ಲಕ್ಷ್ಮೇಶ್ವರ: ಸತತ ಬರಗಾಲಕ್ಕೆ ತುತ್ತಾಗುತ್ತಿದ್ದ ತಾಲ್ಲೂಕಿನಲ್ಲಿ ಹರಿಯುವ ಹಳ್ಳಗಳಿಗೆ ಚೆಕ್ಡ್ಯಾಂಗಳನ್ನು ನಿರ್ಮಿಸಿದ ಫಲವಾಗಿ, ಅಂತರ್ಜಲ ವೃದ್ಧಿಸಿದೆ, ನೀರಿನ ಬವಣೆಯೂ ನೀಗಿದೆ. ಈ ವರ್ಷದ ಬೇಸಿಗೆಯಲ್ಲಿ ತಾಲ್ಲೂಕಿನಲ್ಲಿ ಎಲ್ಲೂ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ. ಸಾವಿರಾರು ಕೊಳವೆ ಬಾವಿಗಳು ಮರುಪೂರಣಗೊಂಡು ಸಮೃದ್ಧ ನೀರಿನ ಇಳುವರಿ ಕೊಡುತ್ತಿವೆ. ಇದಕ್ಕೆಲ್ಲಾ ಕಾರಣ, ಈ ಚೆಕ್ಡ್ಯಾಂಗಳು.