ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಗೌರವ ಘಟಕ ನಿರ್ಮಾಣಕ್ಕೆ ಕ್ರಮ; ಸಚಿವ ಬಿ.ಎ.ಬಸವರಾಜ

Last Updated 7 ಸೆಪ್ಟೆಂಬರ್ 2020, 14:48 IST
ಅಕ್ಷರ ಗಾತ್ರ

ಗದಗ: ‘ತಳ ಸಮುದಾಯದವರ ಅನುಕೂಲಕ್ಕಾಗಿ ರಾಜ್ಯದ ಎಲ್ಲೆಡೆ ಗೌರವ ಘಟಕ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವ ಬಿ.ಎ.ಬಸವರಾಜ ಹೇಳಿದರು.

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಇಂದಿಗೂ ಎಷ್ಟೋ ಮಂದಿ ಬಡವರಿಗೆ ಕನಿಷ್ಠ ಸೌಕರ್ಯಗಳು ಸಿಗುತ್ತಿಲ್ಲ. ಹಾಗಾಗಿ ಶೌಚಾಲಯ, ಸ್ನಾನಗೃಹ, ವಾಷಿಂಗ್‌ ಮಷಿನ್, ಹೇರ್ ಡ್ರಯರ್‌ನಂತಹ ಸೌಲಭ್ಯಗಳನ್ನು ಬಡವರಿಗೆ ಒಂದೇ ಸೂರಿನಡಿ ಒದಗಿಸುವ ಗೌರವ ಘಟಕ ತೆರೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುವ ಬಡಾವಣೆಗಳಲ್ಲಿ ಮಾಧ್ಯಮದವರಿಗೆ ಶೇ 5ರಷ್ಟು ನಿವೇಶನಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT