<p><strong>ಮುಂಡರಗಿ</strong>: ‘ಹನಿ ನೀರಾವರಿ ಪದ್ಧತಿಯನ್ನು ಗುತ್ತಿಗೆದಾರರು ಅಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಅಂತಹ ಗುತ್ತಿಗೆದಾರರನ್ನು ಸರ್ಕಾರ ಕಪ್ಪುಪಟ್ಟಿಗೆ ಸೇರಿಸಬೇಕು. ಹನಿ ನೀರಾವರಿ ಪದ್ಧತಿ ಬದಲು ರೈತರ ಜಮೀನಿಗೆ ಕಾಲುವೆ ಮೂಲಕ ನೀರು ಒದಗಿಸಬೇಕು’ ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಶಿವಾನಂದ ಇಟಗಿ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ನೀರಾವರಿ ಮತ್ತು ಸಕ್ಕರೆ ಕಾರ್ಖಾನೆಯ ವಿವಿಧ ಅಧಿಕಾರಿಗಳು ಹಾಗೂ ರೈತರು ಮಂಗಳವಾರ ಹಮ್ಮಿಕೊಂಡಿದ್ದ ರೈತರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗುತ್ತಿಗೆದಾರರು ರೈತರ ಜಮೀನಿನಲ್ಲಿ ಮನ ಬಂದಂತೆ ಹನಿ ನೀರಾವರಿ ಸಲಕರಣೆಗಳನ್ನು ಜೋಡಿಸುತ್ತಿದ್ದಾರೆ. ಹನಿ ನೀರಾವರಿ ಜೋಡನೆಯಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅಕ್ರಮ ನಡೆಸುತ್ತಿದ್ದಾರೆ’ ಎಂದು ರೈತರು ಆರೋಪಿಸಿದರು.</p>.<p>ತಾಲ್ಲೂಕಿನ ಗಂಗಾಪುರ ಗ್ರಾಮದಲ್ಲಿರುವ ವಿಜಯ ನಗರ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬು ಖರೀದಿಯಲ್ಲಿ ತಾರತಮ್ಯ ಎಸಗುತ್ತಿದ್ದಾರೆ. ಕೊಪ್ಪಳ ಭಾಗದ ರೈತರ ಪ್ರತಿ ಟನ್ ಕಬ್ಬಿಗೆ ₹2,800 ರೂಪಾಯಿ ನೀಡುತ್ತಿದ್ದು, ಸ್ಥಳಿಯ ರೈತರ ಕಬ್ಬಿಗೆ ₹ 2,500 ನೀಡುತ್ತಿದ್ದಾರೆ. ಇಲ್ಲಿಯ ರೈತರಿಗೂ ಪ್ರತಿ ಟನ್ ಕಬ್ಬಿಗೆ ₹2,800 ರೂಪಾಯಿ ದರ ನೀಡದಿದ್ದರೆ ಸಕ್ಕರೆ ಕಾರ್ಖಾನೆ ಬಂದ್ ಮಾಡಲಾಗುವುದು ಎಂದು ರೈತರು ಎಚ್ಚರಿಸಿದರು.</p>.<p>ಸಕ್ಕರೆ ಕಾರ್ಖಾನೆಯ ಅಧಿಕಾರಿ ಅಂಬಿಗರ ಬಸವರಾಜ ಮಾತನಾಡಿ, ‘ಎಲ್ಲ ರೈತರಿಗೂ ಒಂದೆ ದರ ನಿಗದಿಗೊಳಿಸಿದ್ದು, ತಾರತಮ್ಯ ಎಸಗಿಲ್ಲ’ ಎಂದು ಸಮಜಾಯಿಸಿ ನೀಡಿದರು.</p>.<p>ಬೆಳೆ ಸಾಲ ಪಡೆದುಕೊಳ್ಳಲು ಬ್ಯಾಂಕ್ ಅಧಿಕಾರಿಗಳು ಹಲವು ದಾಖಲೆಗಳನ್ನು ಕೇಳುತ್ತಿದ್ದು, ಮೊದಲಿನಂತೆ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ರೈತರಿಂದ ಬೆಳೆ ಸಾಲದ ಹಣ ಮರುಪಾವತಿಯ ಕ್ರಮವನ್ನು ಸರಳಗೊಳಿಸಬೇಕು ಎಂದು ರೈತರು ಮನವಿ ಮಾಡಿಕೊಂಡರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿ ಸಂತೋಷ.ಎಂ.ವಿ. ಮಾತನಾಡಿ, ‘ಹಲವು ಗ್ರಾಮೀಣ ಬ್ಯಾಂಕ್ಗಳನ್ನು ಒಂದೇ ಬ್ಯಾಂಕಿನಲ್ಲಿ ವಿಲೀನಗೊಳಿಸಲಾಗಿದೆ. ಬ್ಯಾಂಕ್ ಅಡಿಟ್ ಹಾಗೂ ತಾಂತ್ರಿಕ ಕಾರಣಗಳಿಗಾಗಿ ರೈತರಿಂದ ಎಲ್ಲ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್ ಅಧ್ಯಕ್ಷತೆ ವಹಿಸಿದ್ದರು. ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಕಂಬಳಿ, ರೈತ ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಶರಣಪ್ಪ ಚನ್ನಳ್ಳಿ, ಈರಣ್ಣ ಗಡಾದ, ಅಶ್ವಿನಿ ಬೀಡನಾಳ ಇದ್ದರು.</p>.<p><strong>ಕಬ್ಬು ದರ ತಾರತಮ್ಯ ಕುರಿತಂತೆ ರೈತರು ಅಗತ್ಯ ದಾಖಲೆಗಳೊಂದಿಗೆ ಸಕ್ಕರೆ ಕಾರ್ಖಾನೆಯ ವಿರುದ್ಧ ಪ್ರಕರಣ ದಾಖಲಿಸಬಹುದು</strong></p><p><strong>- ಎರ್ರಿಸ್ವಾಮಿ.ಪಿ.ಎಸ್ ತಹಶೀಲ್ದಾರ್</strong> </p>.<p><strong>ಯೋಜನೆ ಸದುಪಯೋಗಕ್ಕೆ ಸಲಹೆ </strong></p><p>‘ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಜಾರಿಗೆ ತಂದಿದ್ದು ಸಾರ್ವಜನಿಕರು ವಾರ್ಷಿಕ ₹ 20 ತುಂಬಬೇಕು. ಪ್ರಧಾನ ಮಂತ್ರಿ ಜೀವನಜ್ಯೋತಿ ಯೋಜನೆಯಲ್ಲಿ ವಾರ್ಷಿಕ ₹ 456 ತುಂಬಬೇಕು. ಯೋಜನೆಯಲ್ಲಿ ಪಾಲ್ಗೊಂಡವರಿಗೆ ಅಪಘಾತ ಹಾಗೂ ಮರಣ ನಂತರ ಗರಿಷ್ಟ ಹಣ ದೊರೆಯಲಿದೆ. ಪಿಂಚನಿ ಯೋಜನೆಯು ಲಾಭದಾಯಕವಾಗಿದ್ದು ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿ ಸಂತೋಷ.ಎಂ.ವಿ. ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ಹನಿ ನೀರಾವರಿ ಪದ್ಧತಿಯನ್ನು ಗುತ್ತಿಗೆದಾರರು ಅಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಅಂತಹ ಗುತ್ತಿಗೆದಾರರನ್ನು ಸರ್ಕಾರ ಕಪ್ಪುಪಟ್ಟಿಗೆ ಸೇರಿಸಬೇಕು. ಹನಿ ನೀರಾವರಿ ಪದ್ಧತಿ ಬದಲು ರೈತರ ಜಮೀನಿಗೆ ಕಾಲುವೆ ಮೂಲಕ ನೀರು ಒದಗಿಸಬೇಕು’ ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಶಿವಾನಂದ ಇಟಗಿ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ನೀರಾವರಿ ಮತ್ತು ಸಕ್ಕರೆ ಕಾರ್ಖಾನೆಯ ವಿವಿಧ ಅಧಿಕಾರಿಗಳು ಹಾಗೂ ರೈತರು ಮಂಗಳವಾರ ಹಮ್ಮಿಕೊಂಡಿದ್ದ ರೈತರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗುತ್ತಿಗೆದಾರರು ರೈತರ ಜಮೀನಿನಲ್ಲಿ ಮನ ಬಂದಂತೆ ಹನಿ ನೀರಾವರಿ ಸಲಕರಣೆಗಳನ್ನು ಜೋಡಿಸುತ್ತಿದ್ದಾರೆ. ಹನಿ ನೀರಾವರಿ ಜೋಡನೆಯಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅಕ್ರಮ ನಡೆಸುತ್ತಿದ್ದಾರೆ’ ಎಂದು ರೈತರು ಆರೋಪಿಸಿದರು.</p>.