ಗದಗ–ಬೆಟಗೇರಿ ಅವಳಿ ನಗರದಲ್ಲಿ ಅರ್ಧ ಗಂಟೆ ಮಳೆ ಆರ್ಭಟಿಸಿತು. ರಭಸದ ಮಳೆಗೆ ಇಲ್ಲಿನ ಹಾತಲಗೇರಿ ನಾಕಾ, ವೆಂಕಟೇಶ ಚಿತ್ರಮಂದಿರದ ರಸ್ತೆ, ಭೂಮರೆಡ್ಡಿ ವೃತ್ತ, ಹಳೆಯ ಬಸ್ ನಿಲ್ದಾಣ ಸಮೀಪ ಚರಂಡಿ ನೀರು ರಸ್ತೆಗೆ ಉಕ್ಕಿ ಹರಿಯಿತು.ಹಳೆಯ ಬಸ್ ನಿಲ್ದಾಣದ ರಸ್ತೆಯಲ್ಲಿ, ಚಪ್ಪಲಿ ಅಂಗಡಿಯೊಂದಕ್ಕೆ ನೀರು ನುಗ್ಗಿತು.ಝೇಂಡಾ ವೃತ್ತ ಮತ್ತು ಹಳೆಯ ಜಿಲ್ಲಾಧಿಕಾರಿ ಕಚೇರಿ ವೃತ್ತವು ಜಲಾವೃತಗೊಂಡು, ದ್ವಿಚಕ್ರ ವಾಹನ ಸವಾರರು ಪರದಾಡಿದರು.ಮಳೆ ನಿಂತ ನಂತರ ರಸ್ತೆಯ ತುಂಬೆಲ್ಲಾ ಪ್ಲಾಸ್ಟಿಕ್ ತ್ಯಾಜ್ಯ ಹರಡಿಕೊಂಡಿದ್ದವು.