<p><strong>ಗದಗ:</strong> ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ಅನುಷ್ಟಾನಗೊಳಿಸಲು ಆಗ್ರಹಿಸಿ ಮುಂಡರಗಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆಯ ಸದಸ್ಯರು ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ವೇದಿಕೆಯ ಸಂಚಾಲಕ ಬಸವರಾಜ ಯಲ್ಲಪ್ಪ ನವಲಗುಂದ, ‘2014ರ ರೈಲ್ವೆ ಮುಂಗಡ ಪತ್ರದಲ್ಲಿ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ಪರಿಷ್ಕೃತ ಪಟ್ಟಿಯಲ್ಲಿ ಮಂಜೂರಾಗಿ 10 ವರ್ಷಗಳು ಕಳೆದಿವೆ. 2019ರಲ್ಲಿ ಪರಿಷ್ಕೃತ ಸರ್ವೆ ಮಾಡಿ ಗದಗದಿಂದ ಹರಪನಹಳ್ಳಿವರೆಗೂ (94 ಕಿಮೀ) ರೈಲು ಮಾರ್ಗ ನಿರ್ಮಾಣಕ್ಕೆ ಅಂದಾಜು ವೆಚ್ಚ ₹813.14 ಕೋಟಿ ಬೇಕು ಎಂದು ಹೇಳಿ ಕಾಯ್ದಿರಿಸಿ ಐದು ವರ್ಷಗಳು ಗತಿಸಿ ಹೋಗಿವೆ’ ಎಂದು ಹೇಳಿದರು.</p>.<p>‘ನಮ್ಮ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ರೈಲ್ವೆ ಯೋಜನೆಯನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಒಂದು ವರ್ಷ ಗತಿಸಿ ಹೋಗಿದೆ. ಆದರೂ ಸರ್ಕಾರಗಳು ಈ ಬೃಹತ್ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಳ್ಳದೇ ಮೀನಮೇಷ ಎಣಿಸುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಮುಂಡರಗಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಉಗ್ರವಾಗಿ ಖಂಡಿಸುತ್ತದೆ’ ಎಂದು ಹೇಳಿದರು.</p>.<p>ಮಂಜುನಾಥ ಹುಬ್ಬಳ್ಳಿ, ಶರಣಪ್ಪ ಹೊಂಬಳಗಟ್ಟಿ, ರವಿ ಪಾಟೀಲ, ಬಸಪ್ಪ ತಿಮ್ಮಪ್ಪ ವಡ್ಡರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ಅನುಷ್ಟಾನಗೊಳಿಸಲು ಆಗ್ರಹಿಸಿ ಮುಂಡರಗಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆಯ ಸದಸ್ಯರು ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ವೇದಿಕೆಯ ಸಂಚಾಲಕ ಬಸವರಾಜ ಯಲ್ಲಪ್ಪ ನವಲಗುಂದ, ‘2014ರ ರೈಲ್ವೆ ಮುಂಗಡ ಪತ್ರದಲ್ಲಿ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ಪರಿಷ್ಕೃತ ಪಟ್ಟಿಯಲ್ಲಿ ಮಂಜೂರಾಗಿ 10 ವರ್ಷಗಳು ಕಳೆದಿವೆ. 2019ರಲ್ಲಿ ಪರಿಷ್ಕೃತ ಸರ್ವೆ ಮಾಡಿ ಗದಗದಿಂದ ಹರಪನಹಳ್ಳಿವರೆಗೂ (94 ಕಿಮೀ) ರೈಲು ಮಾರ್ಗ ನಿರ್ಮಾಣಕ್ಕೆ ಅಂದಾಜು ವೆಚ್ಚ ₹813.14 ಕೋಟಿ ಬೇಕು ಎಂದು ಹೇಳಿ ಕಾಯ್ದಿರಿಸಿ ಐದು ವರ್ಷಗಳು ಗತಿಸಿ ಹೋಗಿವೆ’ ಎಂದು ಹೇಳಿದರು.</p>.<p>‘ನಮ್ಮ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ರೈಲ್ವೆ ಯೋಜನೆಯನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಒಂದು ವರ್ಷ ಗತಿಸಿ ಹೋಗಿದೆ. ಆದರೂ ಸರ್ಕಾರಗಳು ಈ ಬೃಹತ್ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಳ್ಳದೇ ಮೀನಮೇಷ ಎಣಿಸುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಮುಂಡರಗಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಉಗ್ರವಾಗಿ ಖಂಡಿಸುತ್ತದೆ’ ಎಂದು ಹೇಳಿದರು.</p>.<p>ಮಂಜುನಾಥ ಹುಬ್ಬಳ್ಳಿ, ಶರಣಪ್ಪ ಹೊಂಬಳಗಟ್ಟಿ, ರವಿ ಪಾಟೀಲ, ಬಸಪ್ಪ ತಿಮ್ಮಪ್ಪ ವಡ್ಡರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>