ಭಾನುವಾರ ಗದುಗಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನೋಡಿದಾಗ ಕಾಂಗ್ರೆಸ್ ಎಲ್ಲೆಡೆ ಅಸ್ತಿತ್ವ ಕಳೆದುಕೊಂಡಿರುವುದು ಗೊತ್ತಾಗುತ್ತದೆ. ಅದೇರೀತಿ, ಕರ್ನಾಟಕದಲ್ಲೂ ಕಾಂಗ್ರೆಸ್ ತನ್ನ ಅಸ್ತಿತ್ವಕ್ಕಾಗಿ ಹುಡುಕಾಟ ನಡೆಸುತ್ತಿದೆ. ಕಾಂಗ್ರೆಸ್ ಹೋರಾಟಗಳೆಲ್ಲವೂ ನಾಟಕದ ಹೋರಾಟಗಳಾಗಿದ್ದು, ಅವರು ಎಷ್ಟೇ ತಿಪ್ಪರಲಾಗ ಹಾಕಿದರೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಜನರು ನಮಗೇ ಬಹುಮತ ನೀಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.