<p><strong>ಗದಗ:</strong> ಒಳಮೀಸಲಾತಿಯಲ್ಲಿ ಅವೈಜ್ಞಾನಿಕ ವರ್ಗೀಕರಣ ವಿರೋಧಿಸಿ ನಾಯಕ, ಡಾವಸಾಣ, ಕಾರಭಾರಿ ಹಾಗೂ ಪಂಚರ ನೇತೃತ್ವದ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರವೂ ಮುಂದುವರಿಯಿತು. </p>.<p>ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲಾಧಿಕಾರಿ ಕಚೇರಿ ಸೋಮವಾರದಿಂದ ಅಹೋರಾತ್ರಿ ಧರಣಿ ಕೈಂಗೊಂಡಿದ್ದಾರೆ. ಧರಣಿಯ ಎರಡನೇ ದಿನವಾದ ಮಂಗಳವಾರ, ತಮ್ಮ ಪ್ರತಿಭಟನೆಯೊಂದಿಗೆ ಸೀಗೆ ಹುಣ್ಣಿಮೆ ಹಬ್ಬವನ್ನೂ ಆಚರಣೆ ಮಾಡಿ ಗಮನ ಸೆಳೆದರು.</p>.<p>ಉತ್ತರ ಕರ್ನಾಟಕದಲ್ಲಿ ರೈತರು ತಮ್ಮ ಜಮೀನಿನಲ್ಲಿ ಸಂಭ್ರಮದಿಂದ ಆಚರಿಸುವ ಸೀಗೆ ಹುಣ್ಣಿಮೆಯನ್ನು ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಮುಂದಿನ ರಸ್ತೆಯಲ್ಲೇ ಆಚರಿಸಿದರು. ಪಾಂಡವರ ರೂಪದಲ್ಲಿ ಐದು ಕಲ್ಲುಗಳನ್ನು ಪ್ರತಿಷ್ಠಾಪಿಸಿ, ‘ಹುಲ್ಲಿಲಿಗೊ, ಸಿಲ್ಲಿಲಿಗೊ, ಸಲಾಮ್ರಿಗಳ’ ಎನ್ನುತ್ತ ನೈವೇದ್ಯ ಅರ್ಪಿಸಿದರು.</p>.<p>ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣವನ್ನು ಸರ್ಕಾರ ಕೈಬಿಡುವವರೆಗೆ ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು.</p>.<p>ಬಂಜಾರ ಹಕ್ಕು ಸಂರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಾಂತ ಅಂಗಡಿ, ಸಮುದಾಯದ ಮುಖಂಡರಾದ ಕೆ.ಸಿ.ನದಾಫ್, ಪರಮೇಶ ನಾಯಕ, ಪಾಂಡು ಚವ್ಹಾಣ, ಧನುರಾಂ ತಂಬೂರಿ, ತುಕಾರಾಮ ಲಮಾಣಿ, ಟಿ.ಡಿ.ಪೂಜಾರ, ಭೋಜಪ್ಪ ಲಮಾಣಿ, ಅಂಬವ್ವ ನಾಯಕ, ಸೋಮಪ್ಪ ಲಮಾಣಿ, ಸಕ್ರವ್ವ ಲಮಾಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಒಳಮೀಸಲಾತಿಯಲ್ಲಿ ಅವೈಜ್ಞಾನಿಕ ವರ್ಗೀಕರಣ ವಿರೋಧಿಸಿ ನಾಯಕ, ಡಾವಸಾಣ, ಕಾರಭಾರಿ ಹಾಗೂ ಪಂಚರ ನೇತೃತ್ವದ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರವೂ ಮುಂದುವರಿಯಿತು. </p>.<p>ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲಾಧಿಕಾರಿ ಕಚೇರಿ ಸೋಮವಾರದಿಂದ ಅಹೋರಾತ್ರಿ ಧರಣಿ ಕೈಂಗೊಂಡಿದ್ದಾರೆ. ಧರಣಿಯ ಎರಡನೇ ದಿನವಾದ ಮಂಗಳವಾರ, ತಮ್ಮ ಪ್ರತಿಭಟನೆಯೊಂದಿಗೆ ಸೀಗೆ ಹುಣ್ಣಿಮೆ ಹಬ್ಬವನ್ನೂ ಆಚರಣೆ ಮಾಡಿ ಗಮನ ಸೆಳೆದರು.</p>.<p>ಉತ್ತರ ಕರ್ನಾಟಕದಲ್ಲಿ ರೈತರು ತಮ್ಮ ಜಮೀನಿನಲ್ಲಿ ಸಂಭ್ರಮದಿಂದ ಆಚರಿಸುವ ಸೀಗೆ ಹುಣ್ಣಿಮೆಯನ್ನು ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಮುಂದಿನ ರಸ್ತೆಯಲ್ಲೇ ಆಚರಿಸಿದರು. ಪಾಂಡವರ ರೂಪದಲ್ಲಿ ಐದು ಕಲ್ಲುಗಳನ್ನು ಪ್ರತಿಷ್ಠಾಪಿಸಿ, ‘ಹುಲ್ಲಿಲಿಗೊ, ಸಿಲ್ಲಿಲಿಗೊ, ಸಲಾಮ್ರಿಗಳ’ ಎನ್ನುತ್ತ ನೈವೇದ್ಯ ಅರ್ಪಿಸಿದರು.</p>.<p>ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣವನ್ನು ಸರ್ಕಾರ ಕೈಬಿಡುವವರೆಗೆ ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು.</p>.<p>ಬಂಜಾರ ಹಕ್ಕು ಸಂರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಾಂತ ಅಂಗಡಿ, ಸಮುದಾಯದ ಮುಖಂಡರಾದ ಕೆ.ಸಿ.ನದಾಫ್, ಪರಮೇಶ ನಾಯಕ, ಪಾಂಡು ಚವ್ಹಾಣ, ಧನುರಾಂ ತಂಬೂರಿ, ತುಕಾರಾಮ ಲಮಾಣಿ, ಟಿ.ಡಿ.ಪೂಜಾರ, ಭೋಜಪ್ಪ ಲಮಾಣಿ, ಅಂಬವ್ವ ನಾಯಕ, ಸೋಮಪ್ಪ ಲಮಾಣಿ, ಸಕ್ರವ್ವ ಲಮಾಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>