<p>ತಾಲ್ಲೂಕಿನ ಗಂಗಾಪುರ ಗ್ರಾಮದಲ್ಲಿರುವ ವಿಜಯ ನಗರ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬು ಖರೀದಿಯಲ್ಲಿ ತಾರತಮ್ಯ ಎಸಗುತ್ತಿದ್ದಾರೆ. ಕೊಪ್ಪಳ ಭಾಗದ ರೈತರ ಪ್ರತಿ ಟನ್ ಕಬ್ಬಿಗೆ ₹2,800 ರೂಪಾಯಿ ನೀಡುತ್ತಿದ್ದು, ಸ್ಥಳಿಯ ರೈತರ ಕಬ್ಬಿಗೆ ₹ 2,500 ನೀಡುತ್ತಿದ್ದಾರೆ. ಇಲ್ಲಿಯ ರೈತರಿಗೂ ಪ್ರತಿ ಟನ್ ಕಬ್ಬಿಗೆ ₹2,800 ರೂಪಾಯಿ ದರ ನೀಡದಿದ್ದರೆ ಸಕ್ಕರೆ ಕಾರ್ಖಾನೆ ಬಂದ್ ಮಾಡಲಾಗುವುದು ಎಂದು ರೈತರು ಎಚ್ಚರಿಸಿದರು.</p>.<p>ಸಕ್ಕರೆ ಕಾರ್ಖಾನೆಯ ಅಧಿಕಾರಿ ಅಂಬಿಗರ ಬಸವರಾಜ ಮಾತನಾಡಿ, ‘ಎಲ್ಲ ರೈತರಿಗೂ ಒಂದೆ ದರ ನಿಗದಿಗೊಳಿಸಿದ್ದು, ತಾರತಮ್ಯ ಎಸಗಿಲ್ಲ’ ಎಂದು ಸಮಜಾಯಿಸಿ ನೀಡಿದರು.</p>.<p>ಬೆಳೆ ಸಾಲ ಪಡೆದುಕೊಳ್ಳಲು ಬ್ಯಾಂಕ್ ಅಧಿಕಾರಿಗಳು ಹಲವು ದಾಖಲೆಗಳನ್ನು ಕೇಳುತ್ತಿದ್ದು, ಮೊದಲಿನಂತೆ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ರೈತರಿಂದ ಬೆಳೆ ಸಾಲದ ಹಣ ಮರುಪಾವತಿಯ ಕ್ರಮವನ್ನು ಸರಳಗೊಳಿಸಬೇಕು ಎಂದು ರೈತರು ಮನವಿ ಮಾಡಿಕೊಂಡರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿ ಸಂತೋಷ.ಎಂ.ವಿ. ಮಾತನಾಡಿ, ‘ಹಲವು ಗ್ರಾಮೀಣ ಬ್ಯಾಂಕ್ಗಳನ್ನು ಒಂದೇ ಬ್ಯಾಂಕಿನಲ್ಲಿ ವಿಲೀನಗೊಳಿಸಲಾಗಿದೆ. ಬ್ಯಾಂಕ್ ಅಡಿಟ್ ಹಾಗೂ ತಾಂತ್ರಿಕ ಕಾರಣಗಳಿಗಾಗಿ ರೈತರಿಂದ ಎಲ್ಲ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್ ಅಧ್ಯಕ್ಷತೆ ವಹಿಸಿದ್ದರು. ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಕಂಬಳಿ, ರೈತ ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಶರಣಪ್ಪ ಚನ್ನಳ್ಳಿ, ಈರಣ್ಣ ಗಡಾದ, ಅಶ್ವಿನಿ ಬೀಡನಾಳ ಇದ್ದರು.</p>.<p><strong>ಕಬ್ಬು ದರ ತಾರತಮ್ಯ ಕುರಿತಂತೆ ರೈತರು ಅಗತ್ಯ ದಾಖಲೆಗಳೊಂದಿಗೆ ಸಕ್ಕರೆ ಕಾರ್ಖಾನೆಯ ವಿರುದ್ಧ ಪ್ರಕರಣ ದಾಖಲಿಸಬಹುದು</strong></p><p><strong>- ಎರ್ರಿಸ್ವಾಮಿ.ಪಿ.ಎಸ್ ತಹಶೀಲ್ದಾರ್</strong> </p>.<p><strong>ಯೋಜನೆ ಸದುಪಯೋಗಕ್ಕೆ ಸಲಹೆ </strong></p><p>‘ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಜಾರಿಗೆ ತಂದಿದ್ದು ಸಾರ್ವಜನಿಕರು ವಾರ್ಷಿಕ ₹ 20 ತುಂಬಬೇಕು. ಪ್ರಧಾನ ಮಂತ್ರಿ ಜೀವನಜ್ಯೋತಿ ಯೋಜನೆಯಲ್ಲಿ ವಾರ್ಷಿಕ ₹ 456 ತುಂಬಬೇಕು. ಯೋಜನೆಯಲ್ಲಿ ಪಾಲ್ಗೊಂಡವರಿಗೆ ಅಪಘಾತ ಹಾಗೂ ಮರಣ ನಂತರ ಗರಿಷ್ಟ ಹಣ ದೊರೆಯಲಿದೆ. ಪಿಂಚನಿ ಯೋಜನೆಯು ಲಾಭದಾಯಕವಾಗಿದ್ದು ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿ ಸಂತೋಷ.ಎಂ.ವಿ. ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>