ಗದಗ: ದಿನವಿಡೀ ಬಿಸಿಲ ಧಗೆಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆಗೆ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆ ತಂಪೆರೆಯಿತು. ನರೇಗಲ್, ಮುಳಗುಂದ, ನರಗುಂದ ಮತ್ತು ಲಕ್ಷ್ಮೇಶ್ವರ ತಾಲ್ಲೂಕಿನ ಯಳವತ್ತಿಯಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಸುರಿಯಿತು. ಮುಂಡರಗಿ, ಡಂಬಳ, ಗಜೇಂದ್ರಗಡ, ರೋಣದಲ್ಲಿ ಗುಡುಗು, ಮಿಂಚು ಸಹಿತ 1 ಗಂಟೆ ಮಳೆ ಆರ್ಭಟಿಸಿತು.