<p><strong>ಗದಗ:</strong> ದಿನವಿಡೀ ಬಿಸಿಲ ಧಗೆಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆಗೆ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆ ತಂಪೆರೆಯಿತು. ನರೇಗಲ್, ಮುಳಗುಂದ, ನರಗುಂದ ಮತ್ತು ಲಕ್ಷ್ಮೇಶ್ವರ ತಾಲ್ಲೂಕಿನ ಯಳವತ್ತಿಯಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಸುರಿಯಿತು. ಮುಂಡರಗಿ, ಡಂಬಳ, ಗಜೇಂದ್ರಗಡ, ರೋಣದಲ್ಲಿ ಗುಡುಗು, ಮಿಂಚು ಸಹಿತ 1 ಗಂಟೆ ಮಳೆ ಆರ್ಭಟಿಸಿತು.</p>.<p>ಕಳೆದೊಂದು ವಾರದಿಂದ ಮಳೆ ಬಿಡುವು ನೀಡಿದ್ದರಿಂದ ಜಿಲ್ಲೆಯಲ್ಲಿ ಮತ್ತೆ ಸಂಪೂರ್ಣ ಬೇಸಿಗೆಯ ವಾತಾವರಣ ಸೃಷ್ಟಿಯಾಗಿತ್ತು. ಗುರುವಾರ ಮಧ್ಯಾಹ್ನ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಸಂಜೆ 5 ಗಂಟೆ ವೇಳೆಗೆ ಆಗಸದಲ್ಲಿ ಕರಿ ಮೋಡಗಳು ದಟ್ಟೈಸಿ, ಕತ್ತಲು ಕವಿದಿದ್ದರಿಂದ ವಾಹನ ಸವಾರರು ಹೆಡ್ಲೈಟ್ ಹಾಕಿಕೊಂಡು ಸಂಚರಿಸಿದರು.</p>.<p>ಸಂಜೆ ರಭಸವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ವೆಂಕಟೇಶ ಚಿತ್ರಮಂದಿರದ ರಸ್ತೆ ಮತ್ತು ಹಾತಲಗೇರಿ ನಾಕಾದ ಬಳಿ ಚರಂಡಿ ನೀರು ಉಕ್ಕಿ ರಸ್ತೆಗೆ ಹರಿಯಿತು.ಝೇಂಡಾ ವೃತ್ತ ಮತ್ತು ಹಳೆಯ ಜಿಲ್ಲಾಧಿಕಾರಿ ಕಚೇರಿ ವೃತ್ತವು ಜಲಾವೃತಗೊಂಡು, ದ್ವಿಚಕ್ರ ವಾಹನ ಸವಾರರು ಪರದಾಡಿದರು.</p>.<p><strong>ರೈತರಲ್ಲಿ ಮೂಡಿದ ಭರವಸೆ:</strong> ಮಳೆ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಆರಂಭಕ್ಕೆ ಹಿನ್ನಡೆಯಾಗಿತ್ತು. ಈಗ ಮಳೆ ಸುರಿದಿರುವುದರಿಂದ ರೈತರಲ್ಲಿ ಭರವಸೆ ಮೂಡಿದೆ. ಇದೇ ರೀತಿ ಇನ್ನೊಂದೆರಡು ಉತ್ತಮ ಮಳೆ ಲಭಿಸಿದರೆ ಬಿತ್ತನೆ ಪ್ರಾರಂಭಿಸಬಹುದು ಎನ್ನುತ್ತಾರೆ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ದಿನವಿಡೀ ಬಿಸಿಲ ಧಗೆಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆಗೆ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆ ತಂಪೆರೆಯಿತು. ನರೇಗಲ್, ಮುಳಗುಂದ, ನರಗುಂದ ಮತ್ತು ಲಕ್ಷ್ಮೇಶ್ವರ ತಾಲ್ಲೂಕಿನ ಯಳವತ್ತಿಯಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಸುರಿಯಿತು. ಮುಂಡರಗಿ, ಡಂಬಳ, ಗಜೇಂದ್ರಗಡ, ರೋಣದಲ್ಲಿ ಗುಡುಗು, ಮಿಂಚು ಸಹಿತ 1 ಗಂಟೆ ಮಳೆ ಆರ್ಭಟಿಸಿತು.</p>.<p>ಕಳೆದೊಂದು ವಾರದಿಂದ ಮಳೆ ಬಿಡುವು ನೀಡಿದ್ದರಿಂದ ಜಿಲ್ಲೆಯಲ್ಲಿ ಮತ್ತೆ ಸಂಪೂರ್ಣ ಬೇಸಿಗೆಯ ವಾತಾವರಣ ಸೃಷ್ಟಿಯಾಗಿತ್ತು. ಗುರುವಾರ ಮಧ್ಯಾಹ್ನ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಸಂಜೆ 5 ಗಂಟೆ ವೇಳೆಗೆ ಆಗಸದಲ್ಲಿ ಕರಿ ಮೋಡಗಳು ದಟ್ಟೈಸಿ, ಕತ್ತಲು ಕವಿದಿದ್ದರಿಂದ ವಾಹನ ಸವಾರರು ಹೆಡ್ಲೈಟ್ ಹಾಕಿಕೊಂಡು ಸಂಚರಿಸಿದರು.</p>.<p>ಸಂಜೆ ರಭಸವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ವೆಂಕಟೇಶ ಚಿತ್ರಮಂದಿರದ ರಸ್ತೆ ಮತ್ತು ಹಾತಲಗೇರಿ ನಾಕಾದ ಬಳಿ ಚರಂಡಿ ನೀರು ಉಕ್ಕಿ ರಸ್ತೆಗೆ ಹರಿಯಿತು.ಝೇಂಡಾ ವೃತ್ತ ಮತ್ತು ಹಳೆಯ ಜಿಲ್ಲಾಧಿಕಾರಿ ಕಚೇರಿ ವೃತ್ತವು ಜಲಾವೃತಗೊಂಡು, ದ್ವಿಚಕ್ರ ವಾಹನ ಸವಾರರು ಪರದಾಡಿದರು.</p>.<p><strong>ರೈತರಲ್ಲಿ ಮೂಡಿದ ಭರವಸೆ:</strong> ಮಳೆ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಆರಂಭಕ್ಕೆ ಹಿನ್ನಡೆಯಾಗಿತ್ತು. ಈಗ ಮಳೆ ಸುರಿದಿರುವುದರಿಂದ ರೈತರಲ್ಲಿ ಭರವಸೆ ಮೂಡಿದೆ. ಇದೇ ರೀತಿ ಇನ್ನೊಂದೆರಡು ಉತ್ತಮ ಮಳೆ ಲಭಿಸಿದರೆ ಬಿತ್ತನೆ ಪ್ರಾರಂಭಿಸಬಹುದು ಎನ್ನುತ್ತಾರೆ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>