‘ಮಳೆನೀರು ಸಂರಕ್ಷಣೆ, ನದಿಗಳ, ಪುರಾತನ ಕೆರೆಗಳ ಪುನರುಜ್ಜೀವನ, ಕೃಷಿ ಹೊಂಡಗಳ ನಿರ್ಮಾಣ ಸೇರಿದಂತೆ ಜಲಮೂಲ ಸಂರಕ್ಷಣೆಯ ನಾಲ್ಕು ಪ್ರಮುಖ ಅಂಶಗಳನ್ನು ಒಳಗೊಂಡ ಪ್ರಸ್ತಾವವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಸರ್ಕಾರ ₹900 ಕೋಟಿ ಅನುದಾನದಲ್ಲಿ ಇದನ್ನು ಜಾರಿಗೊಳಿಸಿದೆ. ಚುನಾವಣೆ ನಂತರ ಈ ಕೆಲಸಗಳು ಚುರುಕು ಪಡೆಯುವ ವಿಶ್ವಾಸ ಇದೆ’ ಎಂದರು.