿಪಿಐ ವಿಕಾಸ ಲಮಾಣಿ ಹೇಳಿದರು.</p>.<p>ಪಟ್ಟಣದ ನೆಹರೂ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ನಡೆದ ಪುನೀತ್ ರಾಜ್ಕುಮಾರ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕ ಮೌಲ್ಯಗಳನ್ನು ಎತ್ತಿ ತೋರಿಸುವ ಅವರ ಚಲನಚಿತ್ರಗಳು ಮತ್ತು ಅವರ ಜೀವನ ಪ್ರತಿಯೊಬ್ಬರಿಗೂ ದಾರಿ ದೀಪ. ಸರಳ<br />ಸಜ್ಜನಿಕೆಯ ಮಾನವೀಯ ವ್ಯಕ್ತಿಯಾಗಿದ್ದ ಅವರು ಸದಾ ಸಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ನೆನಸಿಕೊಂಡರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್ ಮಾಗಡಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ವಡವಿ, ಎಚ್.ಎಂ. ದೇವಗಿರಿ ನಾಗರಾಜ ಲಕ್ಕುಂಡಿ, ಪ.ಪಂ ಸದಸ್ಯರಾದ ಮಂಜುನಾಥ್ ಘಂಟಿ, ಸಂದೀಪ ಕಪ್ಪತ್ತನವರ್, ಅಶರತಅಲಿ ಢಾಲಾಯತ, ಹೊನ್ನಪ್ಪ ಶಿರಹಟ್ಟಿ, ಮಾಬುಸಾಬ್ ಲಕ್ಷ್ಮೇಶ್ವರ, ಎಂ.ಕೆ. ಲಮಾಣಿ, ದೇವಪ್ಪ ಬಟ್ಟೂರ್, ಬಸವರಾಜ ತುಳಿ, ಕರಿಯಪ್ಪ ಕುಳಗೇರಿ, ಸಂಜು ಪೋತ್ರಜ್, ಇಂತಿಯಾಜ್ ಪಟ್ವೆಗರ್, ದೇವೇಂದ್ರ ಶಿಂಧೆ, ಕೃಷ್ಣ ಲೋಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>