<p><strong>ಗದಗ: </strong>ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಉತ್ತಮ ಮಳೆ ಸುರಿಯಿತು. ಗದಗ–ಬೆಟಗೇರಿ ಅವಳಿ ನಗರದಲ್ಲಿ ಮಳೆ ಸಾಧಾರಣವಾಗಿ ಸುರಿದರೂ ಕೂಡ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p>ನಗರದಲ್ಲಿ ಮಧ್ಯಾಹ್ನ 12ಕ್ಕೆ ತುಂತುರು ಮಳೆ ಆರಂಭಗೊಂಡಿತು. ಬಳಿಕ ಬಿರುಸು ಪಡೆದುಕೊಂಡ ಮಳೆ ಅರ್ಧ ಗಂಟೆಗೂ ಹೆಚ್ಚು ಸಮಯ ಜೋರಾಗಿ ಸುರಿಯಿತು. ನಂತರ, ಬಿಡುವು ನೀಡಿತು. ಸಂಜೆಯ ನಂತರ ಮಳೆ ಬಿಟ್ಟು ಬಿಟ್ಟೂ ಸುರಿಯಿತು. ಇಡೀದಿನ ವಾತಾವರಣ ತಂಪಾಗಿತ್ತು.</p>.<p>ನಗರದ ಬಹುತೇಕ ಚರಂಡಿಗಳು ಅವ್ಯವಸ್ಥೆಯಿಂದ ಕೂಡಿವೆ. ಕಸ ತುಂಬಿಕೊಂಡಿದ್ದರಿಂದ ಎಲ್ಲ ಚರಂಡಿಗಳು ಕಟ್ಟಿಕೊಂಡಿವೆ. ಹಾಗಾಗಿ, ಮಳೆನೀರು ಸರಾಗವಾಗಿ ಹರಿಯಲು ಸಾಧ್ಯವಾಗದೇ ರಸ್ತೆ ಮೇಲೆ ಕೊಳಚೆ ನೀರು ಹರಿಯಿತು. ಮಳೆ ನಿಂತ ನಂತರ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಜೋರಾಗಿ ಸಾಗುವಾಗ ಆ ನೀರು ಪಾದಚಾರಿಗಳ ಬಟ್ಟೆಗೆ ಸಿಡಿಯಿತು. ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳೆಲ್ಲವೂ ಕೆಂಪು ನೀರಿನಿಂದ ತುಂಬಿ ಹೋಗಿದ್ದವು. ಇದರಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.</p>.<p>ನಗರದ ಕೆಲವೆಡೆ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಕಸವನ್ನೆಲ್ಲಾ ರಸ್ತೆ ಬದಿಗೆ ಎತ್ತಿ ಹಾಕಲಾಗಿದೆ. ಮಧ್ಯಾಹ್ನ ಸುರಿದ ಮಳೆಯು ಚರಂಡಿಯ ಕೊಳಕು ತ್ಯಾಜ್ಯವನ್ನೆಲ್ಲಾ ರಸ್ತೆಗೆ ತಂದು ಬಿಟ್ಟಿತ್ತು. ಇದರಿಂದಾಗಿ ಆ ಪ್ರದೇಶದ ತುಂಬ ಕೆಟ್ಟ ವಾಸನೆ ತುಂಬಿಕೊಂಡಿತ್ತು.</p>.<p>ಜಿಲ್ಲೆ ಆಗಿ ಎರಡು ದಶಕಗಳು ಕಳೆದರೂ ಮೂಲಸೌಲಭ್ಯ ಕಲ್ಪಿಸಲು ಕಾಳಜಿ ತೋರದ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತವನ್ನು ಬೈದುಕೊಂಡು ಜನತೆ ಮುಂದೆ ಸಾಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಉತ್ತಮ ಮಳೆ ಸುರಿಯಿತು. ಗದಗ–ಬೆಟಗೇರಿ ಅವಳಿ ನಗರದಲ್ಲಿ ಮಳೆ ಸಾಧಾರಣವಾಗಿ ಸುರಿದರೂ ಕೂಡ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p>ನಗರದಲ್ಲಿ ಮಧ್ಯಾಹ್ನ 12ಕ್ಕೆ ತುಂತುರು ಮಳೆ ಆರಂಭಗೊಂಡಿತು. ಬಳಿಕ ಬಿರುಸು ಪಡೆದುಕೊಂಡ ಮಳೆ ಅರ್ಧ ಗಂಟೆಗೂ ಹೆಚ್ಚು ಸಮಯ ಜೋರಾಗಿ ಸುರಿಯಿತು. ನಂತರ, ಬಿಡುವು ನೀಡಿತು. ಸಂಜೆಯ ನಂತರ ಮಳೆ ಬಿಟ್ಟು ಬಿಟ್ಟೂ ಸುರಿಯಿತು. ಇಡೀದಿನ ವಾತಾವರಣ ತಂಪಾಗಿತ್ತು.</p>.<p>ನಗರದ ಬಹುತೇಕ ಚರಂಡಿಗಳು ಅವ್ಯವಸ್ಥೆಯಿಂದ ಕೂಡಿವೆ. ಕಸ ತುಂಬಿಕೊಂಡಿದ್ದರಿಂದ ಎಲ್ಲ ಚರಂಡಿಗಳು ಕಟ್ಟಿಕೊಂಡಿವೆ. ಹಾಗಾಗಿ, ಮಳೆನೀರು ಸರಾಗವಾಗಿ ಹರಿಯಲು ಸಾಧ್ಯವಾಗದೇ ರಸ್ತೆ ಮೇಲೆ ಕೊಳಚೆ ನೀರು ಹರಿಯಿತು. ಮಳೆ ನಿಂತ ನಂತರ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಜೋರಾಗಿ ಸಾಗುವಾಗ ಆ ನೀರು ಪಾದಚಾರಿಗಳ ಬಟ್ಟೆಗೆ ಸಿಡಿಯಿತು. ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳೆಲ್ಲವೂ ಕೆಂಪು ನೀರಿನಿಂದ ತುಂಬಿ ಹೋಗಿದ್ದವು. ಇದರಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.</p>.<p>ನಗರದ ಕೆಲವೆಡೆ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಕಸವನ್ನೆಲ್ಲಾ ರಸ್ತೆ ಬದಿಗೆ ಎತ್ತಿ ಹಾಕಲಾಗಿದೆ. ಮಧ್ಯಾಹ್ನ ಸುರಿದ ಮಳೆಯು ಚರಂಡಿಯ ಕೊಳಕು ತ್ಯಾಜ್ಯವನ್ನೆಲ್ಲಾ ರಸ್ತೆಗೆ ತಂದು ಬಿಟ್ಟಿತ್ತು. ಇದರಿಂದಾಗಿ ಆ ಪ್ರದೇಶದ ತುಂಬ ಕೆಟ್ಟ ವಾಸನೆ ತುಂಬಿಕೊಂಡಿತ್ತು.</p>.<p>ಜಿಲ್ಲೆ ಆಗಿ ಎರಡು ದಶಕಗಳು ಕಳೆದರೂ ಮೂಲಸೌಲಭ್ಯ ಕಲ್ಪಿಸಲು ಕಾಳಜಿ ತೋರದ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತವನ್ನು ಬೈದುಕೊಂಡು ಜನತೆ ಮುಂದೆ ಸಾಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>