ಕೃಷಿ ಸಹಾಯಕ ಅಧಿಕಾರಿ ಎಫ್.ಸಿ. ಗುರಿಕಾರ ರೈತ ನಿಂಗಪ್ಪ ಕಬಾಡಿ ಅವರ ಹೊಲಕ್ಕೆ ಭೇಟಿ ನೀಡಿ ಬೆಳೆ ಪರಿಶೀಲಿಸಿದರು. ‘ಈ ಕುರಿತು ಕೃಷಿ ಜಾಗೃತ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೀಟನಾಶಕ ಸಿಂಪರಣೆ ಮಾಡಿದ ಕಡಲೆ ಬೆಳೆ ಸ್ಯಾಂಪಲ್ ಅನ್ನು ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ’ ಎಂದು ತಿಳಿಸಿದರು.