ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜನಾರ್ಧನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಇದೆ.ಈ ಹಿನ್ನೆಲೆಯಲ್ಲಿ ಅವರು ಗದುಗಿನಲ್ಲಿ ಶಾಸಕ ಬಿ.ಶ್ರೀರಾಮಲು ಒಡೆತನದ ನಿವಾಸದಲ್ಲಿ ವಾಸಿಸುತ್ತಿದ್ದು, ಬಳ್ಳಾರಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿ, ಗದುಗಿನಲ್ಲಿ ಸೇರ್ಪಡೆ ಮಾಡಲು ಮಾ.15ರಂದು ಅರ್ಜಿ ಸಲ್ಲಿಸಿದ್ದರು.ದಾಖಲೆಗಳನ್ನು ಪರಿಶೀಲಿಸಿ, ಮತದಾರರ ಗುರುತಿನ ಚೀಟಿ ಕೊಡುವುದಾಗಿ ಹೇಳಿದ್ದ ಅಧಿಕಾರಿಗಳು, ಕೊನೆಯ ಕ್ಷಣದಲ್ಲಿ, ಏ.4ರಂದು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಇದರ ಹಿಂದೆ ಕಾಣದ ಕೈಗಳ ಹಾಗೂ ರಾಜಕೀಯ ಕೈವಾಡ ಇದೆ’ ಎಂದು ಆರೋಪಿಸಿದರು.